ಕಸ್ತೂರಿ ವರದಿ ಜಾರಿಗೆ ಮುಂದಾದರೆ ತೀವ್ರ  ಹೋರಾಟ: ರೈ


Team Udayavani, Aug 17, 2018, 9:08 AM IST

rai.jpg

ಮಂಗಳೂರು: ರಾಜ್ಯದ ವಿರೋಧದ ನಡುವೆಯೂ ಕೇಂದ್ರ ಸರಕಾರ ಕಸ್ತೂರಿರಂಗನ್‌ ವರದಿಯನ್ನು ಜಾರಿಗೊಳಿಸಿದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಅರಣ್ಯ ಸಚಿವ ಬಿ. ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
 
ವರದಿ ತಿರಸ್ಕರಿಸುವಂತೆ ನಾನು ಅರಣ್ಯ ಸಚಿವನಾಗಿದ್ದ ಸಂದರ್ಭ ಕೇಂದ್ರ ಸರಕಾರಕ್ಕೆ 2017ರ ಎ. 22ರಂದು ಪತ್ರ ಬರೆಯಲಾಗಿತ್ತು. 2018ರ ಎ.11ರಂದು ಕೇಂದ್ರ ಸರಕಾರ ನಡೆಸಿದ ಸಭೆಯಲ್ಲಿ ವರದಿಯನ್ನು ತಿರಸ್ಕರಿಸಬೇಕು ಎಂಬುದಾಗಿ ರಾಜ್ಯ ಸರಕಾರ ಸಕಾರಣಗಳೊಂದಿಗೆ ಪುನರುಚ್ಚರಿಸಿತ್ತು ಎಂದರು. 

ಹಿಂದಿನ ಸರಕಾರದ ಅವಧಿಯಲ್ಲಿ ಕರ್ನಾಟಕ ಸಚಿವ ಸಂಪುಟದ ಉಪಸಮಿತಿ ಪ. ಘಟ್ಟದ ಎಲ್ಲ ಜಿಲ್ಲೆ, ತಾಲೂಕು, ಗ್ರಾಮ ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಪಡೆದಿತ್ತು. ಕಸ್ತೂರಿ ರಂಗನ್‌ ವರದಿ ನೀಡಿದ ಪರಿಸರ ಸೂಕ್ಷ್ಮ ವಲಯ (ಇಎಸ್‌ಎ) ಪುನರ್‌ ಪರಿಶೀಲನೆ ನಡೆಸಬೇಕು ಎಂದು 2015ರ ಜು.7ರಂದು ಹೊಸದಿಲ್ಲಿಯಲ್ಲಿ ಜರಗಿದ ಮಂತ್ರಿಗಳ ಎಂಪವರ್ಡ್‌ ಕಮಿಟಿ ಸಭೆಯಲ್ಲಿ ಕೋರಲಾಗಿತ್ತು. ಆದರೆ 2015ರ ಸೆ. 4ರಲ್ಲಿ ಕರಡು ಪ್ರತಿ ಜಾರಿಗೊಳಿಸಿದ ಕೇಂದ್ರ ಸರಕಾರ ಈ ಬಗ್ಗೆ ಯಾವುದೇ ಭರವಸೆ ನೀಡಿಲ್ಲ. ಅದು ಹೊರಡಿಸಿದ ಕರಡು ಪ್ರತಿಯಲ್ಲಿ ಬರುವ ಎಲ್ಲ ಗ್ರಾ. ಪಂ.ಗಳು ಗೊತ್ತುವಳಿಯ ಮೂಲಕ ಈ ವರದಿಗೆ ಆಕ್ಷೇಪ ವ್ಯಕ್ತಪಡಿಸಿದ್ದನ್ನು ರಾಜ್ಯ ಸರಕಾರವು ಕೇಂದ್ರದ ಗಮನಕ್ಕೆ ತಂದಿದೆ ಎಂದರು.

ಕಸ್ತೂರಿ ರಂಗನ್‌ ವರದಿಯನ್ನು ಅನುಷ್ಠಾನ ಮಾಡುವ ಜವಾಬ್ದಾರಿ ಇರುವುದು ಕೇಂದ್ರಕ್ಕೆ. ರಾಜ್ಯಗಳು ಕೇವಲ ತಮ್ಮ ಅಭಿಪ್ರಾಯ ತಿಳಿಸುತ್ತವೆ. ಕೇಂದ್ರದ ಬಿಜೆಪಿ ಸರಕಾರ ಈಗ ಇದರ ಅನುಷ್ಠಾನಕ್ಕೆ ಹುನ್ನಾರ ರೂಪಿಸಿದೆ. ಇದನ್ನು ಅರಿತಿರುವ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಜನರ ಮುಂದೆ ಸುಳ್ಳು ಹೇಳುತ್ತಿದ್ದಾರೆ ಎಂದರು.

ಸಚಿವ ಯು.ಟಿ. ಖಾದರ್‌ ಮಾತನಾಡಿ, ಬೆಳ್ತಂಗಡಿ ಶಾಸಕರು ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ ಎಂದರು. 

ಮೇಯರ್‌ ಭಾಸ್ಕರ್‌ ಕೆ., ಮುಖಂಡರಾದ ಇಬ್ರಾಹಿಂ ಕೋಡಿಜಾಲ್‌, ಶಶಿಧರ ಹೆಗ್ಡೆ, ಪೃಥ್ವಿರಾಜ್‌, ಸಂತೋಷ್‌ ಶೆಟ್ಟಿ,ನಜೀರ್‌ ಬಾಜಾಲ್‌, ಸಲೀಂ, ಶಬ್ಬೀರ್‌ ಉಪಸ್ಥಿತರಿದ್ದರು.

ವರದಿಗಿಂತ ಜಾಸ್ತಿ ಅರಣ್ಯ ಸಂರಕ್ಷಣೆ 
ವರದಿಯಲ್ಲಿ ತೋರಿಸಿರುವ ವಿಸ್ತೀರ್ಣಕ್ಕಿಂತ ಹೆಚ್ಚಿನ ಪ್ರದೇಶವನ್ನು ರಾಜ್ಯವು ಪಶ್ಚಿಮ ಘಟ್ಟಗಳಲ್ಲಿ ಸಂರಕ್ಷಿಸಲು ಕ್ರಮ ಕೈಗೊಂಡಿದೆ. ಫಾರೆಸ್ಟ್‌ ಸರ್ವೇ ಆಫ್‌ ಇಂಡಿಯಾ ವರದಿಯಂತೆ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ 30,573 ಚ.ಕಿ.ಮೀ. ಅರಣ್ಯ ಇದೆ. ಇದು ಕಸ್ತೂರಿ ರಂಗನ್‌ ವರದಿಯಲ್ಲಿ ರಕ್ಷಿಸಬೇಕು ಎಂದು ಸೂಚಿಸಲಾದ 20,668 ಚದರ ಕಿ.ಮೀ. ಮಿತಿಗಿಂತ ಹೆಚ್ಚು. ಈ ಅರಣ್ಯ ಹೊದಿಕೆಯನ್ನು ಅರಣ್ಯ ಕಾಯ್ದೆಯಡಿ ಮೀಸಲು ಅರಣ್ಯ, ರಕ್ಷಿತ ಅರಣ್ಯವೆಂದು ಅಧಿಸೂಚಿಸಲಾಗಿದೆ. ಪಶಿrಮ ಘಟ್ಟ ಪ್ರದೇಶದಲ್ಲಿ ವನ್ಯ ಜೀವಿಧಾಮ, ರಾಷ್ಟ್ರೀಯ ಉದ್ಯಾನಗಳನ್ನು ಜೀವವೈವಿಧ್ಯ ಅತೀ ಹೆಚ್ಚು ಇರುವ ಪ್ರದೇಶಗಳಲ್ಲಿ ರಚಿಸಲಾಗಿದೆ ಎಂದು ರಮಾನಾಥ ರೈ ವಿವರಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.