ಗೆಲುವು ಪ್ರಶಾಂತ್, ಶರತ್, ದೀಪಕ್ ಮಡಿಲಿಗೆ ಅರ್ಪಣೆ: ಸಂಸದ ನಳಿನ್
Team Udayavani, May 16, 2018, 7:00 AM IST
ಮಂಗಳೂರು: ದ.ಕ.ಜಿಲ್ಲೆಯ ಜನತೆ ಬಿಜೆಪಿ ಪರ ಆಶೀರ್ವಾದ ಮಾಡಿದ್ದು, ಕರಾವಳಿಯು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೂಮ್ಮೆ ಸಾಬೀತಾಗಿದೆ. ಬಿಜೆಪಿಯ ಈ ಗೆಲುವನ್ನು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ ಹಾಗೂ ದೀಪಕ್ ರಾವ್ಗೆ ಅರ್ಪಿಸುವುದಾಗಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳ ಮೋದಿ ಅವರ ಜನಪರ ಆಡಳಿತವನ್ನು ಮೆಚ್ಚಿ, ಸ್ಮಾರ್ಟ್ಸಿಟಿ, ಅಮೃತ್, ಸಾಗರ್ಮಾಲಾ, ಭಾರತ್ಮಾಲಾ ಮೊದಲಾದ ಹೊಸ ಹೊಸ ಯೋಜನೆಗಳಿಂದ ಪ್ರಭಾವಿತರಾಗಿ ಜನತೆ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಎಂದರು.
ಕಳೆದ 5 ವರ್ಷಗಳಲ್ಲಿ ರಾಜ್ಯ ಸರಕಾರದ ದುರಾಡಳಿತ, ಭ್ರಷ್ಟಾಚಾರ, ಕೋಮುಭಾವನೆ ಕೆರಳಿಸುವ ಹೇಳಿಕೆ
ಗಳು, ಗೂಂಡಾಗಿರಿಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಜನತೆ ಬಿಜೆಪಿಗೆ ಮತ ಹಾಕಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಗೆದ್ದಿರುವ ಬಿಜೆಪಿಯ ಏಳು ಮಂದಿ ಶಾಸಕರು ಜನರ ವಿಶ್ವಾಸ, ನಂಬಿಕೆಯ ಆಧಾರದಲ್ಲಿ ಕೆಲಸ ನಿರ್ವಹಿಸಲಿದ್ದಾರೆ.
ಬಿಜೆಪಿಯ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರು ಕಳೆದ 2 ವರ್ಷ ಗಳಲ್ಲಿ ಹಗಲಿರುಳು ಶ್ರಮಿಸಿದ್ದಾರೆ. ಜತೆಗೆ ಬಿಜೆಪಿಯ ರಾಷ್ಟ್ರೀಯ ಮುಂದಾಳುಗಳಾದ ಓಂ ಪ್ರಕಾಶ್ ಮಾಥೂರ್, ಮಹೇಂದ್ರ ಸಿಂಗ್, ಕೇಂದ್ರ ಸಚಿವ ಧರ್ಮೆàಂದ್ರ ಪ್ರಧಾನ್, ಮುಂಬಯಿ ಸಂಸದ ಗೋಪಾಲ ಶೆಟ್ಟಿ ಅವರು ಜಿಲ್ಲೆಯಲ್ಲಿ ಬಿಜೆಪಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಚುನಾವಣಾ ತಂಡವೂ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದರು.
ಜಿಲ್ಲೆಯಲ್ಲಿ 7 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ನಮಗಿತ್ತು. ಜತೆಗೆ ಮಂಗಳೂರು ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿ ಉತ್ತಮ ಸ್ಪರ್ಧೆ ನೀಡಿದ್ದಾರೆ. ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜನರು ಅಭೂತಪೂರ್ವ ಬೆಂಬಲ ನೀಡಿದ್ದರು. ಗುಜರಾತ್ ಮಾದರಿಯ ಪೇಜ್ ಪ್ರಮುಖ್ ಕಲ್ಪನೆ ಕೂಡ ಯಶಸ್ವಿಯಾಗಿದ್ದು, ಬೂತ್ ಮಟ್ಟದಲ್ಲಿ ನಾಯಕರನ್ನು ಬೆಳೆಸಿದೆ ಎಂದು ನಳಿನ್ ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಕಾ| ಗಣೇಶ್ ಕಾರ್ಣಿಕ್, ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪ್ರಭಾಕರ ಬಂಗೇರ, ಪಕ್ಷದ ಪ್ರಮುಖರಾದ ಜೀತೇಂದ್ರ ಕೊಟ್ಟಾರಿ, ಕ್ಯಾ| ಬೃಜೇಶ್ ಚೌಟ, ರವಿಶಂಕರ್ ಮಿಜಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ
Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು
ಜೆಡಿಎಸ್ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್ ಬಾವಾ
ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ
MUST WATCH
ಹೊಸ ಸೇರ್ಪಡೆ
Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!