ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಮಾಜಿ ಪ್ರಧಾನ ಅರ್ಚಕ ಕೇಶವ ಜೋಗಿತ್ತಾಯ ನಿಧನ
Team Udayavani, May 24, 2022, 10:23 PM IST
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ಕೇಶವ ಜೋಗಿತ್ತಾಯ(88) ಮೇ 24 ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.
ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ತನ್ನೀರುಪಂಥ ಬಂಗಾಲಾಯಿಯವರಾದ ಅವರು ಸುಬ್ರಹ್ಮಣ್ಯ ದೇಗುಲದಲ್ಲಿ ಪ್ರಧಾನ ಅರ್ಚಕರಾಗಿ 50 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಜೋತಿಷ ಶಾಸ್ತ್ರ ಪರಿಣಿತರಾಗಿದ್ದು ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಭವಿಷ್ಯ ಹೇಳಿದ ಪ್ರಕಾರ ನಡೆದಿದ್ದು, ಅವರ ಕಾಲದಲ್ಲೇ ನಿವೃತ್ತಿಯ ಅನಂತರ ಕ್ಷೇತ್ರದ ಸೇವೆಗೆ ನಿಯುಕ್ತಿಗೊಳಿಸಿದ್ದರು.
ಕುಕ್ಕೆ ದೇಗುಲದ ಬ್ರಹ್ಮಕಲಶ ಅವರು ಪ್ರಧಾನ ಅರ್ಚಕರಾಗಿದ್ದ ಅವಧಿಯಲ್ಲೇ ನಡೆದಿತ್ತು. ಸಚಿನ್ ತೆಂಡೂಲ್ಕರ್ ಸಹಿತ ದೇಶ ವಿದೇಶದ ವಿವಿಧ ರಂಗದವರು, ಬಾಲಿವುಡ್, ಹಾಲಿವುಡ್ ತಾರೆಯರು ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಇವರು ಕಾರಣರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
ಇದನ್ನೂ ಓದಿ : ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ.ಶರವಣ ನಾಮಪತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