ಕಿಲ್ಪಾಡಿ ಗ್ರಾ.ಪಂ. ನರೇಗಾ ಸಭೆ 


Team Udayavani, Oct 31, 2017, 10:23 AM IST

31-Mng–2.jpg

ಮೂಲ್ಕಿ: ಕಿಲ್ಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ
223 ಜನರ ಹೆಸರು ನೋಂದಣಿಯಾಗಿದ್ದು, ಅದರಲ್ಲಿ 104 ಜನರು ಮಾತ್ರ ಕರ್ತವ್ಯ ನಿರತರಾಗಿದ್ದಾರೆ. ಉಳಿದವರ ನೋಂದಣಿ ರದ್ದಾಗಿದ್ದು, ಅವರು ಮರು ನೋಂದಣಿ ಮಾಡುವುದು ಅಗತ್ಯವಾಗಿದೆ ಎಂದು ಮಹಾತ್ಮಾಗಾಂದಿ ಉದ್ಯೋಗ ಖಾತರಿ ಯೋಜನೆ (ನರೇಗಾ)ಯ ತಾಲೂಕು ಸಂಯೋಜಕಿ ಪವಿತ್ರಾ ಶೆಟ್ಟಿ ತಿಳಿಸಿದರು.

ನೋಡಲ್‌ ಅಧಿಕಾರಿ ಪ್ರದೀಪ್‌ ಭಟ್‌ ಅಧ್ಯಕ್ಷತೆಯಲ್ಲಿ ಜರಗಿದ ನರೇಗಾ ಸಾಮಾಜಿಕ ಪರಿಶೋಧನ ಗ್ರಾಮ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಪಂಚಾಯತ್‌ನ ನರೇಗಾ ಕಾಮಗಾರಿಗಳಲ್ಲಿ ಕೆಲವು ನ್ಯೂನತೆಗಳನ್ನು ಅವರು ಗುರುತಿಸಿದರು. ಅದನ್ನು ಸರಿಪಡಿಸುವುದಾಗಿ ಪಿಡಿಒ ಹರಿಶ್ಚಂದ್ರ ಹೇಳಿದರು. ಮೂರು ದಿನಗಳಿಂದ ಪರಿಶೀಲನೆ ನಡೆಸಿ ನಾಲ್ಕನೇ ದಿನವಾದ ಸೋಮವಾರ ಯೋಜನೆಯ ಪಾರದರ್ಶಕತೆಗಾಗಿ ಗ್ರಾಮಸ್ಥರಿಗೆ ಮಾಹಿತಿ ನೀಡಲಾಯಿತು

ಪಂಚಾಯತ್‌ ಅಧ್ಯಕ್ಷ ಶ್ರೀಕಾಂತ್‌ ರಾವ್‌ ಮಾತನಾಡಿ, ಗ್ರಾಮದ ಜನರು ಯೋಜನೆಯಲ್ಲಿ ನೋಂದಾಯಿಸಿಕೊಂಡು ಸರಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದರು. ಸಾರ್ವಜನಿಕ ಬಾವಿಗಳ ರಿಪೇರಿ, ರಸ್ತೆ ಬದಿ ಹುಲ್ಲು ಕೀಳುವುದು ಮತ್ತು ಚರಂಡಿ ರಿಪೇರಿ ಮುಂತಾದ ಅಗತ್ಯ ಕೆಲಸಗಳನ್ನು ಈ ಯೋಜನೆಯಲ್ಲಿ ಸೇರಿ ಅವಕಾಶವನ್ನು
ಪಡೆಯಲು ಅಧಿಕಾರಿಗಳು ಸರಕಾರಕ್ಕೆ ವರದಿ ನೀಡಿ ಮಂಜೂರಾತಿ ಪಡೆದು ಪಂಚಾಯತ್‌ನ ಕೆಲವೊಂದು
ಕಾರ್ಯಕ್ರಮಗಳು ಸುಗಮವಾಗಲು ಸಹಕರಿಸುವಂತೆ ಮನವಿ ಮಾಡಿದರು.

