ಕೇರಳ ಗಡಿ ದಾಟಲು ಯತ್ನಿಸಿ ತಡೆದ ಪೊಲೀಸರ ಮೇಲೆ ಕಲ್ಲು ತೂರಿದ ಯುವಕ
Team Udayavani, Apr 3, 2020, 5:58 PM IST
ಮಂಗಳೂರು: ಕೇರಳ ಗಡಿ ದಾಟಲು ಯತ್ನಿಸಿ ತಡೆದ ಪೊಲೀಸರ ಮೇಲೆ ಯುವಕನೋರ್ವ ಕಲ್ಲು ತೂರಿದ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ.
ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮುರೂರಿನಲ್ಲಿ ಘಟನೆ ನಡೆದಿದ್ದು, ಸ್ಥಳಿಯ ನಿವಾಸಿ ಸಿನಾನ್ ಎಂಬ ಯುವಕ ಕೇರಳ ಗಡಿ ದಾಟಲು ಪ್ರಯತ್ನಿಸಿದ್ದ. ಪೊಲೀಸರು ತಡೆದಾಗ ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದ.
ಸುಳ್ಯ ಠಾಣೆ ಎ.ಎಸ್.ಐ. ಭಾಸ್ಕರ್ ಪ್ರಸಾದ್ ಹಾಗೂ ಹೆಡ್ ಕಾನ್ಸ್ ಟೇಬಲ್ ರಾಮ ನಾಯ್ಕ ಮೇಲೆ ಕಲ್ಲು ತೂರಾಟ ನಡೆಸಿದ್ದು ಗಾಯಗೊಂಡಿರುವ ಪೊಲಿಸರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಿದ್ದು, ಯುವಕ ಮಾನಸಿಕ ಅಸ್ವಸ್ಥನಾಗಿರುವ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.