ಕೆಮ್ಮಲೆ ಶ್ರೀ ನಾಗಬ್ರಹ್ಮ, ಬ್ರಹ್ಮರ ಮೂಲಸ್ಥಾನ ಬ್ರಹ್ಮಕಲಶಕ್ಕೆ ಅಣಿ


Team Udayavani, Mar 3, 2020, 7:10 AM IST

kemmale-brahmakalasha

ಸುಳ್ಯ: ತುಳುನಾಡಿನ ವೀರ ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯರ ಕುಲದೇವರಾದ ಕೆಮ್ಮಲೆ ಶ್ರೀ ನಾಗಬ್ರಹ್ಮ, ಶ್ರೀ ಬ್ರಹ್ಮರು ಮತ್ತು ಉಳ್ಳಾಕ್ಲು, ಪರಿವಾರ ದೈವಗಳ ಮೂಲಸ್ಥಾನ ಜೀರ್ಣೋದ್ಧಾರ ಕಾರ್ಯ ಅಂತಿಮ ಹಂತದಲ್ಲಿದ್ದು, ಎಪ್ರಿಲ್‌ನಲ್ಲಿ ಪ್ರತಿಷ್ಠಾ ಕಾರ್ಯಕ್ಕೆ ಅಣಿಯಾಗಿದೆ.

ಐನ್ನೂರು ವರ್ಷಗಳ ಇತಿಹಾಸ ಹೊಂದಿರುವ ಕೋಟಿ-ಚೆನ್ನಯರ ಅನೇಕ ಐತಿಹ್ಯಗಳ ನೆಲೆವೀಡಾಗಿರುವ ಎಣ್ಮೂರಿನ ನಾಗಬ್ರಹ್ಮ ಕೋಟಿ-ಚೆನ್ನಯ ಆದಿ ಗರಡಿಯಿಂದ 2 ಕಿ.ಮೀ. ದೂರದಲ್ಲಿರುವ ಎಣ್ಮೂರು ಗ್ರಾಮದ ಕೆಮ್ಮಲೆ (ಹೇಮಳ) ಕ್ಷೇತ್ರದಲ್ಲಿ ಈಗ ಜೀರ್ಣೋದ್ಧಾರದ ಪುಣ್ಯ ಕ್ಷಣ. ಅಪಾರ ಭಕ್ತ ಸಮುದಾಯದ ನಂಬಿಕೆವುಳ್ಳ ಈ ನೆಲದಲ್ಲಿ ಊರ-ಪರವೂರ ಭಕ್ತರ ಸಮಾಗಮ ಹಾಗೂ ಸರಕಾರದ ನೆರವಿನೊಂದಿಗೆ ಪುನರ್‌ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.

1.25 ಕೋಟಿ ರೂ. ವೆಚ್ಚ
ಶಿಥಿಲಾವಸ್ಥೆಯಲ್ಲಿದ್ದ ಸಾನ್ನಿಧ್ಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ಊರವರು ಮುಂದಾಗಿ ದೈವಜ್ಞರಾದ ಶ್ರೀಧರನ್‌ ಪೆರುಂಬಾಳ್‌ ಮತ್ತು ಲಕ್ಷ್ಮೀನಾರಾಯಣ ಅಮ್ಮಂಗೋಡು ನೇತೃತ್ವದಲ್ಲಿ ಪ್ರಶ್ನಾ ಚಿಂತನೆ ಇರಿಸಿ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಡಿ ಇಡಲಾಯಿತು. ಜೀರ್ಣೋದ್ಧಾರ ಸಮಿತಿ ರಚಿಸಿಕೊಂಡು 2016ರ ಡಿಸೆಂಬರ್‌ 21 ಮತ್ತು 25ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಅವರ ನೇತೃತ್ವದಲ್ಲಿ ಕೆಮ್ಮಲೆ ಮೂಲಸ್ಥಾನದಲ್ಲಿ ಸರ್ಪಸಂಸ್ಕಾರ, ದೇವರ ಅನುಜ್ಞಾ ಕಲಶ ಮೊದಲಾದ ದೇವತಾ ಕಾರ್ಯಗಳು ನಡೆದಿವೆ.

