ಕಟೀಲು: 200ಕ್ಕೂ ಅಧಿಕ ಸ್ವಯಂಸೇವಕರಿಂದ ಶ್ರಮದಾನ
Team Udayavani, Jan 12, 2020, 8:51 PM IST
ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಕ್ಷೇತ್ರದಲ್ಲಿ ವಿವಿಧೆಡೆ 200ಕ್ಕೂ ಅಧಿಕ ಸ್ವಯಂಸೇವಕರಿಂದ ರವಿವಾರದಂದು ಕರಸೇವೆ ಜರಗಿತು.
ಸಿತ್ಲಬೈಲಿನಲ್ಲಿ ನಿರ್ಮಾಣಗೊಂಡ ಪಾಕಶಾಲೆ ಅಡುಗೆಗೆ ಬೇಕಾಗುವ ದೊಡ್ಡ ಮಟ್ಟದ 54 ಒಲೆಗಳು ಸಿದ್ದಗೊಳ್ಳುತ್ತಿದ್ದು, ಬೇಕಾಗುವ ಉರುವಲು ಕಟ್ಟಿಗೆಗಳನ್ನು ಸ್ವಯಂ ಸೇವಕರು ಸಂಗ್ರಹಿಸಿದರು.
ಕಟೀಲು ಭೋಜನ ಶಾಲೆಯ ಹಿಂದುಗಡೆ ಹಾಗೂ ವಿಶೇಷ ವಿಶ್ರಾಂತಿಗೃಹದ ಹಿಂಭಾಗದಲ್ಲಿ ರಸ್ತೆಯನ್ನು 40 ಅಡಿಗಳಷ್ಟು ವಿಸ್ತರಣೆಗೊಳಿಸಲಾಗಿದ್ದು ಅತಿಥಿಗೃಹದ ಹಿಂಭಾಗದಲ್ಲಿ ರಸ್ತೆಯ ಬದಿಯಲ್ಲಿ ಇಂಟರ್ಲಾಕ್ನ್ನು ಅಳವಡಿಸಲಾಯಿತು.
ನೂತನ ಪಾಕಶಾಲೆಯ ಹೊರಭಾಗದಲ್ಲಿ ನೆಲಕ್ಕೆ ಇಂಟರ್ ಲಾಕ್ ಆಳವಡಿಕೆ ಕಾರ್ಯ ನಡೆದಿದೆ. ಪ್ರಸ್ತುತ ಈಗ ಇರುವ ಭೋಜನ ಶಾಲೆಯ ಮುಂಭಾಗದಲ್ಲಿ ಹಾಗೂ ಶೌಚಾಲಯದ ಬದಿಯಲ್ಲಿ ಇರುವ ಜಾಗದಲ್ಲಿ ಕೈತೋಟ ನಿರ್ಮಾಣ ಕೆಲಸವು ಪ್ರಗತಿಯಲ್ಲಿದೆ.
ಪಾರ್ಕಿಂಗ್ ಸ್ಥಳದಲ್ಲಿ ಅಂತಿಮವಾಗಿ ಜೆಸಿಬಿ, ಹಿಟಾಚಿಗಳು, ರಸ್ತೆ ನಿರ್ಮಾಣದ ಕಾರ್ಯದಲ್ಲಿ ತೊಡಗಿಕೊಂಡಿವೆ. ದೇವಸ್ಥಾನದ ರಥಬೀದಿಯಲ್ಲಿರುವ ಮೂರು ಮಹಡಿಯ ದುರ್ಗಾಪ್ರಸಾದ್ ಕಟ್ಟಡದ ತೆರವು ಕಾರ್ಯಭರದಿಂದ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?