ಕಾಂತಾರ-2 ದೈವೇಚ್ಛೆಗೆ ಬಿಟ್ಟದ್ದು: ನಟ,ನಿರ್ದೇಶಕ ರಿಷಬ್‌ ಶೆಟ್ಟಿ


Team Udayavani, Oct 6, 2022, 7:35 AM IST

ಕಾಂತಾರ-2 ದೈವೇಚ್ಛೆಗೆ ಬಿಟ್ಟದ್ದು: ನಟ,ನಿರ್ದೇಶಕ ರಿಷಬ್‌ ಶೆಟ್ಟಿ

ಮಂಗಳೂರು: ಕಾಂತಾರ ಚಲನಚಿತ್ರ ಅದ್ಭುತ ಯಶಸ್ಸು ಕಾಣುತ್ತಿರುವಂತೆಯೇ ಇದೀಗ ಕಾಂತಾರ-2 ಬರಲಿದೆಯೇ ಎಂಬ ಕುತೂಹಲ ಚಿತ್ರ ಪ್ರೇಮಿಗಳನ್ನು ಕಾಡುತ್ತಿದೆ. ಈ ಕುತೂಹಲವನ್ನು ಹಾಗೆಯೇ ಉಳಿಸಿಕೊಂಡಿರುವ ಚಿತ್ರದ ನಾಯಕ-ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಇದನ್ನು ದೈವೇಚ್ಛೆಗೆ ಬಿಟ್ಟಿದ್ದೇನೆ ಎಂದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂತಾರ-2 ಬರಲಿದೆಯೇ?’ ಎಂಬ ಸುದ್ದಿಗಾರರ ಪ್ರಶ್ನೆಗೆ, “ಈಗಷ್ಟೇ ಸಿನೆಮಾ ಬಂದಿದೆ. ರಾಜ್ಯ ಮಾತ್ರವಲ್ಲದೆ ದೇಶ ವಿದೇಶ ಗಳಲ್ಲೂ ಅದ್ಭುತ ಸ್ಪಂದನೆ ವ್ಯಕ್ತವಾ ಗಿದೆ. “ಕಾಂತಾರ-2’ರ ಬಗ್ಗೆ ಈಗಲೇ ಏನನ್ನೂ ಹೇಳಲಾರೆ. ದೈವದ ಇಚ್ಛೆ ಇದ್ದರೆ ಬರಬಹುದು ಎನ್ನುವ ಮೂಲಕ ಸಾಧ್ಯತೆಗಳನ್ನು ತೆರೆದಿಟ್ಟಿದ್ದಾರೆ.

ಕಾಂತಾರ ಎಂದರೆ ನಿಗೂಢ ಕಾಡು. ಕಾಂತಾರ ಸಿನೆಮಾ ಒಂದು ಸವಾಲು ಆಗಿತ್ತು. ನಾಡಿನ ನಂಬಿಕೆ, ಆಚಾರ, ವಿಚಾರಗಳಿಗೆ, ದೈವರಾಧನೆಗೆ ಎಲ್ಲೂ ಧಕ್ಕೆಯಾಗದಂತೆ, ಅದರ ಶ್ರೇಷ್ಠತೆ,ಪಾವಿತ್ರ್ಯವನ್ನು ಕಾಪಾಡಿಕೊಂಡು ಸಿನೆಮಾ ಮಾಡಬೇಕಾಗಿತ್ತು. ನಾನು ಎಳೆಯ ಪ್ರಾಯಗಳಿಂದಲೂ ದೈವ, ದೇವರುಗಳ ಬಗ್ಗೆ ಭಕ್ತಿ ಇರಿಸಿಕೊಂಡವನು. ಆರಾಧಿಸುತ್ತಾ ಬಂದವನು. ದೈವಾರಾಧನೆಯ ಜತೆಗೆ ಬೆಳೆದವನು. ದೈವಗಳ ಕೃಪೆಯಿಂದ, ಎಲ್ಲರ ಸಹಕಾರದಿಂದ ಕಾಂತಾರ ಸಿನೆಮಾ ಸಾಕಾರಗೊಂಡಿದೆ. ಈ ಸಿನೆಮಾ ನಮ್ಮಿಂದ ಆಗಿದ್ದು ಎಂದು ನಾನು ಹೇಳುವುದಿಲ್ಲ. ನಂಬಿರುವ ದೈವಗಳೇ ಮಾಡಿಸಿದ್ದು ಎಂದಷ್ಟೆ ಹೇಳಬಲ್ಲೆ ಎಂದರು.

