ಕಸ್ತೂರಿ ರಂಗನ್‌ ವರದಿ:ವಸ್ತುನಿಷ್ಠ ಅಭಿಪ್ರಾಯಕ್ಕೆ ಶಾಸಕ ಪೂಂಜಾ ಆಗ್ರಹ


Team Udayavani, Aug 13, 2018, 11:55 AM IST

kasuri.jpg

ಬೆಳ್ತಂಗಡಿ: ಕಸ್ತೂರಿರಂಗನ್‌ ವರದಿ ಜಾರಿಗೆ ಸಂಬಂಧಿಸಿ ರಾಜ್ಯ ಸರಕಾರವು ದ.ಕ. ಜಿಲ್ಲೆಯಲ್ಲಿ ತೊಂದರೆ ಅನುಭವಿಸುವ 44 ಗ್ರಾಮಗಳಲ್ಲಿ ಮರು ಸರ್ವೇ ನಡೆಸಿ, ಜನವಸತಿ ರಹಿತ ಪ್ರದೇಶವನ್ನು ಬೇರ್ಪಡಿಸಿ ಶೀಘ್ರ ವಸ್ತುನಿಷ್ಠ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲು ಕೇಂದ್ರಕ್ಕೆ ನೀಡಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಆ. 25ರೊಳಗೆ ತನ್ನ ಅಭಿಪ್ರಾಯ ಮಂಡಿಸಬೇಕಾದ ರಾಜ್ಯ ಸರಕಾರ ಗಾಢನಿದ್ದೆಯಲ್ಲಿದೆ. ಕೇರಳ ಸೇರಿದಂತೆ ವಿವಿಧ ಸರಕಾರಗಳು ಈಗಾಗಲೇ ವಸ್ತುನಿಷ್ಠ ವರದಿ ಸಲ್ಲಿಸಿದ್ದರೂ ನಮ್ಮ ಸರಕಾರ ಸುಮ್ಮನಿದೆ ಎಂದರು. ಗ್ರಾಮಗಳಿಗೆ ತೊಂದರೆಯಾಗುವ ಕುರಿತು ವಸ್ತುನಿಷ್ಠ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ಈಗಾಗಲೇ ಎಲ್ಲ ಗ್ರಾಮಗಳಲ್ಲೂ ವಿಶೇಷ ಗ್ರಾಮಸಭೆ ನಡೆಸಿ ವರದಿ ವಿರೋಧಿಸಿ ನಿರ್ಣಯ ಕೈಗೊಂಡು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗಿದೆ. ಆದರೆ ಅದನ್ನು ಮುಂದುವರಿಸುವ ಕುರಿತು ಹಿಂದಿನ ಉಸ್ತುವಾರಿ ಸಚಿವರಾಗಲಿ, ಶಾಸಕರಾಗಲಿ ಪ್ರಯತ್ನಿಸಲಿಲ್ಲ. ವರದಿ ಜಾರಿಯಾದರೆ ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನ 44 ಗ್ರಾಮಗಳ ಜನರು ಮೂಲ ಸೌಕರ್ಯ ವಂಚಿತರಾಗಲಿದ್ದಾರೆ. ಇದಕ್ಕೆ ರಾಜ್ಯ ಸರಕಾರ, ಅಧಿಕಾರಿಗಳೇ ಹೊಣೆಯಾಗಲಿದ್ದಾರೆ ಎಂದರು.ರಕ್ಷಿತಾರಣ್ಯದ ನಿರ್ದಿಷ್ಟ ಸ್ಥಳ (ಝೀರೋ ಪಾಯಿಂಟ್ ) ಗುರುತಿಸಿ ವಸತಿ ರಹಿತ ಪ್ರದೇಶದ ವರೆಗೆಕಸ್ತೂರಿ ವರದಿಗೆ ಸೇರಿಸಿ ಕೊಳ್ಳುವಂತೆ ಸರ್ವೇ ನಡೆಸಬೇಕಿದೆೆ ಎಂದರು.

ಹೋರಾಟಕ್ಕೆ ಸಿದ್ಧತೆ?
ಈ ಕುರಿತು ಸರಕಾರ, ಜಿಲ್ಲಾಡಳಿತ ಯಾವುದೇ ಪ್ರತಿಕ್ರಿಯೆ ನೀಡದೇ ಇದ್ದಲ್ಲಿ ಹೋರಾಟ ರೂಪಿಸುವ ಕುರಿತು 44 ಗ್ರಾಮಗಳ ಪ್ರತಿನಿಧಿಗಳನ್ನು ಸೇರಿಸಿ ಆ. 17ರಂದು ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ನಡೆಸಲಿದ್ದೇವೆ. ಸಭೆಗೆ ಶಾಸಕರು, ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರನ್ನೂ ಆಹ್ವಾನಿಸುತ್ತೇವೆ ಎಂದು ಪೂಂಜಾ ತಿಳಿಸಿದರು.

ಬೈದು ಕಳುಹಿಸಿದ್ದರು!
ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್‌ ಶಿರಾಡಿ ಮಾತನಾಡಿ, ವರದಿಯಿಂದ ತೊಂದರೆ ಯಾಗುವ ಕುರಿತು ಹಿಂದಿನ ಅರಣ್ಯ ಸಚಿವರ ಬಳಿ ಹೋದಾಗ ಇದರಿಂದ ಏನೂ ತೊಂದರೆ ಆಗುವುದಿಲ್ಲ, ನಿಮಗೇನೂ ಗೊತ್ತಿಲ್ಲ ಎಂದು ನಮ್ಮನ್ನು ಬೈದು ಕಳುಹಿಸಿದ್ದರು. ಮುಂದೆ ವರದಿ ಜಾರಿಯಾದರೆ ನಾವು ಅರಣ್ಯ ಅಧಿಕಾರಿಗಳನ್ನು ಕಾರ್ಯಪ್ರವೃತ್ತರಾಗಲು ಬಿಡೆವು ಎಚ್ಚರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಕೃಷ್ಣಪ್ಪ ಬೇಂಗಾಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.