ಕಟೀಲು ದೇವಿಗೆ ಮತ್ತೆ ಅವಮಾನ: ಜಾಲತಾಣದಲ್ಲಿ ವೈರಲ್
Team Udayavani, Nov 2, 2017, 8:07 AM IST
ಮಂಗಳೂರು: ಕಟೀಲು ಕ್ಷೇತ್ರದ ದೇವತೆಯನ್ನು ಮತ್ತೆ ಅವಮಾನ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಪೋಸ್ಟ್ ಮಾಡಲಾಗಿದೆ ಎಂಬ ವಿಷಯ ವೈರಲ್ ಆಗಿದೆ.
“ಜಬ್ಟಾರ್ ಮಂಗಳೂರು’ ಹೆಸರಿನಿಂದ ನಿರ್ವ ಹಣೆ ಯಾಗುತ್ತಿರುವ ಫೇಸುºಕ್ ಪೇಜ್ನಲ್ಲಿ ರಾಮ, ಸೀತೆ, ಕಟೀಲು ದುರ್ಗಾ ಪರಮೇಶ್ವರಿ, ಸ್ವಾಮಿ ಕೊರಗಜ್ಜ ಮತ್ತಿತರ ಹಿಂದೂ ದೇವಿ-ದೇವರ ವಿರುದ್ಧ ಅಸಹ್ಯಕರ ಹಾಗೂ ವಿಕೃತ ಪೋಸ್ಟ್ಗಳನ್ನು ಹಾಕಲಾಗಿದೆ ಎಂಬ ವಿಷಯ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ. ಈ ವ್ಯಕ್ತಿ ಇದೀಗ ತನ್ನ ಖಾತೆಯನ್ನು ಡಿಲೀಟ್ ಮಾಡಿ ದ್ದರೂ ಈತನ ಕಮೆಂಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ ಪೊಲೀಸ ರಲ್ಲಿ ವಿಚಾರಿಸಿದರೆ ಇದುವರೆಗೆ ಈ ಕುರಿತು ಯಾರೂ ದೂರು ನೀಡಿಲ್ಲ ಎಂದು ತಿಳಿಸಿದ್ದಾರೆ. ಸುಮಾರು ಒಂದು ವರ್ಷದ ಹಿಂದೆ ಇದೇ ರೀತಿ ಬಿ.ಸಿ. ರೋಡ್ನ ಜಬ್ಟಾರ್ ಎಂಬಾತನ ಫೇಸುºಕ್ ಖಾತೆಯಲ್ಲಿ ಕಟೀಲು ದೇವತೆಯನ್ನು ಅವಮಾನಿಸಿ ಕಮೆಂಟ್ಗಳನ್ನು ಹಾಕಲಾಗಿತ್ತು. ಇದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ, ಪ್ರತಿಭಟನೆಗಳು ನಡೆದಿದ್ದವು. ಈ ಬಗ್ಗೆ ಕೆಲವು ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಇದರ ಸೂತ್ರಧಾರರ ಪತ್ತೆ ಇನ್ನೂ ಆಗಿಲ್ಲ. ಫೇಸುºಕ್ ಸಂಸ್ಥೆಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು