ಕರ್ನಾಟಕವನ್ನು ಗುಜರಾತ್‌ ಮಾಡಲು ಅಸಾಧ್ಯ: ಸಚಿವ ಯು.ಟಿ. ಖಾದರ್‌


Team Udayavani, Oct 5, 2017, 11:10 AM IST

05-17.jpg

ಮಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ರಾಜ್ಯಕ್ಕೆ ಭೇಟಿ ನೀಡುವುದಕ್ಕೂ ಮೊದಲು, ಕೇಂದ್ರದಲ್ಲಿ ಬಿಜೆಪಿ ಸರಕಾರ ನೀಡಿದ್ದ ಆಶ್ವಾಸನೆಗಳಲ್ಲಿ ಯಾವುದನ್ನು ಈಡೇರಿಸಿದೆ ಎಂಬುದನ್ನು ಜನತೆಗೆ ಹೇಳಬೇಕು. ಚುನಾವಣೆ ಬರುವಾಗ ಜನರಿಗೆ ಬಣ್ಣ ಬಣ್ಣದ ಭರವಸೆ ನೀಡಿ ದಿಕ್ಕುತಪ್ಪಿಸುವುದು ಬೇಡ. ಇಂತಹ ಮಾತಿಂದ ಕರ್ನಾಟಕವನ್ನು ಯಾವುದೇ ಕಾರಣಕ್ಕೂ ಗುಜರಾತ್‌ ಮಾಡಲು ಸಾಧ್ಯವಿಲ್ಲ ಎಂದು ಆಹಾರ ಖಾತೆ ಸಚಿವ ಯು.ಟಿ.ಖಾದರ್‌ ಹೇಳಿದರು. 

ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಅಧಿಕಾರ ಪಡೆಯುವ ಮೊದಲು ಕಪ್ಪು ಹಣ ತರುತ್ತೇವೆ ಎಂದವರು ಈಗ ಏನಾಯಿತು? ಪಾಕಿಸ್ಥಾನಕ್ಕೆ ಉತ್ತರ ನೀಡಲಿದ್ದೇವೆ ಎಂದವರು ಏನು ಮಾಡಿದರು? ಪೆಟ್ರೋಲ್‌, ಡೀಸೆಲ್‌ ದರ ಕಡಿಮೆ ಮಾಡುತ್ತೇವೆ ಅಂದವರು ಈಗ ಮಾಡಿದ್ದೇನು? ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದವರು ಎಷ್ಟು ಉದ್ಯೋಗ ಕೊಟ್ಟರು? ಇಂತಹ ನೂರಾರು ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದವರು ಆಗ್ರಹಿಸಿದ್ದಾರೆ. 

ಲೂಟಿ ಮಾಡಿ ಜೈಲು ಪಾಲಾಗಿದ್ದು ಯಾರು?
ಮಾತುಗಳನ್ನಷ್ಟೇ ಆಡುವ ಪ್ರಧಾನಿಯವರ ಮನ್‌ಕಿ
ಬಾತ್‌ಗೆ ಪ್ರತಿಯಾಗಿ, ಆಗಿರುವ ಕೆಲಸಗಳ ಬಗ್ಗೆ ಸಿದ್ದರಾಮಯ್ಯನವರ “ಕಾಮ್‌ ಕಿ ಬಾತ್‌’ ನಡೆಸಲು ಉದ್ದೇಶಿಸಿರುವುದನ್ನು ಸಂಸದೆ ಶೋಭಾ ಟೀಕಿಸಿರುವುದು ಖಂಡನೀಯ. ಹಿಂದಿನ ಸರಕಾರವಿದ್ದಾಗ ಶೋಭಾ ಮತ್ತು ಬಿಜೆಪಿಯವರು ಲೂಟಿ ಮಾಡಿದ್ದು, ಯಾರು ಜೈಲಿಗೆ ಹೋಗಿ
ದ್ದಾರೆ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್‌ ಮೋನು, ಕಾಂಗ್ರೆಸ್‌ ಮುಖಂಡ ಕಣಚೂರು ಮೋನು ಮುಂತಾದವರಿದ್ದರು.

ರಾಜೀವ್‌ ಭದ್ರತೆ ಬಿಜೆಪಿ ಹಿಂದೆಗೆದಿತ್ತು! 
ಪತ್ರಿಕಾಗೋಷ್ಠಿಯಲ್ಲಿ  ಖಾದರ್‌ ಅವರು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರಿಗಿದ್ದ ಝಡ್‌ ಕೆಟಗರಿ ಭದ್ರತೆಯನ್ನು ಹಿಂದೆಗೆದಿದ್ದು ಬಿಜೆಪಿ ಎಂದು ಆರೋಪಿಸಿ ಅಚ್ಚರಿಗೆ ಕಾರಣರಾದರು. ರಾಜೀವ್‌ ಗಾಂಧಿಯವರ ಭದ್ರತೆ ಹಿಂಪಡೆದ ಬಳಿಕವೇ ಶ್ರೀ ಪೆರಂಬದೂರಿನಲ್ಲಿ ಅವರ ಹತ್ಯೆಯಾಗಿದೆ, ಅದಕ್ಕೆ ಬಿಜೆಪಿ ಕಾರಣ ಎಂದು ಕೂಡ ನಾನು ಹೇಳುತ್ತಿಲ್ಲ. ಆದರೆ ಅವರ ಮನಃಸ್ಥಿತಿಯನ್ನಷ್ಟೇ ಪ್ರಶ್ನಿಸುತ್ತೇನೆ. ಈಗ ಅಮಿತ್‌ ಶಾ ಅವರಿಗೆ ಯಾವುದೇ ಸಚಿವ ಸ್ಥಾನ ಇಲ್ಲದಿದ್ದರೂ ಭಾರೀ ಭದ್ರತೆ ನೀಡುತ್ತಿರುವುದು ಬಿಜೆಪಿಯವರ ಯೂಟರ್ನ್ ವರ್ತನೆಗೆ ಸ್ಪಷ್ಟ ನಿದರ್ಶನ ಎಂದು ಟೀಕಿಸಿದರು. 

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.