ತೆರೆಮರೆಯಲ್ಲಿ ಮಿಂಚುತ್ತಿರುವ ಕರಾಟೆಪಟು ದಿಲ್‌ನಾಜ್‌


Team Udayavani, Aug 15, 2017, 9:17 PM IST

Karate-15-8.jpg

ಮಡಂತ್ಯಾರು: ಸಾಧನೆಗೆ ಯಾವ ಬೇಲಿ ಕೂಡ ಇಲ್ಲ. ಸಾಧಿಸುವ ಛಲ ಇರಬೇಕು ಅಷ್ಟೆ. ಸಮಾಜದಲ್ಲಿ ನಮಗೆ ಸ್ಥಾನಮಾನ ಸಿಗಬೇಕಾದರೆ ಸಾಧನೆಯ ಶಿಖರ ಏರಬೇಕು. ಪ್ರತಿಯೊಬ್ಬ ವ್ಯಕ್ತಿಯ ಸ್ಥಾನಮಾನ ನಿರ್ಧಾರವಾಗುವುದು ಅವರವರ ಸಾಧನೆಯಿಂದ. ಸಾಧನೆಗೆ ತಕ್ಕ ಫಲ ನೀಡುವಲ್ಲಿ ಸಹಕಾರಿ ಆಗುವುದು ಅವರಲ್ಲಿರುವ ಶ್ರಮ ಮತ್ತು ನಂಬಿಕೆ. ಇಷ್ಟಿದ್ದರೆ ಸಾಧನೆ ಎಂಬುದು ಕಷ್ಟದ ಮಾತಲ್ಲ ಎನ್ನುವುದಕ್ಕೆ ಉದಾಹರಣೆ ವಾಮದ ಪದವಿನ ದಿಲ್‌ನಾಜ್‌.

ಬಂಟ್ವಾಳ ತಾಲೂಕಿನ ಬಡತನದ ಒಂದು ಕುಟುಂಬದಲ್ಲಿ ಜನಿಸಿದ ಬಾಲಕಿ ಇಂದು ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಗೆದ್ದು ಹೆಣ್ಣುಮಕ್ಕಳು ಕೂಡ ಸಾಧನೆ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾಳೆ. ತಾಲೂಕಿನ ಕುಡಂಬೆಟ್ಟು ಗ್ರಾಮದ ಬಸ್ತಿಕೋಡಿ ಮನೆಯ ಮೊಹಮ್ಮದ್‌ ಇಕ್ಬಾಲ್‌ ಮತ್ತು ಶಮೀಮ ದಂಪತಿ ಪುತ್ರಿಯಾದ ದಿಲ್‌ನಾಜ್‌ ಬಾಲ್ಯದಿಂದಲೇ ಚುರುಕಾಗಿದ್ದಳು. ಪ್ರಾಥಮಿಕ ಶಿಕ್ಷಣವನ್ನು ವಾಮದಪದವು ಚೆನ್ನೈತ್ತೋಡಿಯಲ್ಲಿ ಮಾಡಿದ್ದು ಅನಂತರ ಪ್ರೌಢಶಿಕ್ಷಣವನ್ನು ಕಲ್ಲಬಾಗಿಲು ಬುರೂಜ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಡೆದಿದ್ದು ಪ್ರಾಥಮಿಕ ಶಾಲೆಯಲ್ಲಿ ಇರುವಾಗಲೇ ಕರಾಟೆಯಲ್ಲಿ ಆಸಕ್ತಿ ಹೊಂದಿದ್ದಳು. ಆದರೆ ಬಡತನ ಎನ್ನುವ ಬೇಲಿ ಅಡ್ಡಬರುತ್ತಿತ್ತು. ತಂದೆ ಕೂಲಿ ಕಾರ್ಮಿಕನಾಗಿದ್ದು ಮೂವರು ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ಹೊತ್ತಿದ್ದರು. ಕಳೆದ ನಾಲ್ಕು ವರ್ಷದ ಹಿಂದೆ ಬುರೂಜ್‌ ಶಾಲೆಯಲ್ಲಿ ಕರಾಟೆ ಅಭ್ಯಾಸ ಆರಂಭಿಸಿದ್ದು ಸಾಧನೆ ಮಾಡಲೇಬೇಕೆನ್ನುವ ಛಲ ಇಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗುವಲ್ಲಿ ಯಶಸ್ವಿಯಾಗಿದೆ.

