ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾಸರಗೋಡು, ದ.ಕ. ಜಿಲ್ಲೆ ಯುವಕರು

ಕೇರಳ - ಕರ್ನಾಟಕ ಗಡಿ ಬಂದ್‌ ಸಮಸ್ಯೆ

Team Udayavani, May 12, 2020, 10:35 AM IST

ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾಸರಗೋಡು, ದ.ಕ. ಜಿಲ್ಲೆ ಯುವಕರು

ಮಂಗಳೂರು: ಕೋವಿಡ್ ಹರಡಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ-ಕೇರಳ ಗಡಿ ಬಂದ್‌ ಮಾಡಿರುವುದು ಇದೀಗ ಉಭಯ ರಾಜ್ಯಗಳ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ. ಗಡಿ ದಾಟಿ ಬರಲಾರದೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ.

ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ, ಅದರಲ್ಲೂ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದಿಂದ ಬರುವ ಸುಮಾರು 10 ಗಡಿಗಳನ್ನು ಬಂದ್‌ ಮಾಡಲಾಗಿತ್ತು. ದ.ಕ.ದಲ್ಲಿ ಪ್ರಕರಣ ವೃದ್ಧಿಸಿ ಕಾಸರಗೋಡಿನಲ್ಲಿ ಇಳಿಕೆಯಾಗುತ್ತಿದ್ದಂತೆ ಕೇರಳ ಸರಕಾರವೂ ಇದೇ ನಿರ್ಧಾರವನ್ನು ತೆಗೆದುಕೊಂಡಿತ್ತು. ಈ ನಿರ್ಧಾರ ಇದೀಗ ಮಂಗಳೂರಿನಲ್ಲಿ ಕೆಲಸ ಮಾಡುವ ಕೇರಳದ ಮತ್ತು ಕೇರಳದಲ್ಲಿ ಕೆಲಸ ಮಾಡುವ ದಕ್ಷಿಣ ಕನ್ನಡದ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ. ನಿರಂತರ ಗೈರುಹಾಜರಿಯಿಂದ ಕೆಲವರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ಲಾಕ್‌ಡೌನ್‌ ಪರಿಣಾಮ ಒಂದೂವರೆ ತಿಂಗಳಿನಿಂದ ಬಾಗಿಲು ಹಾಕಿದ್ದ ಕೆಲವು ಕಂಪೆನಿಗಳು ಲಾಕ್‌ಡೌನ್‌ ಸಡಿಲಿಕೆಯಾಗುತ್ತಿದ್ದಂತೆ ಬಾಗಿಲು ತೆರೆದು ಕನಿಷ್ಠ ಸಿಬಂದಿ ಮೂಲಕ ಕಾರ್ಯಾರಂಭಿಸಿವೆ. ಮಂಗಳೂರಿನಲ್ಲಿ ಕೆಲಸ ಮಾಡುವ ಕೇರಳದ ಕಾಸರಗೋಡಿನವರನ್ನು ಆಯಾ ಕಂಪೆನಿಗಳು ಕೆಲಸಕ್ಕೆ ಹಾಜರಾಗಬೇಕೆಂದು ತಿಳಿಸಿವೆ. ಅತ್ತ ಕೇರಳದ ಕಂಪೆನಿಗಳೂ ಕೆಲಸಕ್ಕೆ ಬರುವಂತೆ ಸೂಚಿಸಿವೆ. ಆದರೆ ಇನ್ನೂ ಕೂಡ ಗಡಿ ಸಂಚಾರಕ್ಕೆ ಮುಕ್ತವಾಗದ ಕಾರಣ ಉದ್ಯೋಗಿಗಳು ದಾರಿ ಕಾಣದಾಗಿದ್ದಾರೆ.

ಸರಕಾರಕ್ಕೆ ಮನವಿ
ಸಮಸ್ಯೆಯ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಸಂದೇಶ ಕಳುಹಿಸಿ ಉಭಯ ರಾಜ್ಯಗಳ ಸರಕಾರ, ಜನಪ್ರತಿನಿಧಿಗಳ ಗಮನಕ್ಕೆ ತರುವ ಕೆಲಸ ಮಾಡಲಾಗುತ್ತಿದೆ.ಜೀವನೋಪಾಯಕ್ಕಾಗಿ ನಿತ್ಯ ಓಡಾಟ ನಡೆಸುವ ಅನಿವಾರ್ಯ ಇರುವವರಿಗೆ ಸ್ವಂತ ವಾಹನದಲ್ಲಿ ದಿನಕ್ಕೆರಡು ಬಾರಿ ಸಂಚರಿಸಲು ಪಾಸ್‌ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಕ್ವಾರಂಟೈನ್‌ ಗೊಂದಲ
ನೆರೆಯ ಕೇರಳ ಮಾತ್ರವಲ್ಲದೆ, ಇತರ ಹೊರ ರಾಜ್ಯಗಳಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮಂದಿಯೂ ಇದೇ ಸಮಸ್ಯೆ ಅನುಭವಿಸುತ್ತಿದ್ದಾರೆ. ಕೆಲಸಕ್ಕೆ ಹಾಜರಾಗುವಂತೆ ಕಂಪೆನಿಗಳಿಂದ ಕರೆ ಬಂದಿದ್ದು, ಕೋವಿಡ್ ತಪಾಸಣೆ ನಡೆಸಬೇಕೊ, ಕೋವಿಡ್ ಇಲ್ಲವೆಂಬ ಪ್ರಮಾಣಪತ್ರ ಕೊಂಡೊಯ್ಯಬೇಕೊ, ಹಾಗೆ ಪ್ರಮಾಣಪತ್ರ ಕೊಂಡೊಯ್ದರೆ ಹೋಂ ಕ್ವಾರಂಟೈನ್‌ನಲ್ಲಿರಬೇಕೋ ಎಂಬ ಗೊಂದಲದಲ್ಲಿದ್ದಾರೆ. ಇಂತಹ ಉದ್ಯೋಗಿಗಳೂ ಲಾಕ್‌ಡೌನ್‌ ಮುಗಿಯುವವರೆಗೆ ಕಾದರೆ ಉದ್ಯೋಗ ಕಳೆದುಕೊಳ್ಳುವ ಭೀತಿಯೂ ಇದೆ.

ಲಾಕ್‌ಡೌನ್‌ ಸಂಪೂರ್ಣ ತೆರವಾಗುವವರೆಗೆ ರಾಜ್ಯದ ಹೊರಗಿನವರು ಬರುವುದಕ್ಕೆ ಅವಕಾಶ ಇರುವುದಿಲ್ಲ. ಉದ್ಯೋಗದಾತ ಸಂಸ್ಥೆಗಳೂ ಕೂಡ ಈ ಸಂಬಂಧ ಗಡಿಬಿಡಿ ಮಾಡಬಾರದು. ಕೋವಿಡ್ ಭೀತಿ ಇರುವಾಗ ನಿಯಮ, ಸಮಯಾವಕಾಶದ ಹೆಸರಿನಲ್ಲಿ ಅಮಾನತು, ಕೆಲಸದಿಂದ ತೆಗೆಯುವ ಸೂಚನೆ ನೀಡಬಾರದು.
– ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.