ಚಿತ್ರದ ಯಶಸ್ಸು ಕಂಡು ಇದೀಗ ಹಿಂದಿ, ಮಲಯಾಳ, ತೆಲುಗು, ತಮಿಳು ಭಾಷೆಗಳವರಿಂದ ಆ ಭಾಷೆಗಳಿಗೆ ಡಬ್ಬಿಂಗ್‌ಗೆ ಬೇಡಿಕೆ ಬರುತ್ತಿದ್ದು, ನಮ್ಮ ಪ್ರೊಡಕ್ಷನ್‌ ಹೌಸ್‌ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದರು.

ಇಡಿ ಚಿತ್ರವನ್ನು ದೈವ ನರ್ತಕರು ಹಾಗೂ ಅವರ ಕುಟುಂಬಕ್ಕೆ ಸಮ ರ್ಪಿಸಿದ್ದೇನೆ. ದೈವದ ಸೇವೆ ಮಾಡು ವಂಥದ್ದು ವಿಶೇಷ ಮತ್ತು ಪುಣ್ಯದ ಕಾರ್ಯ. ಆನೇಕ ವರ್ಷಗಳಿಂದ ಊರಿಗೆ ಬಾರದ, ದೈವಗಳ ಕೋಲ, ನೇಮಗಳಲ್ಲಿ ಪಾಲ್ಗೊಳ್ಳದ ಹಲವಾರು ಮಂದಿ ಇದೀಗ ಊರಿಗೆ ಬರಬೇಕು, ನಮ್ಮ ಮನೆತನದ, ಊರಿನ ಕೋಲ, ನೇಮಗಳಲ್ಲಿ ಪಾಲ್ಗೊಳುವಂತೆ ಪ್ರೇರಣೆ ಆಗಿರುವುದಾಗಿ ದೂರವಾಣಿ ಕರೆ, ಸಂದೇಶಗಳಲ್ಲಿ ತಿಳಿಸುತ್ತಿದ್ದಾರೆ ಎಂದರು.

ಕಾಂತಾರದ ನಾಯಕಿ ನಟಿ ಸಪ್ತಮಿ ಗೌಡ ಮಾತನಾಡಿ, ನಾನು ಬೆಂಗಳೂರಿನವಳು; ಈ ಚಿತ್ರದಲ್ಲಿ ನಟಿಸುವ ಮೊದಲು ಕೋಲ, ನೇಮಗಳ ಬಗ್ಗೆ ತಿಳಿದಿರಲಿಲ್ಲ. ಅವುಗಳ ಆಚಾರ, ವಿಚಾರ, ನಂಬಿಕೆಗಳ ಬಗ್ಗೆ ಅರಿತುಕೊಂಡು ಚಾಚೂ ತಪ್ಪದೆ ಶ್ರದ್ಧೆಯಿಂದ ಪಾತ್ರ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕಾಗಲೆಲ್ಲಾ ಇಲ್ಲಿಗೆ ಬಂದು ಕೋಲ, ನೇಮಗಳಲ್ಲಿ ಭಾಗವಹಿಸುತ್ತೇನೆ ಎಂದು ಕೋಲ, ನೇಮ ತನ್ನ ಮೇಲೆ ಬೀರಿರುವ ಪ್ರಭಾವವನ್ನು ವ್ಯಕ್ತಪಡಿಸಿದರು.

ಪಾತ್ರಧಾರಿಗಳಾದ ಪ್ರಮೋದ್‌ ಶೆಟ್ಟಿ, ದೈವನರ್ತಕ ಮುಖೇಶ್‌, ಪ್ರಕಾಶ್‌ ತುಮಿನಾಡು, ಶನಿಲ್‌ ಗುರು, ಸ್ವರಾಜ್‌ ಶೆಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.