ಕರ್ಣಾಟಕ ಬ್ಯಾಂಕ್‌:  133.85 ಕೋ.ರೂ. ಲಾಭ


Team Udayavani, Jul 16, 2017, 3:00 AM IST

1507mlr37-KBL-Mahabaleshwar.gif

ಮಂಗಳೂರು: ಕರ್ಣಾಟಕ ಬ್ಯಾಂಕ್‌ ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ತೈಮಾಸಿಕದ ಅಂತ್ಯಕ್ಕೆ ಶೇ. 10.13ರ ವೃದ್ಧಿಯೊಂ ದಿಗೆ 133.85 ಕೋ.ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಗಳಿಸಿದ ನಿವ್ವಳ ಲಾಭ 121.54 ಕೋ.ರೂ. ಆಗಿತ್ತು.

ಬ್ಯಾಂಕಿನ ನಿರ್ವಹಣಾ ಲಾಭವು 309.70 ಕೋ.ರೂ. ಆಗಿದ್ದು ಕಳೆದ ಸಾಲಿಗೆ ಹೋಲಿಸಿದರೆ ಶೇ. 18.25ರ ದರದಲ್ಲಿ ಬೆಳವಣಿಗೆ ದಾಖಲಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬ್ಯಾಂಕ್‌ 261.92 ಕೋ.ರೂ. ನಿರ್ವಹಣಾ ಲಾಭ ಗಳಿಸಿತ್ತು. ಬ್ಯಾಂಕಿನ ನಿವ್ವಳ ಬಡ್ಡಿ ಲಾಭವು ವರ್ಷದಿಂದ ವರ್ಷಕ್ಕೆ ಶೇ. 16.38ರ ದರದಲ್ಲಿ ಹೆಚ್ಚಳಗೊಂಡು 424.42 ಕೋ.ರೂ. ತಲುಪಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ನಿವ್ವಳ ಬಡ್ಡಿ ಲಾಭವು 364.69 ಕೋ.ರೂ.ಗಳಾಗಿತ್ತು. ಜು. 15ರಂದು ಮಂಗಳೂರಿನಲ್ಲಿ ನಡೆದ ಬ್ಯಾಂಕಿನ ನಿರ್ದೇಶಕ ಮಂಡಳಿಯ ಸಭೆಯಲ್ಲಿ 2017ರ ಜೂನ್‌ ಮಾಸಾಂತ್ಯದ ಹಣಕಾಸು ವರದಿಯನ್ನು ಅನುಮೋದಿಸಲಾಯಿತು.

ಶೇ. 9.56 ಬೆಳವಣಿಗೆ
ಬ್ಯಾಂಕಿನ ಒಟ್ಟು ವ್ಯವಹಾರವು 2017ರ ಜೂ. 30ಕ್ಕೆ 94,711 ಕೋ.ರೂ. ತಲುಪಿದ್ದು ಇದು ವರ್ಷದಿಂದ ವರ್ಷಕ್ಕೆ ಶೇ. 9.56 ಬೆಳವಣಿಗೆಯನ್ನು ಸಾಧಿಸಿದೆ. ಬ್ಯಾಂಕಿನ ಠೇವಣಿ ಮೊತ್ತವು 51,501 ಕೋ.ರೂ.ನಿಂದ 56,227 ಕೋ.ರೂ. ತಲುಪಿ ಶೇ. 9.18ರ ಪ್ರಗತಿ ದಾಖಲಿಸಿದೆ. ಬ್ಯಾಂಕಿನ ಮುಂಗಡವು 34,946 ಕೋ.ರೂ.ನಿಂದ 38,484 ಕೋ.ರೂ. ತಲುಪಿ ಶೇ. 10.12ರ ದರದಲ್ಲಿ ವೃದ್ಧಿ ಸಾಧಿಸಿದೆ. ಬ್ಯಾಂಕಿನ ಸಿ.ಡಿ. ಅನುಪಾತವು ಉತ್ತಮಗೊಂಡಿದ್ದು ಶೇ. 68.44ರಷ್ಟಿದೆ. ಹಿಂದಿನ ವರ್ಷ ಇದೇ ಅವಧಿಯಲ್ಲಿ ಸಿ.ಡಿ. ಅನುಪಾತವು ಶೇ 67.86 ಆಗಿತು.¤ ಕಾಸಾ (ಚಾಲ್ತಿಖಾತೆ ಹಾಗೂ ಉಳಿತಾಯ ಖಾತೆ ) ಠೇವಣಿಗಳು ಶೇ. 28.94ರಷ್ಟಕ್ಕೆ ಏರಿವೆ. ಪ್ರಸಕ್ತ ಸಾಲಿನ ಮೊದಲ ತ್ತೈಮಾಸಾಂತ್ಯಕ್ಕೆ ಬ್ಯಾಂಕಿನ ಸ್ಥೂಲ ಅನುತ್ಪಾದಕ ಆಸ್ತಿಗಳು 1,691 ಕೋ.ರೂ.ಗಳಷ್ಟಿದ್ದು, ಇದು ಬ್ಯಾಂಕಿನ ಒಟ್ಟು ಮುಂಗಡದ ಶೇ.4.34ರಷ್ಟಿದೆ. ನಿವ್ವಳ ಅನುತ್ಪಾದಕ ಆಸ್ತಿಯು 1,230 ಕೋ.ರೂ.ಗಳಾಗಿದ್ದು ನಿವ್ವಳ ಮುಂಗಡದ ಶೇ. 3.20ರಷ್ಟಿದೆ.

ಭಾರತೀಯ ರಿಸರ್ವ್‌ ಬ್ಯಾಂಕಿನ ನಿರ್ದೇಶನದಂತೆ ಬಂಡವಾಳ ಪರ್ಯಾಪ್ತದ ಅನುಪಾತವು ಕನಿಷ್ಠ ಶೇ. 10.25 ಇರಬೇಕಾಗಿದು,ª 2017-18ರ ಮೊದಲ ತ್ತೈಮಾ ಸಾಂತ್ಯಕ್ಕೆ (30-06-2017) ಬ್ಯಾಂಕಿನ ಬಂಡವಾಳ ಪರ್ಯಾಪ್ತದ ಅನುಪಾತವು (ಕ್ಯಾಪಿಟಲ್‌ ಅಡಿಕ್ವಸಿ ರೇಶೊÂà) ಬೇಸೆಲ್‌ ಐಐಐ ಮಾನದಂಡಕ್ಕನುಗುಣವಾಗಿ ಶೇ. 13.02ರಷ್ಟಿದೆ.

ಅಭಿವೃದ್ಧಿಗೆ ಮುನ್ನುಡಿ
ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಮಹಾಬಲೇಶ್ವರ ಎಂ.ಎಸ್‌. ಅವರು ಪ್ರಸಕ್ತ ಅರ್ಥಿಕ ವರ್ಷದ ಮೊದಲ ತ್ತೈಮಾಸಿಕದ ಫಲಿತಾಂಶದ ಬಗ್ಗೆ ಹರ್ಷವನ್ನು ವ್ಯಕ್ತಪಡಿಸಿ, ಬ್ಯಾಂಕಿನ ಮುಂಗಡಗಳಲ್ಲಿನ ಹೆಚ್ಚಳವು ನಮ್ಮ ನಿರ್ವಹಣಾ ಲಾಭದ ಪ್ರಗತಿಗೆ ಕಾರಣವಾಗಿದೆ. ಇದು ಬ್ಯಾಂಕಿನ ಮುಂದಿನ ಅಭಿವೃದ್ಧಿಗೆೆ ಮುನ್ನುಡಿ ಬರೆಯಲಿದೆ. ನಿವ್ವಳ ಬಡ್ಡಿ ಲಾಭ ಮತ್ತು ನಿವ್ವಳ ಬಡ್ಡಿ ಲಾಭಾಂಶದಲ್ಲಿಯ ಚೇತರಿಕೆಯು ಕೂಡ ಅಭಿವೃದ್ಧಿಯ ದ್ಯೋತಕವಾಗಿವೆ. 2017ರ ಜೂ. 30ಕ್ಕೆ ಬ್ಯಾಂಕ್‌ 769 ಶಾಖೆಗಳನ್ನು, 1,398 ಎಟಿಎಂಗಳನ್ನು ಮತ್ತು 110 ಇ-ಲಾಬಿ/ಮಿನಿ ಇ-ಲಾಬಿಗಳನ್ನು ಹೊಂದಿದೆ ಎಂದರು. 2018ರ ಮಾರ್ಚ್‌ ಅಂತ್ಯಕ್ಕೆ ಬ್ಯಾಂಕು ಇನ್ನೂ 31 ಹೊಸ ಶಾಖೆಗಳನ್ನು ಮತ್ತು 52 ಹೊಸ ಎಟಿಎಂಗಳನ್ನು ಹಾಗೂ 40 ಇ-ಲಾಬಿ/ಮಿನಿ ಇ-ಲಾಬಿಗಳನ್ನು ಪ್ರಾರಂಭಿಸುವ ಮೂಲಕ ಒಟ್ಟು 2,250 ಸೇವಾ ಕೇಂದ್ರಗಳನ್ನು ಹೊಂದಲಿದೆ. ಇದರೊಂದಿಗೆ ಶಾಖೆಗಳ ಸಂಖ್ಯೆ 800ಕ್ಕೆ, ಎಟಿಎಂಗಳು 1450ಕ್ಕೆ ಹಾಗೂ ಇ-ಲಾಬಿ / ಮಿನಿ ಇ-ಲಾಬಿಗಳ ಸಂಖ್ಯೆ 150ಕ್ಕೇರಲಿದೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.