ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರಕ್ಕೆ ಇವು ಬೇಡಿಕೆ


Team Udayavani, Apr 20, 2018, 7:05 AM IST

Namma-Pranalike-600.jpg

ಸುಳ್ಯ ಮೀಸಲು ಕ್ಷೇತ್ರವಾಗಿ ಆರು ದಶಕಗಳು ಸಂದಿವೆ. 1962ರಲ್ಲಿ ಸೃಷ್ಟಿಯಾದ ಸುಳ್ಯ ಇಲ್ಲಿಯವರೆಗೂ ಪ.ಜಾತಿಗೆ ಮೀಸಲಾಗಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇರುವ, ಅಡಿಕೆ, ತೆಂಗು, ಗೇರು ಇತ್ಯಾದಿ ತೋಟಗಾರಿಕೆ ಕೃಷಿಯೇ ಮುಖ್ಯವಾಗಿರುವ; ಶಿಕ್ಷಣ ಮತ್ತು ಆರೋಗ್ಯ ರಂಗಗಳಲ್ಲೂ ಗುರುತಿಸಿಕೊಂಡಿರುವ ಸುಳ್ಯದಲ್ಲಿ ಹಲವು ಬೇಡಿಕೆಗಳು ಈಡೇರಿಕೆಗಾಗಿ ಕಾಯುತ್ತಿವೆ.

1. 110 ಕೆ.ವಿ. ಸಬ್‌ ಸ್ಟೇಶನ್‌
ಸುಳ್ಯದ ವಿದ್ಯುತ್‌ ಸಮಸ್ಯೆ ಬಗ್ಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗಿದೆ. ಪ್ರತಿ ಬೇಸಗೆಯಲ್ಲಿ ಜನರು ಹೈರಾಣಾಗಿದ್ದಾರೆ. 110 ಕೆ.ವಿ. ಸಬ್‌ಸ್ಟೇಶನ್‌ ಪ್ರಸ್ತಾವನೆಗೆ 20 ವರ್ಷ ಸಮೀಪಿಸುತ್ತಿದ್ದು, ಈ ಬಾರಿಯಾದರೂ ಅನುಷ್ಠಾನ ಆಗಬೇಕು.

2. ವೆಂಟೆಡ್‌ ಡ್ಯಾಂ
ನಗರದ ಮಧ್ಯ ಭಾಗದಲ್ಲಿ ಪಯಸ್ವಿನಿ ನದಿ ಹರಿಯುತ್ತಿದ್ದರೂ ಬೇಸಗೆ ಕಾಲದಲ್ಲಿ ನೀರಿನ ಬವಣೆ ತಪ್ಪಿಲ್ಲ. ಹಾಗಾಗಿ ಪ್ರಸ್ತಾವನೆ ಹಂತ ದಲ್ಲಿರುವ ವೆಂಟೆಡ್‌ ಡ್ಯಾಂ ನಿರ್ಮಾಣ ಅನುಷ್ಠಾನಗೊಳ್ಳಬೇಕು.

3. ಸಂಚಾರ ಠಾಣೆ
ಮಾಣಿ-ಮೈಸೂರು ಹೆದ್ದಾರಿ ಹಾದು ಹೋಗುತ್ತಿರುವ ತಾಲೂಕಿನಲ್ಲಿ ವಾಹನ ದಟ್ಟಣೆ ನಿತ್ಯ ಸಮಸ್ಯೆ ಆಗಿದ್ದು, ನಿಯಂತ್ರಣಕ್ಕೆ ಸಂಚಾರ ಠಾಣೆ ಅತ್ಯಗತ್ಯವಾಗಿದೆ. ಇಡೀ ತಾಲೂಕಿನಲ್ಲಿ ಸಂಚಾರ ಪೊಲೀಸ್‌ ಠಾಣೆಯೇ ಇಲ್ಲ.

4. ಆನೆ ದಾಳಿಗೆ ಪರಿಹಾರ
ಅರಣ್ಯ ಭಾಗ ಆವೃತ್ತಗೊಂಡಿರುವ ಸುಳ್ಯ ತಾಲೂಕಿನಲ್ಲಿ ಆನೆ ದಾಳಿಯಿಂದ ಕೃಷಿಕರು ಬಸವಳಿದಿದ್ದಾರೆ. ಆನೆ ಬಾಧಿತ ಪ್ರದೇಶಗಳಲ್ಲಿ ಆಧುನಿಕ ಪರಿಕರ ಬಳಸಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು.

5. ರೈಲು ಮಾರ್ಗ
ಕಾಣಿಯೂರು-ಕಾಂಞಂಗಾಡು ರೈಲು ಮಾರ್ಗ ನಿರ್ಮಾಣದ ಪ್ರಸ್ತಾವನೆ ಅರ್ಧದಲ್ಲೇ ಮೊಟಕಾಗಿದೆ. ಸುಳ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ರೈಲು ಮಾರ್ಗ ನಿರ್ಮಾಣಕ್ಕೆ ವೇಗ ನೀಡಬೇಕಿದೆ.

