15 ದಿನಗಳ ಒಳಗೆ ಕಟೀಲು ಮೇಳದ ಇಬ್ಬರ ಅಗಲುವಿಕೆ: ಪಟ್ಲ ಸತೀಶ್ ಶೆಟ್ಟಿ ಖೇದ

ಪರಿಸ್ಥಿತಿ, ವಾತಾವರಣದ ದೋಷವೂ ಇರಬಹುದು....ಕಲಾವಿದರು ಜಾಗರೂಕರಾಗಿರಬೇಕು

Team Udayavani, Dec 24, 2022, 5:25 PM IST

1-wdasdasd

ಮಂಗಳೂರು : 15 ದಿನಗಳ ಒಳಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದ ಇಬ್ಬರ ಅಗಲುವಿಕೆ ತೀವ್ರ ನೋವು ತಂದಿದೆ ಎಂದು ಖ್ಯಾತ ಭಾಗವತ, ಪಟ್ಲ ಫೌಂಡೇಶನ್ ನ ಪಟ್ಲ ಸತೀಶ್ ಶೆಟ್ಟಿ ತೀವ್ರ ಬೇಸರ ವ್ಯಕ್ತ ಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪಟ್ಲ ಸತೀಶ್ ಶೆಟ್ಟಿ ‘ಬಹಳ ಬೇಸರದ ವಿಷಯ ಕಲಾವಿದನಿಗೆ ಒಳ್ಳೆಯ ಮರಣವಾದರೂ ಹೀಗೆ ಆಗಬಾರದು ಎಂದು ಆಶಿಸುತ್ತೇನೆ. ಪರಿಸ್ಥಿತಿ, ವಾತಾವರಣದ ದೋಷವೂ ಇರಬಹುದು. ಮುಂಚೆ ಇಂತಹ ಘಟನೆಗಳು ಇಷ್ಟು ಪಕ್ಕ ಪಕ್ಕನೆ ಕಟೀಲು ಮೇಳದಲ್ಲಿ ಆಗಿರಲಿಲ್ಲ, 15  ದಿನಗಳ ಒಳಗೆ ಇಬ್ಬರು ಸಾವನ್ನಪ್ಪಿದ್ದಾರೆ. ಯಾವ ಮೇಳ ಅನ್ನುವುದು ಮುಖ್ಯವಲ್ಲ. ಹಿಂದೆ ಯಕ್ಷಗಾನ ರಂಗದಲ್ಲಿ ಹಿರಿಯ ಕಲಾವಿದರಾದ ಶಂಭು ಹೆಗಡೆ, ಗೇರು ಕಟ್ಟೆ ಗಂಗಯ್ಯ ಶೆಟ್ಟಿ ಸೇರಿ ಅನೇಕ ಕಲಾವಿದರು ಇದೆ ರೀತಿ ಮರಣವನ್ನಪ್ಪಿದ್ದರು’ ಎಂದರು.

‘ಕಲಾವಿದರು ಜಾಗರೂಕರಾಗಿ ತಮ್ಮ ಕಲಾ ಪ್ರೌಢಿಮೆ ತೋರಬೇಕು. ಕಲಾವಿದರಿಗೆ ಒತ್ತಡಗಳೂ ಇರಬಹುದು. ಒತ್ತಡಗಳನ್ನೂ ಕಡಿಮೆ ಮಾಡಬೇಕು ಎಂದು ನನ್ನ ವಿನಮ್ರ ಮನವಿ. ಆರೋಗ್ಯದಲ್ಲಿ ಏನಾದರೂ ಏರು ಪೇರಾದರೂ ಕೂಡಲೇ ವೈದ್ಯರಲ್ಲಿ ಪರೀಕ್ಷಿಸಬೇಕು. ಸರಕಾರ ಕೂಡ ಕಲಾವಿದರ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡುತ್ತೇನೆ’ ಎಂದರು.

‘ಸೌಕೂರು ಮೇಳದ ಇಬ್ಬರು ಕಲಾವಿದರು ಅಪಘಾತಕ್ಕೆ ಬಲಿಯಾಗಿದ್ದರು.ಅವರಿಗೆ ನಮ್ಮ ಫೌಂಡೇಶನ್ ನೆರವಿನಿಂದ 8 ಲಕ್ಷ ರೂ. ವಿಮೆಯನ್ನು ನೀಡಿದ್ದೆವು ಎಂದರು.

7 ವರ್ಷ ದಿಂದ 8.5 ಕೋಟಿ ರೂ. ಸಹಾಯ ಧನವನ್ನು ದಾನಿಗಳ ನೆರವಿನಿಂದ ನಮ್ಮ ಫೌಂಡೇಶನ್ ವತಿಯಿಂದ ಯಕ್ಷಗಾನ, ಭೂತಾರಾಧನೆ ಮತ್ತು ನಾಟಕ ರಂಗದ ಕಲಾವಿದರಿಗೆ ನೀಡಿದ್ದೇವೆ ಎಂದರು.

ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ (ಡಿ.22) ರಾತ್ರಿ ಕಟೀಲಿನ ಸರಸ್ವತಿ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ರಂಗಸ್ಥಳದಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು. ಡಿ. 5 ರಂದು ಕಟೀಲು ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ ಅಚ್ಯುತ ನಾಯಕ್ ( 45) ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.