ಬಂದ್ ಕರೆ: ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ
Team Udayavani, Feb 14, 2020, 7:20 AM IST
ಮಂಗಳೂರು/ಉಡುಪಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಗುರುವಾರ ಕನ್ನಡ ಸಂಘಟನೆಗಳ ಒಕ್ಕೂಟವು ರಾಜ್ಯವ್ಯಾಪಿ ಕರೆ ನೀಡಿರುವ “ಕರ್ನಾಟಕ ಬಂದ್’ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿ ಜನ ಸಂಚಾರ ಎಂದಿನಂತೆ ಇದ್ದು, ಸರಕಾರಿ ಮತ್ತು ಖಾಸಗಿ ಬಸ್ಗಳ ಸಂಚಾರ ಓಡಾಟ ನಡೆಸಿತ್ತು. ಶಾಲಾ-ಕಾಲೇಜುಗಳು ಕೂಡ ಯಥಾಸ್ಥಿತಿ ಕಾರ್ಯಾಚರಣೆ ನಡೆಸಿದವು. ಖಾಸಗಿ ಮತ್ತು ಸಿಟಿ ಬಸ್ ಸಂಚಾರದಲ್ಲಿ ಯಾವುದೇ ರೀತಿಯ ವ್ಯತ್ಯಯವಾಗಲಿಲ್ಲ. ಅಂಗಡಿಗಳು, ಕಚೇರಿಗಳ ವ್ಯಾಪಾರ-ವಹಿವಾಟು ಎಂದಿನಂತೆ ಇತ್ತು. ದ.ಕ. ಜಿಲ್ಲಾ ಟ್ಯಾಕ್ಸಿಮನ್ಸ್ ಆ್ಯಂಡ್ ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಬಂದ್ಗೆ ನೈತಿಕ ಬೆಂಬಲ ನೀಡಿದ್ದರೇ ವಿನಾ ಟ್ಯಾಕ್ಸಿ ಸಂಚಾರ ಮೊಟಕುಗೊಳಿಸಲಿಲ್ಲ. ಉಡುಪಿ ಜಿಲ್ಲೆಯಲ್ಲಿ ಜನರಿಗೂ ಬಂದ್ ಕುರಿತು ಗೊತ್ತಿರಲಿಲ್ಲ.
ಬಸ್ಗಳಿಗೆ ಕಲ್ಲು
ಬಂದ್ಗೆ ಕರೆ ಹಿನ್ನೆಲೆಯಲ್ಲಿ ಅರ್ಕುಳ-ವಳಚ್ಚಿಲ್ ಮಧ್ಯೆ ಕೆಎಸ್ಆರ್ಟಿಸಿ ಬಸ್ಸಿಗೆ ಕಲ್ಲು ಹೊಡೆದ ಘಟನೆ ನಡೆದಿದ್ದು, ಯಾವುದೇ ಹಾನಿಯಾಗಿಲ್ಲ. ಕಲ್ಲು ಬಸ್ಸಿನ ತಗಡಿಗೆ ಬಿದ್ದಿದೆ. ಉಳಿದಂತೆ ಬಸ್ಸಿಗೆ ಯಾವುದೇ ಹಾನಿಯಾಗಿಲ.
ಬಸ್ಗಳ ಸಂಚಾರಕ್ಕೂ ಯಾವುದೇ ತೊಂದರೆಯಾಗಿಲ್ಲ ಎಂದು ಕೆಎಸ್ಆರ್ಟಿಸಿ ಸ್ಪಷ್ಟಪಡಿಸಿದೆ. ಇದೇ ಪರಿಸರದಲ್ಲಿ ಆಂಧ್ರಪ್ರದೇಶ ನೋಂದಣಿಯ ಬಸ್ಸೊಂದಕ್ಕೂ ಕಲ್ಲೆಸೆಯಲಾಗಿದೆ ಎಂಬ ಮಾಹಿತಿಯಿದ್ದು ಪೊಲೀಸ್ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?