ಕಸ್ತೂರಿ ವರದಿ ಜಾರಿಗೆ ಮುಂದಾದರೆ ತೀವ್ರ  ಹೋರಾಟ: ರೈ


Team Udayavani, Aug 17, 2018, 9:08 AM IST

rai.jpg

ಮಂಗಳೂರು: ರಾಜ್ಯದ ವಿರೋಧದ ನಡುವೆಯೂ ಕೇಂದ್ರ ಸರಕಾರ ಕಸ್ತೂರಿರಂಗನ್‌ ವರದಿಯನ್ನು ಜಾರಿಗೊಳಿಸಿದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಅರಣ್ಯ ಸಚಿವ ಬಿ. ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
 
ವರದಿ ತಿರಸ್ಕರಿಸುವಂತೆ ನಾನು ಅರಣ್ಯ ಸಚಿವನಾಗಿದ್ದ ಸಂದರ್ಭ ಕೇಂದ್ರ ಸರಕಾರಕ್ಕೆ 2017ರ ಎ. 22ರಂದು ಪತ್ರ ಬರೆಯಲಾಗಿತ್ತು. 2018ರ ಎ.11ರಂದು ಕೇಂದ್ರ ಸರಕಾರ ನಡೆಸಿದ ಸಭೆಯಲ್ಲಿ ವರದಿಯನ್ನು ತಿರಸ್ಕರಿಸಬೇಕು ಎಂಬುದಾಗಿ ರಾಜ್ಯ ಸರಕಾರ ಸಕಾರಣಗಳೊಂದಿಗೆ ಪುನರುಚ್ಚರಿಸಿತ್ತು ಎಂದರು. 

ಹಿಂದಿನ ಸರಕಾರದ ಅವಧಿಯಲ್ಲಿ ಕರ್ನಾಟಕ ಸಚಿವ ಸಂಪುಟದ ಉಪಸಮಿತಿ ಪ. ಘಟ್ಟದ ಎಲ್ಲ ಜಿಲ್ಲೆ, ತಾಲೂಕು, ಗ್ರಾಮ ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಅಭಿಪ್ರಾಯ ಪಡೆದಿತ್ತು. ಕಸ್ತೂರಿ ರಂಗನ್‌ ವರದಿ ನೀಡಿದ ಪರಿಸರ ಸೂಕ್ಷ್ಮ ವಲಯ (ಇಎಸ್‌ಎ) ಪುನರ್‌ ಪರಿಶೀಲನೆ ನಡೆಸಬೇಕು ಎಂದು 2015ರ ಜು.7ರಂದು ಹೊಸದಿಲ್ಲಿಯಲ್ಲಿ ಜರಗಿದ ಮಂತ್ರಿಗಳ ಎಂಪವರ್ಡ್‌ ಕಮಿಟಿ ಸಭೆಯಲ್ಲಿ ಕೋರಲಾಗಿತ್ತು. ಆದರೆ 2015ರ ಸೆ. 4ರಲ್ಲಿ ಕರಡು ಪ್ರತಿ ಜಾರಿಗೊಳಿಸಿದ ಕೇಂದ್ರ ಸರಕಾರ ಈ ಬಗ್ಗೆ ಯಾವುದೇ ಭರವಸೆ ನೀಡಿಲ್ಲ. ಅದು ಹೊರಡಿಸಿದ ಕರಡು ಪ್ರತಿಯಲ್ಲಿ ಬರುವ ಎಲ್ಲ ಗ್ರಾ. ಪಂ.ಗಳು ಗೊತ್ತುವಳಿಯ ಮೂಲಕ ಈ ವರದಿಗೆ ಆಕ್ಷೇಪ ವ್ಯಕ್ತಪಡಿಸಿದ್ದನ್ನು ರಾಜ್ಯ ಸರಕಾರವು ಕೇಂದ್ರದ ಗಮನಕ್ಕೆ ತಂದಿದೆ ಎಂದರು.

