ಕೆಎಫ್ ಡಿಸಿ : ಧರಣಿ ಮುಂದುವರಿಕೆ


Team Udayavani, Nov 22, 2017, 2:48 PM IST

22-Nov-11.jpg

ಸುಳ್ಯ : ನಗರ ಸಮೀಪದ ಮೇದಿನಡ್ಕ ರಬ್ಬರ್‌ ಕಾರ್ಖಾನೆ ಎದುರು ನಡೆಯುತ್ತಿರುವ  ಕೆ ಎಫ್ ಡಿಸಿ  ನೌಕರರ ಅನಿರ್ದಿಷ್ಟಾವದಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಇಲಾಖೆ ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರ ಭೇಟಿ ಮಾತುಕತೆ ಬಳಿಕವೂ ನ. 29ರ ವರೆಗೆ ಮುಂದುವರಿಯಲಿದೆ.

ಸೋಮವಾರ ಕೆ ಎಫ್ ಡಿಸಿ ಆಡಳಿತ ನಿರ್ದೇಶಕರು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ ಧರಣಿ ನಿರತ ಕೆ ಎಫ್ ಡಿಸಿ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದರು. ಮಂಗಳವಾರ ನಿಗಮದ ಕಚೇರಿಯಲ್ಲಿ ಕಾರ್ಮಿಕ ಸಂಘಗಳೊಂದಿಗೆ ಕುಂದುಕೊರತೆ ಸಭೆ ನಡೆದಿದ್ದು, ಅದಕ್ಕೂ ಮೊದಲು ರಬ್ಬರ್‌ ಕಾರ್ಖಾನೆಯ ಕಚೇರಿಯಲ್ಲಿ ಮಾತುಕತೆ ನಡೆದಿತ್ತು. ಇಲಾಖೆಯ ಆಡಳಿತ ನಿರ್ದೇಶಕರಾಗಿರುವ ಐಎಫ್ಎಸ್‌ ಅಧಿಕಾರಿ ವಿದ್ಯಾಸಾಗರ್‌ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಐಎಫ್ಎಸ್‌ ಅಧಿಕಾರಿ ಕಮಲಾ ಮತ್ತು ಸ್ಥಳೀಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ನಡುವೆ ಜಿಲ್ಲಾ ಕಾಂಗ್ರೆಸ್‌ ಕಾರ್ಮಿಕ ಘಟಕದ ಅಧ್ಯಕ್ಷ ಪುರಂದರ ಹೆಗ್ಡೆ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌. ಜಯಪ್ರಕಾಶ ರೈ, ಕೆಪಿಸಿಸಿ ಸದಸ್ಯ ಡಾ| ರಘು, ನ.ಪಂ. ಸದಸ್ಯ ಗೋಕುಲದಾಸ್‌ ಮತ್ತಿತರನ್ನೊಳಗೊಂಡ ನಿಯೋಗ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಬಳಿಕ ಅಧಿಕಾರಿಗಳು ತಿಳಿಸಿದ ನಿರ್ಧಾರದೊಂದಿಗೆ ಧರಣಿ ನಿರತರಲ್ಲಿಗೆ ಆಗಮಿಸಿ ಮಾತುಕತೆ ನಡೆಸಿದರು. ನ. 29ರಂದು ಸಚಿವರು ಮತ್ತು ಕೆಎಫ್ಡಿಸಿನ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲು ಒಪ್ಪಿಕೊಂಡಿದ್ದು, ಧರಣಿ ಕೈಬಿಡುವಂತೆ ಮನವೊಲಿಸಿದರು. ಆದರೆ ತೋಟ ತೊಳಿಲಾಲಿರ್‌ ಸಂಘದ ಅಧ್ಯಕ್ಷ ಚಂದ್ರಲಿಂಗಂ ಮತ್ತು ತೋಟ ಮಜ್ದೂರ್‌ ಸಂಘದ ಅಧ್ಯಕ್ಷ ಸುಂದರಲಿಂಗಂ ಅವರು, ಸಚಿವರು ಭೇಟಿ ನೀಡುವ ಭರವಸೆ ನೀಡಿದರೂ, ಭೇಟಿಯಾಗುವರೆಗೆ ಧರಣಿ ಮುಂದುವರಿಸುವುದಾಗಿ ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದರು.

ನಿಗಮ ಕಚೇರಿಗೆ ಭೇಟಿ
ಧರಣಿ ನಿರತ ಕಾರ್ಮಿಕ ಸಂಘಟನೆಯವರನ್ನು ನಿಗಮ ಕಚೇರಿಯಲ್ಲಿ ಕರೆದ ಕುಂದುಕೊರತೆ ಸಭೆಗೆ ಪಾಲ್ಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದರು. ಅದರಂತೆ ತೆರಳಿದ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಸಭೆಯಲ್ಲಿ ತಮ್ಮ ಬೇಡಿಕೆಯನ್ನು ಮಂಡಿಸಿ 16 ಮಂದಿ ಕಾರ್ಮಿಕರನ್ನು ಮರುನಿಯೋಜಿಸುವಂತೆ ಒತ್ತಾಯಿಸಿದರು.

ಕೆ ಎಫ್ ಡಿಸಿ ರಬ್ಬರ್‌ ಕಾರ್ಖಾನೆಯ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 16 ಮಂದಿ ಖಾಯಂ ಕಾರ್ಮಿಕರನ್ನು ನೆಡುತೋಪುಗಳಿಗೆ ವರ್ಗಾವಣೆಗೊಳಿಸಿರುವುದರ ಹಿಂಪಡೆಯುವಂತೆ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನ. 16ರಿಂದ ಈ ಪ್ರತಿಭಟನೆ ನಡೆಯುತ್ತಿದೆ

ತುರ್ತು ಸಭೆ: ಪ್ರಯತ್ನ 
16 ಮಂದಿ ಕಾರ್ಮಿಕರ ವರ್ಗಾವಣೆಗೊಳಿಸಿದ್ದನ್ನು ಹಿಂಪಡೆದು ಮರುನಿಯೋಜಿಸಲು ಸಕಾರಣ ನೀಡಬೇಕಾಗಿರುವುದರಿಂದ ಹಾಗೂ ಒತ್ತಡಗಳ ಕಾರಣ ಅಧಿಕಾರಿಗಳು ನಿರ್ಧಾರ ಪ್ರಕಟಿಸಿಲ್ಲ. ಧರಣಿ ನಿರತರು ಮುಷ್ಕರ ಮುಂದುವರಿಸಿರುವುದರಿಂದ ನ. 29ರ ಮೊದಲು ದಿನ ನಿಗದಿಪಡಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರ ಸಮ್ಮುಖ ಮತ್ತು ಕೆಎಫ್ಡಿಸಿ ಆಡಳಿತ ನಿರ್ದೇಶಕರು, ಕಾರ್ಯವಾಹ ನಿರ್ದೇಶಕರ ಉಪಸ್ಥಿತಿಯಲ್ಲಿ ಧರಣಿ ನಿರತ ಸಂಘಟನೆಗಳ ಮುಖಂಡರ ಸಭೆ ಕರೆಯಲು ಪ್ರಯತ್ನ ನಡೆಯುತ್ತಿವೆ.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.