ವಾಸ್ತು ಶಿಲ್ಪಿ ಎಸ್‌.ಎಂ. ಪ್ರಸಾದ್‌ ಮುನಿಯಂಗಳ ಮಾರ್ಗದರ್ಶನದಲ್ಲಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. 28 ಲಕ್ಷ ರೂ. ವೆಚ್ಚದಲ್ಲಿ ಶಿಲಾಮಯ ನಾಗಬ್ರಹ್ಮ ದೇವಸ್ಥಾನ, 8 ಲಕ್ಷ ರೂ. ವೆಚ್ಚದಲ್ಲಿ ಬ್ರಹ್ಮರಗುಂಡ, 8 ಲಕ್ಷ ರೂ. ವೆಚ್ಚದಲ್ಲಿ ಚಾಮುಂಡಿ ದೇವಸ್ಥಾನ, 10 ಲಕ್ಷ ರೂ. ವೆಚ್ಚದಲ್ಲಿ ಉಳ್ಳಾಕ್ಲು ಭಂಡಾರದ ಬೀಡು, 15 ಲಕ್ಷ ರೂ. ವೆಚ್ಚದಲ್ಲಿ ಉಳ್ಳಾಕ್ಲು ಮಾಡ, 35 ಲಕ್ಷ ರೂ. ವೆಚ್ಚದಲ್ಲಿ ಗೋಪುರ, ನಾಗಾಲಯ ಸಹಿತ ವಿವಿಧ ಕಟ್ಟೆಗಳ ನಿರ್ಮಾಣ ಕಾಮಗಾರಿಗೆ 1.25 ಕೋಟಿ ರೂ. ವೆಚ್ಚದ ಯೋಜನೆ ಸಿದ್ಧಪಡಿಸಿ ಅದರಂತೆ ಕೆಲಸ ಕಾರ್ಯ ಸಾಗುತ್ತಿದೆ.

ತಾಯಿಯ ಹರಕೆ ತೀರಿಸಲು ಬಂದರು
ಪಡುಮಲೆ ಬಲ್ಲಾಳರ ಬೀಡಿನಿಂದ ಹೊರಟು ಬಾಕಿಮಾರು ಗದ್ದೆಯ ಮೂಲಕ ಇಳಿದು ಬಂದ ಕೋಟಿ-ಚೆನ್ನಯರು ಪಂಜ ಸೀಮೆಗೆ ಪ್ರವೇಶಿಸಿದರು.
ಎಣ್ಮೂರಿನಲ್ಲಿರುವ ಕೋಟಿ-ಚೆನ್ನಯರ ಸಮಾಧಿ ಸ್ಥಳ, ಅಕ್ಕ ಕಿನ್ನಿದಾರು ಮನೆ – ಹೀಗೆ ಪರಿಸರದಲ್ಲಿ ಹತ್ತಾರು ಕುರುಹುಗಳು ಇಲ್ಲಿ ಈ ವೀರ ಕಾರಣಿಕ ಶಕ್ತಿಗಳು ಸಂಚರಿಸಿದ್ದಕ್ಕೆ ಸಾಕ್ಷಿಯಂತಿವೆ. ಇದರಲ್ಲಿ ಕೆಮ್ಮಲೆ ನಾಗ ಬ್ರಹ್ಮಸ್ಥಾನವೂ ಒಂದು. ಬಲ್ಲಾಳರ ಕಾಲದಲ್ಲಿ ತಾಯಿ ದೇಯಿ ಬೈದ್ಯೆತಿ ಹೇಳಿದ ಹರಕೆ ತೀರಿಸಲೆಂದು ಕೋಟಿ-ಚೆನ್ನಯರು ಕೆಮ್ಮಲೆ ನಾಗಬ್ರಹ್ಮನ ಕ್ಷೇತಕ್ಕೆ ಬರುತ್ತಾರೆ.

