Kateel Mela: ಯಕ್ಷಗಾನ ಸದ್ಯಕ್ಕೆ ಕಾಲಮಿತಿಯಲ್ಲೇ ಮುಂದುವರಿಕೆ
Team Udayavani, Jan 13, 2024, 11:23 PM IST
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ಯಕ್ಷಗಾನ ಮಂಡಳಿಯ ಆರೂ ಮೇಳಗಳೂ ಕಾಲಮಿತಿಯಲ್ಲಿಯೇ ಸದ್ಯ ಯಕ್ಷಗಾನ ಪ್ರದರ್ಶನ ಮುಂದುವರಿಸಲಿವೆ.
ಜ. 14ರಿಂದ ರಾತ್ರಿ ಪೂರ್ತಿ ಯಕ್ಷಗಾನ ಪ್ರದರ್ಶಿಸುವ ಪದ್ಧತಿಗೆ ಮರಳುತ್ತಿರುವುದಾಗಿ ಕೆಲವು ದಿನಗಳ ಹಿಂದೆ ದೇವಸ್ಥಾನದ ಆಡಳಿತ ಸಮಿತಿ ಪ್ರಕಟನೆ ನೀಡಿತ್ತು. ಆದರೆ ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್ ಯಕ್ಷಗಾನವನ್ನು ರಾತ್ರಿ ಇಡೀ ಪ್ರದರ್ಶಿಸುವಾಗ ಶಬ್ದಮಾಲಿನ್ಯ ನಿಯಮಾವಳಿ, ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಆದೇಶಗಳ ಅಂಶವನ್ನು ಕಟ್ಟು ನಿಟ್ಟಾಗಿ ಅನುಸರಿಸಬೇಕು ಎಂದು ಜ. 10ರಂದು ಆದೇಶ ಹೊರಡಿಸಿದ್ದರು.
ರಾತ್ರಿ ಪೂರ್ತಿ ಯಕ್ಷಗಾನ ನಡೆಸುವಾಗ ಧ್ವನಿವರ್ಧಕ ಬಳಕೆಯಾದರೆ ಶಬ್ದಮಾಲಿನ್ಯ ಉಂಟಾ ಗುವ ಸಾಧ್ಯತೆ ಇದೆ ಎಂದು ಕಲಾವಿದರೂ ಯಕ್ಷಾಭಿಮಾನಿಗಳೂ ಭೀತಿ ವ್ಯಕ್ತಪಡಿಸಿದ್ದರು. ಇನ್ನೊಂದೆಡೆ ಮೇಳದ ಕೆಲವು ಕಲಾವಿದರೂ ಕಾಲಮಿತಿ ಪದ್ಧತಿಯನ್ನೇ ಮುಂದು ವರಿಸಬೇಕು ಎಂದು ಆಡಳಿತ ಸಮಿತಿಗೆ ಮನವಿ ಮಾಡಿದ್ದರು. ಈ ನಡುವೆ ಜ. 14ರಿಂದ ಪೂರ್ಣ ರಾತ್ರಿ ಆಟ ನಡೆಸುವುದೇ ಎಂದು ನಿರ್ಧರಿಸಿದ್ದ ಆಡಳಿತ ಮಂಡಳಿ ಸದ್ಯಕ್ಕೆ ಯೋಚನೆ ಕೈಬಿಟ್ಟಿದೆ.
ಕಾನೂನು ಸಲಹೆ ಪಡೆಯಲು ನಿರ್ಧಾರ
ಜಿಲ್ಲಾಧಿಕಾರಿ ಆದೇಶದ ಹಿನ್ನೆಲೆಯಲ್ಲಿ ಹೈಕೋರ್ಟ್, ಸುಪ್ರೀಂ ಕೋರ್ಟ್ಗಳ ಆದೇಶದ ಅಂಶವನ್ನೊಳಗೊಂಡಂತೆ ಯಕ್ಷಗಾನ ಇಡೀ ರಾತ್ರಿ ಪ್ರದರ್ಶನದ ಬಗ್ಗೆ ಕಾನೂನು ಸಲಹೆಗಾರರ ಮೊರೆಹೋಗಲು ನಿರ್ಧರಿಸಲಾಗಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಕೊಡೆತ್ತೂರುಗುತ್ತು ಸನತ್ ಕುಮಾರ್ ಶೆಟ್ಟಿ ಉದಯವಾಣಿಗೆ ತಿಳಿಸಿದ್ದಾರೆ.
ಇನ್ನು ಒಂದು ವಾರ ಅಥವಾ 10 ದಿನಗಳಲ್ಲಿ ನಮ್ಮ ವಕೀಲರು ಕಾನೂನು ಸಲಹೆ ನೀಡುವ ನಿರೀಕ್ಷೆ ಇದೆ. ಅಲ್ಲಿಯವರೆಗೆ ಈಗಿನಂತೆ ಕಾಲಮಿತಿಯಲ್ಲಿಯೇ ಆಟಗಳು ಮುಂದುವರಿಯುತ್ತವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