6 ತಿಂಗಳಲ್ಲಿ 18 ಕಾಮಗಾರಿ
ಕಳೆದ ಆರು ತಿಂಗಳಲ್ಲಿ ಒಟ್ಟು 17 ವೈಯಕ್ತಿಕ ಕಾಮಗಾರಿಗಳು ಹಾಗೂ 1 ಸಾರ್ವಜನಿಕ ಕಾಮಗಾರಿಯು ಸುಮಾರು 6.52ಲಕ್ಷ ರೂ. ವೆಚ್ಚದಲ್ಲಿ ನಡೆದಿದೆ. ಇವುಗಳನ್ನು ಗ್ರಾಮ ಸಭೆಯ ಮುಂದೆ ಕ್ರಿಯಾ ಯೋಜನೆ ತಯಾರಿಸಿ ಸಭೆಯಲ್ಲಿ ನಿರ್ಣಯ ಮಂಡಿಸದೆ ಜಿಲ್ಲಾ ಪಂಚಾಯತ್‌ ಅಧಿಕಾರಿಗಳಿಗೆ ಅನುಮೋದನೆಗೆ ಕಳುಹಿಸಲಾಗಿರುವುದು ಸರಿಯಾದ
ಕ್ರಮವಲ್ಲ, ನಡಾವಳಿ ಪುಸ್ತಕವನ್ನು ನಿರ್ವಹಣೆ ಮಾಡಲಾಗಿಲ್ಲ ಹಾಗೂ ಎರಡು ಅವಧಿಗಳಿಂದ ಸಲಕರಣೆ ವೆಚ್ಚವನ್ನು ಫಲಾನುಭವಿಗಳಿಗೆ ನೀಡಲಾಗಿಲ್ಲ ಎಂದು ಪರಿಶೀಲನ ವರದಿಯಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ. ಉದ್ಯೋಗ ಚೀಟಿಯಲ್ಲಿ ಆರ್ಥಿಕ ವರ್ಷದ ಎಲ್ಲ ದಾಖಲೆಗಳನ್ನು ವಿವರವಾಗಿ ತೋರಿಸಲಾಗಿರುವುದು ಉತ್ತಮ ಕ್ರಮ ಎಂದು ಶ್ಲಾಘನೆ ವ್ಯಕ್ತವಾಯಿತು.

ಕಿರಿಯ ಎಂಜಿನಿಯರ್‌ಗಳಾದ ಅಜಿತ್‌ ಹಾಗೂ ಹರೀಶ್‌ ಉಪಸ್ಥಿತರಿದ್ದರು. ಸದಸ್ಯರಾದ ಅಬ್ದುಲ್‌ ಶರೀಫ್‌, ನಾಗರಾಜ್‌, ದಮಯಂತಿ ಶೆಟ್ಟಿ, ಶಾಂತಾ ಹಾಗೂ ಸಾವಿತ್ರಿ ಉಪಸ್ಥಿತರಿದ್ದರು.

ರೇಶನ್‌ ಕಾರ್ಡ್‌ ಸಮಸ್ಯೆ
ಕಿಲ್ಪಾಡಿ ಗ್ರಾಮದ ಪರಿಶಿಷ್ಟ ಜಾತಿಯ ಸುಬ್ಬಿ ಎಂಬವರು ತನಗೆ ರೇಶನ್‌ ಕಾರ್ಡು ನವೀಕರಣದ ಬಗ್ಗೆ ಆಗುತ್ತಿರುವ ಸಮಸ್ಯೆಯನ್ನು ತಿಳಿಸಿದಾಗ, ಅದನ್ನು ಪಂಚಾಯತ್‌ನ ಮಾಮೂಲು ಸಭೆಯಲ್ಲಿ ಚರ್ಚಿಸಲು ಅಧಿಕಾರಿಗಳು ಸೂಚಿಸಿದರು. ರೇಶನ್‌ ಕಾರ್ಡ್‌ ಸಮಸ್ಯೆಯಿಂದಾಗಿ ತನಗೆ ತುಂಬಾ ನಷ್ಟವಾಗಿದೆ ಎಂದು ಹಲವು ಉದಾಹರಣೆಯೊಂದಿಗೆ ಆಕೆ ವಿವರಿಸಿದಾಗ ಪ್ರತಿಕ್ರಿಯಿಸಿದ ಅಧ್ಯಕ್ಷರು, ಈ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.