6. ಸೇತುವೆ
ಗ್ರಾಮಾಂತರ ಪ್ರದೇಶಗಳಲ್ಲಿ ಹಲವು ಸೇತುವೆ ಬೇಡಿಕೆ ಇದ್ದು, ಪ್ರತಿ ಚುನಾವಣೆ ಸಂದರ್ಭದಲ್ಲಿ ನೆನಪಿಸುತ್ತಾ ಇದ್ದಾರೆ. ಕೊಲ್ಲಮೊಗ್ರು, ಕಲ್ಮಕಾರು ಮೊದಲಾದೆಡೆ ಸೇತುವೆ ಇಲ್ಲದೆ ಜನ ಸಂಪರ್ಕ ಸಮಸ್ಯೆ ಎದುರಿಸುತ್ತಿದ್ದಾರೆ.

7. ಹಳದಿ ರೋಗಕ್ಕೆ ಪರಿಹಾರ
ಅಡಿಕೆ ಬೆಳೆಗಾರರು ಅತ್ಯಧಿಕ ಪ್ರಮಾಣ ದಲ್ಲಿರುವ ಇಲ್ಲಿ 15 ವರ್ಷಗಳಿಂದ ಅಡಿಕೆಗೆ ಹಳದಿ ರೋಗ ಸಮಸ್ಯೆ ಇದೆ. ನಿಯಂತ್ರಣಕ್ಕೆ ಸೂಕ್ತ ಕ್ರಮಗಳಿಲ್ಲ. ರೋಗ ನಿಯಂತ್ರಣಕ್ಕೆ ಔಷಧ, ನಷ್ಟ ಪರಿಹಾರಕ್ಕೆ ಪ್ರತ್ಯೇಕ ಪ್ಯಾಕೇಜ್‌ನ ಅಗತ್ಯವಿದೆ.

8. ಕಸ ವಿಲೇವಾರಿಗೆ ವ್ಯವಸ್ಥೆ
ಕಲ್ಚೆರ್ಪೆಯ ಡಂಪಿಂಗ್‌ ಯಾರ್ಡ್‌ ಅವೈ ಜ್ಞಾನಿಕವಾಗಿದ್ದು, ಒಟ್ಟಾರೆಯಾಗಿ ತ್ಯಾಜ್ಯ ಬಿದ್ದಿರುವುದರಿಂದ ರೋಗ ಭೀತಿ ಉಂಟಾಗಿದೆ. ವೈಜ್ಞಾನಿಕ ಪದ್ಧತಿಯಲ್ಲಿ ಕಸ ವಿಂಗಡನೆ, ಸಂಸ್ಕರಣೆ ಮಾಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

9. ತಾಲೂಕು ಕ್ರೀಡಾಂಗಣ
2006-07ನೇ ಸಾಲಿನಲ್ಲಿ ಮಂಜೂರುಗೊಂಡು ಸಮತಟ್ಟು ಹಂತದಲ್ಲೇ ಮೊಟಕಾಗಿರುವ ತಾಲೂಕು ಕ್ರೀಡಾಂಗಣ ಪೂರ್ಣಗೊಂಡು, ಕ್ರೀಡಾಪಟುಗಳ ಉಪಯೋಗಕ್ಕೆ ಲಭ್ಯವಾಗಬೇಕು.

10. ಅಂಬೇಡ್ಕರ್‌ ಭವನ
ಕಳೆದ 50 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರವಾಗಿರುವ ಸುಳ್ಯದಲ್ಲಿ ಅಂಬೇಡ್ಕರ್‌ ಭವನ ನಿರ್ಮಾಣ ಕಾಮಗಾರಿ ಅಪೂರ್ಣ ಸ್ಥಿತಿಯಲ್ಲಿದೆ. ಅದು ಪೂರ್ಣಗೊಳ್ಳಬೇಕು.

11. ರಸ್ತೆ ಸಮಸ್ಯೆ
ಗ್ರಾಮಾಂತರ ಭಾಗದಲ್ಲಿ ಅನೇಕ ರಸ್ತೆಗಳು ನಾದುರಸ್ತಿಯಲ್ಲಿದ್ದು ಜನ-ವಾಹನ ಸಂಚಾರ ದುಸ್ತರವಾಗಿದೆ. ಈಗಾಗಲೇ ರಸ್ತೆ ಸಮಸ್ಯೆ ಇರುವ ಕಡೆಗಳಲ್ಲಿ ನೋಟಾ ಮತ ಚಲಾವಣೆ, ಪ್ರತಿಭಟನೆಗಳ ಕೂಗು ಕೇಳಿ ಬಂದಿವೆ.

12. ಸಂಚಾರ
ಸುಳ್ಯ ನಗರದಿಂದ ಗ್ರಾಮಾಂತರ ಪ್ರದೇಶ ಗಳ ಎಲ್ಲ ಜನವಸತಿ ಕೇಂದ್ರಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ಓಡಾಟ ಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಇದ್ದು, ಅದಕ್ಕೆ ಸ್ಪಂದನೆ ಅತ್ಯಗತ್ಯ ಸಿಗಬೇಕಿದೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.