ಕಸ್ತೂರಿ ರಂಗನ್‌ ವರದಿಯನ್ನು ಅನುಷ್ಠಾನ ಮಾಡುವ ಜವಾಬ್ದಾರಿ ಇರುವುದು ಕೇಂದ್ರಕ್ಕೆ. ರಾಜ್ಯಗಳು ಕೇವಲ ತಮ್ಮ ಅಭಿಪ್ರಾಯ ತಿಳಿಸುತ್ತವೆ. ಕೇಂದ್ರದ ಬಿಜೆಪಿ ಸರಕಾರ ಈಗ ಇದರ ಅನುಷ್ಠಾನಕ್ಕೆ ಹುನ್ನಾರ ರೂಪಿಸಿದೆ. ಇದನ್ನು ಅರಿತಿರುವ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಜನರ ಮುಂದೆ ಸುಳ್ಳು ಹೇಳುತ್ತಿದ್ದಾರೆ ಎಂದರು.

ಸಚಿವ ಯು.ಟಿ. ಖಾದರ್‌ ಮಾತನಾಡಿ, ಬೆಳ್ತಂಗಡಿ ಶಾಸಕರು ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ ಎಂದರು. 

ಮೇಯರ್‌ ಭಾಸ್ಕರ್‌ ಕೆ., ಮುಖಂಡರಾದ ಇಬ್ರಾಹಿಂ ಕೋಡಿಜಾಲ್‌, ಶಶಿಧರ ಹೆಗ್ಡೆ, ಪೃಥ್ವಿರಾಜ್‌, ಸಂತೋಷ್‌ ಶೆಟ್ಟಿ,ನಜೀರ್‌ ಬಾಜಾಲ್‌, ಸಲೀಂ, ಶಬ್ಬೀರ್‌ ಉಪಸ್ಥಿತರಿದ್ದರು.

ವರದಿಗಿಂತ ಜಾಸ್ತಿ ಅರಣ್ಯ ಸಂರಕ್ಷಣೆ 
ವರದಿಯಲ್ಲಿ ತೋರಿಸಿರುವ ವಿಸ್ತೀರ್ಣಕ್ಕಿಂತ ಹೆಚ್ಚಿನ ಪ್ರದೇಶವನ್ನು ರಾಜ್ಯವು ಪಶ್ಚಿಮ ಘಟ್ಟಗಳಲ್ಲಿ ಸಂರಕ್ಷಿಸಲು ಕ್ರಮ ಕೈಗೊಂಡಿದೆ. ಫಾರೆಸ್ಟ್‌ ಸರ್ವೇ ಆಫ್‌ ಇಂಡಿಯಾ ವರದಿಯಂತೆ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ 30,573 ಚ.ಕಿ.ಮೀ. ಅರಣ್ಯ ಇದೆ. ಇದು ಕಸ್ತೂರಿ ರಂಗನ್‌ ವರದಿಯಲ್ಲಿ ರಕ್ಷಿಸಬೇಕು ಎಂದು ಸೂಚಿಸಲಾದ 20,668 ಚದರ ಕಿ.ಮೀ. ಮಿತಿಗಿಂತ ಹೆಚ್ಚು. ಈ ಅರಣ್ಯ ಹೊದಿಕೆಯನ್ನು ಅರಣ್ಯ ಕಾಯ್ದೆಯಡಿ ಮೀಸಲು ಅರಣ್ಯ, ರಕ್ಷಿತ ಅರಣ್ಯವೆಂದು ಅಧಿಸೂಚಿಸಲಾಗಿದೆ. ಪಶಿrಮ ಘಟ್ಟ ಪ್ರದೇಶದಲ್ಲಿ ವನ್ಯ ಜೀವಿಧಾಮ, ರಾಷ್ಟ್ರೀಯ ಉದ್ಯಾನಗಳನ್ನು ಜೀವವೈವಿಧ್ಯ ಅತೀ ಹೆಚ್ಚು ಇರುವ ಪ್ರದೇಶಗಳಲ್ಲಿ ರಚಿಸಲಾಗಿದೆ ಎಂದು ರಮಾನಾಥ ರೈ ವಿವರಿಸಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mangaluru ಬಾರ್‌ ವಿರುದ್ಧ ಎಫ್ಐಆರ್‌ ದಾಖಲು

Mangaluru ಬಾರ್‌ ವಿರುದ್ಧ ಎಫ್ಐಆರ್‌ ದಾಖಲು

Ullal ನಗದು ಕಳವು: ಸಿಸಿ ಟಿವಿಯಲ್ಲಿ ಕಳ್ಳನ ಚಹರೆ ಪತ್ತೆ

Ullal ನಗದು ಕಳವು: ಸಿಸಿ ಟಿವಿಯಲ್ಲಿ ಕಳ್ಳನ ಚಹರೆ ಪತ್ತೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.