ಆದರೆ ಅದಾಗಲೆ ನಾಗಬ್ರಹ್ಮನ ಪೂಜೆ ಮುಗಿಸಿ ಬರುವ ಅರ್ಚಕರು ಎದುರಾದರು. ನಮ್ಮ ತಾಯಿ ಹೇಳಿದ ಹರಕೆಯನ್ನು ಸಲ್ಲಿಸಬೇಕಾಗಿದೆ, ತಾವು ಬರಬೇಕೆಂದು ಕೇಳಿಕೊಂಡರು. ನಾನು ಪೂಜೆ ಮಾಡಿ ಬಾಗಿಲು ಹಾಕಿದ್ದೇನೆ. ನಾಳೆ ಬನ್ನಿ ಎಂದು ಹೇಳಿ ಅರ್ಚಕ ತನ್ನ ದಾರಿ ಹಿಡಿದರು. ಆದರೆ ಕೋಟಿ-ಚೆನ್ನಯರು ಅರ್ಧ ದಾರಿಯಿಂದ ತಿರುಗಿ ಹೋಗಲಾರೆವೆಂದು ಹೇಳಿ ಮುಂದಕ್ಕೆ ತೆರಳಿದರು.

ನಂದಾದೀಪ ಉರಿಯಿತು
ನಾಗಬ್ರಹ್ಮನ ಗುಡಿಯ ಎದುರಿನಲ್ಲಿ ನಿಂತು ನಾವು ಸತ್ಯದಲ್ಲಿ ಹುಟ್ಟಿ ಸತ್ಯದಲ್ಲಿ ಬೆಳೆದವರಾದರೆ ಬಾಗಿಲು ತೆರೆದು ನಂದಾದೀಪ ಉರಿಯಲಿ ಎಂದು ಪ್ರಾರ್ಥನೆ ಮಾಡಿದರು. ಕೆಲವೇ ಕ್ಷಣಗಳಲ್ಲಿ ಬಾಗಿಲು ತೆರೆಯಿತು. ನಂದಾದೀಪ ಬೆಳಗಿತು. ನಾಗಬ್ರಹ್ಮರೇ ಅರ್ಚಕರ ವೇಷದಲ್ಲಿ ಪೂಜೆ ಸಲ್ಲಿಸಿದರು. ಕೋಟಿ-ಚೆನ್ನಯರು ನಾಗಬ್ರಹ್ಮರಿಗೆ ಮುಷ್ಟಿ ತುಂಬ ಹಣ, ಬುಟ್ಟಿ ತುಂಬ ಹೂವು ಅರ್ಪಿಸಿ ಗುಡಿಗೆ ಪ್ರದಕ್ಷಿಣೆ ಬಂದು, ಅಡ್ಡಬಿದ್ದು ಹರಕೆ ಸಂದಾಯ ಮಾಡಿದರು. ತೆರೆದ ಬಾಗಿಲು ಹಾಕಿಕೊಂಡಿತು, ದೀಪ ಸಣ್ಣದಾಯಿತು. ಕೋಟಿ-ಚೆನ್ನಯರು ಎಣ್ಮೂರು ಬೀಡಿಗೆ ಸೇರಿದ ಮೇಲೂ ನಾಗಬ್ರಹ್ಮನ ದರ್ಶನ ಪಡೆಯುತ್ತಲೇ ಇದ್ದರು ಎನ್ನುತ್ತದೆ ಇಲ್ಲಿನ ಇತಿಹಾಸ.

ಕಾರಣಿಕ ಕ್ಷೇತ್ರ
ಕೆಮ್ಮಲೆ ಕ್ಷೇತ್ರ ಇತಿಹಾಸ ಪ್ರಸಿದ್ಧವಾಗಿದ್ದು, ಜಿಲ್ಲೆ, ಹೊರ ಜಿಲ್ಲೆಗಳಿಂದ ಭಕ್ತರು ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ವೀರ ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯರ ಕುಲದೇವರಾದ ನಾಗಬ್ರಹ್ಮನ ಕಾರಣಿಕ ಕ್ಷೇತ್ರ ಇದಾಗಿದೆ. ಜೀರ್ಣೋದ್ಧಾರ ಪ್ರಗತಿಯಲ್ಲಿದ್ದು, ಎಪ್ರಿಲ್‌ 2 ಮತ್ತು 3ಕ್ಕೆ ಬ್ರಹ್ಮಕಲಶಕ್ಕೆ ದಿನ ನಿಗದಿಪಡಿಸಲಾಗಿದೆ.
– ಜಯರಾಮ ಐಪಳ, ಕಾರ್ಯದರ್ಶಿ, ಶ್ರೀ ಕ್ಷೇತ್ರ ಕೆಮ್ಮಲೆ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.