ಅಂತಾರಾಷ್ಟ್ರೀಯ ಚಿನ್ನದ ಪದಕ

ಮೂಡಬಿದಿರೆಯ ಮೊಹಮ್ಮದ್‌ ನದೀಂ ಕರಾಟೆ ಶಿಕ್ಷರಾಗಿದ್ದು ಪ್ರತೀ ರವಿವಾರ ತರಬೇತಿ ನೀಡುತ್ತಿದ್ದಾರೆ. ನಾಲ್ಕು ವರ್ಷದಿಂದ ಹಲವಾರು ಕಡೆ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ದಿಲ್‌ನಾಜ್‌ 2013ರಲ್ಲಿ ಪುಣೆಯಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಅಫ್ಘಾನಿಸ್ತಾನ, ಚೀನಾ, ನೇಪಾಳ, ಶ್ರೀಲಂಕಾ ದೇಶದ ಸ್ಪರ್ಧಿಗಳು ಭಾಗವಹಿಸಿದ್ದು ಅದರಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. 2017ರ ಆಗಸ್ಟ್‌ 5 ಮತ್ತು 6 ರಂದು ಆಂಧ್ರಪ್ರದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಪರ್ಧೆಯ ಕುಮಿಟೆ 45ರಿಂದ 50ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗೆದ್ದುಕೊಂಡಿದ್ದು ಒಟ್ಟು 20 ಚಿನ್ನದ ಪದಕ, 2ಬೆಳ್ಳಿ ಪದಕ, 1ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಕಲಿಕೆಯಲ್ಲೂ ಮುಂದು
ಬಡ ಕುಟುಂಬವಾದರೂ ವಿದ್ಯೆಗೆ ಯಾವುದೇ ಕೊರತೆ ಬಾರದಂತೆ ಮಾಡಿದ ಹೆತ್ತವರು ಮಗಳ ಕನಸಿಗೂ ಉತ್ತೇಜನ ನೀಡುತ್ತಾ ಬಂದರು. ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.75 ಅಂಕ ಗಳಿಸಿದ್ದು  ಪ್ರಸ್ತುತ ಮಡಂತ್ಯಾರು ಸೇಕ್ರೆಡ್‌ ಹಾರ್ಟ್‌ ಪದವಿಪೂರ್ವ ಕಾಲೇಜಿನ  ಪ್ರಥಮ ಪಿಯುಸಿ ವಿದ್ಯಾರ್ಥಿ. ಕಾಲೇಜಿನ ಪ್ರಾಂಶುಪಾಲ ಜೆರೂಮ್‌ ಡಿ’ಸೋಜಾ ಕೂಡ ಉತ್ತಮ ಪ್ರೋತ್ಸಾಹ ನೀಡುತ್ತಿದ್ದಾರೆ ಎನ್ನುತಾರೆ ದಿಲ್‌ನಾಜ್‌.

ಡಾಕ್ಟರ್‌, ಕರಾಟೆ ಶಿಕ್ಷಕಿಯಾಗುವ ಆಸೆ
ಡಾಕ್ಟರ್‌ ಆಗಿ ಸಮಾಜದಲ್ಲಿ ಉತ್ತಮ ಸೇವೆ ಮಾಡುವ ಕನಸು ಇದೆ. ಕರಾಟೆಯಲ್ಲಿ ಈಗಾಗಲೆ ಸೀನಿಯರ್‌ ರೆಫರಿ ಮಾಡುತ್ತಿದ್ದು ಕರಾಟೆ ಶಿಕ್ಷಕಿಯಾಗುವ ಆಸೆ ಇದೆ. ಮಡಂತ್ಯಾರು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಯೋಜನೆ ಇದೆ. ಕರಾಟೆ ಗುರುಗಳ ಅನುಮತಿ ಪಡೆದು ಇದನ್ನು ಮುಂದುವರಿಸುತ್ತೇನೆ.                
– ದಿಲ್‌ನಾಜ್‌, ಬಸ್ತಿಕೋಡಿ ಕರಾಟೆ ಪಟು

– ಪ್ರಮೋದ್‌ ಬಳ್ಳಮಂಜ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.