ಕೆಮ್ಮಿಂಜೆ ಸುಬ್ರಹ್ಮಣ್ಯ ತಂತ್ರಿ ನಿಧನ
Team Udayavani, Apr 25, 2019, 5:27 PM IST
ಪುತ್ತೂರು: ಕೆಮ್ಮಿಂಜೆ ಷಣ್ಮುಖ ಶ್ರೀ ಮಹಾವಿಷ್ಣು ಸೇವಾ ಟ್ರಸ್ಟ್ ಇದರ ಉಪಾಧ್ಯಕ್ಷ ಮತ್ತು ಪ್ರಗತಿಪರ ಕೃಷಿಕ ಕೆಮ್ಮಿಂಜೆ ಸುಬ್ರಹ್ಮಣ್ಯ ತಂತ್ರಿ ಅವರು ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದರು. ತಂತ್ರಿ ಅವರಿಗೆ 60 ವರ್ಷ ಪ್ರಾಯವಾಗಿತ್ತು.
ಸುಬ್ರಹ್ಮಣ್ಯ ತಂತ್ರಿಯವರು ಪುತ್ತೂರಿನ ಸುಪ್ರಸಿದ್ಧ ತಂತ್ರಿ ಮನೆತನಕ್ಕೆ ಸೇರಿದವರಾಗಿದ್ದು ಕೆಮ್ಮಿಂಜೆ ಕೇಶವ ತಂತ್ರಿಯವರ ಹಿರಿಯ ಪುತ್ರರಾಗಿದ್ದಾರೆ.
ಈ ಹಿಂದೆ ಪುತ್ತೂರು ನಗರದ ದರ್ಬೆಯಲ್ಲಿ ಮೆಡಿಕಲ್ ಅಂಗಡಿಯ ಮಾಲಕತ್ವವನ್ನು ಹೊಂದಿದ್ದ ಸುಬ್ರಹ್ಮಣ್ಯ ತಂತ್ರಿಯವರು ತಮ್ಮ ತಂದೆಯವರು ನಿಧನ ಹೊಂದಿದ ಬಳಿಕ ಉದ್ಯಮವನ್ನು ತೊರೆದು ಸಂಪೂರ್ಣವಾಗಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.
ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲೂ ಸುಬ್ರಹ್ಮಣ್ಯ ತಂತ್ರಿಯವರು ಸಕ್ರಿಯರಾಗಿದ್ದರು. ಮಜಲುಮಾರು ಉಮಾಮಹೇಶ್ವರ ದೇವಸ್ಥಾನದ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ನ ಉಪಾಧ್ಯಕ್ಷರಾಗಿ, ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಗೌರವಾಧ್ಯಕ್ಷರಾಗಿಯೂ ಇವರು ಕಾರ್ಯನಿರ್ವಹಿಸುತ್ತಿದ್ದರು.
ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್