ಕಟೀಲು ಬ್ರಹ್ಮಕಲಶ‌: ನೂತನ ಸ್ವರ್ಣ ಧ್ವಜಸ್ತಂಭ ಪ್ರತಿಷ್ಠೆ


Team Udayavani, Jan 25, 2020, 3:13 AM IST

jan-24

ಕಟೀಲು: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮೂರನೇ ದಿನವಾದ ಶುಕ್ರವಾರ ಬೆಳಗ್ಗೆ ನೂತನ ಸ್ವರ್ಣ ಧ್ವಜಸ್ತಂಭ ಪ್ರತಿಷ್ಠೆ ಜರಗಿತು. ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಧ್ವಜ ಕಲಶಾಭಿಷೇಕ, ಗರ್ಭಗುಡಿಯ ಮೇಲಿನ ಶಿಖರ ಕಲಶ ಪ್ರತಿಷ್ಠೆ, ತೀರ್ಥ ಮಂಟ ಪದ ಕಲಶ ಪ್ರತಿಷ್ಠೆಯೂ ದೇವ ಸ್ಥಾನದ ಶಿಬರೂರು ತಂತ್ರಿಗಳಾದ ವೇದ ವ್ಯಾಸ ತಂತ್ರಿಗಳ ಆಚಾರ್ಯತ್ವ, ಶಿಬರೂರು ಕೃಷ್ಣರಾಜ ತಂತ್ರಿಗಳ ಸಹಯೋಗ ದಲ್ಲಿ ಧಾರ್ಮಿಕ ಕಾರ್ಯಕ್ರಮ ಜರಗಿದವು. ಸಾಗುವಾನಿ ಮರವನ್ನು 2 ವರ್ಷಗಳ ಕಾಲ ಎಣ್ಣೆಯಲ್ಲಿ ಹಾಕಿಟ್ಟು ನಿರ್ಮಾಣ ಮಾಡಿದ ಧ್ವಜಸ್ತಂಭಕ್ಕೆ ಸುಮಾರು 8 ಕೆ.ಜಿ. ಚಿನ್ನವನ್ನು ಲೇಪನ ಮಾಡಲಾಗಿದೆ.

ಶುಕ್ರವಾರ ಬೆಳಗ್ಗೆ 5ರಿಂದ ಭಾಗೆಮತ್ಯ ಹೋಮ, ಲಕ್ಷ್ಮೀ ಸಹಸ್ರನಾಮ ಹೋಮ, ಹೊರಗಿನ ನಾಗಸನ್ನಿಧಿಯಲ್ಲಿ ಕಲಶಾಭಿಷೇಕ, ಆಶ್ಲೇಷಾಬಲಿ, ಬೆಳಗ್ಗೆ ಭ್ರಾಮರೀ ವನದಲ್ಲಿ ಬಿಂಬಶುದ್ಧಿ, ನವಗ್ರಹ ಸ್ಥಾಪನೆ, ಸೂರ್ಯಯಾಗ, ಸಹಸ್ರ ಚಂಡಿಕಾ ಸಪ್ತ ಶತೀ ಪಾರಾಯಣ, ಕೋಟಿ ಜಪಯಜ್ಞ, ನವಗ್ರ ಹವನ, ನಕ್ಷತ್ರವನ, ರಾಶಿವನದಲ್ಲಿ ಆಯಾ ವೃಕ್ಷಗಳ ಸ್ಥಾಪನೆ ಜರಗಿದವು.

ಸಂಜೆ 5ರಿಂದ ಅದ್ಭುತಶಾಂತಿ, ಉತ್ಸವ ಬಲಿ, ಚಾಮುಂಡಿ ಸನ್ನಿಧಿಯಲ್ಲಿ ವಾಸ್ತು ಪೂಜೆ, ಕಲಶಾಭಿಷೇಕ, ಬ್ರಹ್ಮರ ಸನ್ನಿಧಿ ಯಲ್ಲಿ ವಾಸ್ತು ಪೂಜೆ ಇತ್ಯಾದಿ, ಭ್ರಾಮರೀವನದಲ್ಲಿ ಆಶ್ಲೇಷಾ ಬಲಿ, ನಾಗ ಮತ್ತು ವ್ಯಾಘ್ರ ಚಾಮುಂಡಿ ಕಲಶಾಭಿಷೇಕ, ಕೋಟಿ ಜಪಯಜ್ಞ, ಸಹಸ್ರ ಚಂಡಿಕಾ ಸಪ್ತಶತೀ ಪಾರಾಯಣ, ಶ್ರೀ ಭ್ರಾಮರೀ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರಗಿದವು.

ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನುವಂಶಿಕ ಮೊಕ್ತೇಸರ ಸನತ್‌ಕುಮಾರ್‌ ಶೆಟ್ಟಿ ಕೊಡೆತ್ತೂರುಗುತ್ತು, ಆನು ವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಶ್ರೀಹರಿ ನಾರಾಯಣದಾಸ ಆಸ್ರಣ್ಣ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಗೌರವಾಧ್ಯಕ್ಷ ಉಮಾನಾಥ ಕೋಟ್ಯಾನ್‌, ಸುಧೀರ್‌ ಶೆಟ್ಟಿ ಕೊಡೆತ್ತೂರುಗುತ್ತು, ಬಿಪಿನ್‌ ಪ್ರಸಾದ್‌ ಶೆಟ್ಟಿ, ಮುಂಬಯಿ ಸಮಿತಿಯ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕರ್ನಿರೆ ವಿಶ್ವನಾಥ ಶೆಟ್ಟಿ, ಧ್ವಜಸ್ತಂಭದ ಕೊಡುಗೆ ನೀಡಿದ ಕೊಡೆತ್ತೂರು ಮಾಗಂದಡಿ ಯಜಮಾನ ಪಾಂಡುರಂಗ ಎನ್‌. ಶೆಟ್ಟಿ, ದೇವದತ್ತ ಶೆಟ್ಟಿ, ನಿರಂಜನ ಶೆಟ್ಟಿ, ರಾಜೇಂದ್ರ ಶೆಟ್ಟಿ, ಜಗದೀಶ ಆಳ್ವ, ಶ್ರೀಧರ ಆಳ್ವ, ಹರ್ಷರಾಜ ಶೆಟ್ಟಿ ಜಿ.ಎಂ., ಅನಿಲ್‌ ಕುಮಾರ್‌ ಶೆಟ್ಟಿ, ಕಿರಣ್‌ ಶೆಟ್ಟಿ, ನಿತಿನ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಇಂದಿನ ಕಾರ್ಯಕ್ರಮಗಳು
ಕಟೀಲು: ಬ್ರಹ್ಮಕಲಶೋತ್ಸವದ ನಾಲ್ಕನೇ ದಿನವಾದ ಶನಿವಾರದಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿವೆ. ಬೆಳಗ್ಗೆ 5ಕ್ಕೆ ಧಾರಾಶುದ್ಧಿ – ಯಜುರ್ವೇದ ಪಾರಾಯಣ, ಅಂಭೃಣೀಸೂಕ್ತ ಹೋಮ, ಲಕ್ಷ್ಮೀ ಹೃದಯ ಹೋಮ, ಗಣಪತಿ ಬಿಂಬಶುದ್ಧಿ, 108 ತೆಂಗಿನಕಾಯಿ ಗಣಹೋಮ, ಗಣಪತಿ ಪ್ರಾಯಶ್ಚಿತ್ತ, ಬ್ರಹ್ಮರ ಸನ್ನಿ ಧಿಯಲ್ಲಿ ಕಲಶಾಭಿಷೇಕ ನಡೆಯಲಿವೆ. ಬೆಳಗ್ಗೆ ಭ್ರಾಮರೀವನದಲ್ಲಿ ಚಂದ್ರಯಾಗ, ಸಹಸ್ರಚಂಡಿಕಾ ಸಪ್ತಶತೀಪಾರಾಯಣ, ಕೋಟಿ ಜಪಯಜ್ಞ, ನವಗ್ರಹವನ, ನಕ್ಷತ್ರವನ, ರಾಶಿವನದಲ್ಲಿ ಆಯಾ ವೃಕ್ಷಗಳ ಸ್ಥಾಪನೆ ಜರಗಲಿದ್ದು, ಸಂಜೆ 5ಕ್ಕೆ ಭೂವರಾಹ ಹೋಮ, ಸ್ವಯಂವರ ಪಾರ್ವತೀ ಪೂಜೆ ಹಾಗೂ ಹೋಮ, ಉತ್ಸವಬಲಿ, ರಕ್ತೇಶ್ವರೀ ಸನ್ನಿ ಧಿಯಲ್ಲಿ ವಾಸ್ತುಪೂಜೆ, ಭ್ರಾಮರೀವನದಲ್ಲಿ ಕೋಟಿಜಪಯಜ್ಞ, ಸಹಸ್ರಚಂಡಿಕಾ ಸಪ್ತಶತೀ ಪಾರಾಯಣ ನಡೆಯಲಿವೆ.

ಸಾಂಸ್ಕೃತಿಕ ಕಾರ್ಯಕ್ರಮ
ಜ. 25ರಂದು ಬೆಳಗ್ಗೆ 9ರಿಂದ 10.45ರ ವರೆಗೆ ಮಂಗಳವಾದ್ಯ ವಿ| ಡಿ.ಕೆ. ಸುರೇಶ್‌ ತವಿಲ್‌ ಮತ್ತು ಬಳಗ, 11 ರಿಂದ 12.45ರ ವರೆಗೆ ಶ್ರದ್ಧಾ ಭಟ್‌, ನಾಯಾರ್‌ಪಳ್ಳ ಇವರಿಂದ ಹರಿಕಥೆ, ಮಧ್ಯಾಹ್ನ 1ಕ್ಕೆ ವಿ| ರಶ್ಮೀ ಚಿದಾನಂದ ಮತ್ತು ಬಳಗ, ನೃತ್ಯ ಭಾರತಿ ಕದ್ರಿಯವರಿಂದ ನವದುರ್ಗಾ ನಮಃ ನೃತ್ಯರೂಪಕ, ಕೃತಿ ಭಟ್‌ ಮತ್ತು ಬಳಗ, ಚೆನ್ನೈ ಇವರಿಂದ ತುಳಸೀದಾಸರ ಹಾಡುಗಾರಿಕೆ, ರಾತ್ರಿ 7ಕ್ಕೆ ವಯಲಿನ್‌ ದ್ವಂದ್ವ ರಮಣ ಬಾಲಚಂದ್ರ ಮತ್ತು ವಿ| ವಿಟ್ಟಲ್‌ ರಾಮ್‌ ಮೂರ್ತಿಯವರಿಂದ ,ರಾತ್ರಿ 9ರಿಂದ ಕೂಚುಪುಡಿ ನೃತ್ಯ ವೈಜಯಂತಿ ಕಾಶಿ, ಪ್ರತೀಕ್ಷಾ ಕಾಶಿ ತಂಡದಿಂದ, ರಾತ್ರಿ 11ಕ್ಕೆ ದಶಾವತಾರ, ನಮೋನಮೋ ಭಾರತ ಕಟೀಲು ಪ್ರೌಢಶಾಲೆ ವಿದ್ಯಾರ್ಥಿಗಳಿಂದ ನೃತ್ಯ ರೂಪಕ ನಡೆಯಲಿದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.