ಕಿನ್ನಿಗೋಳಿ: ಸದ್ಯದಲ್ಲೇ ಇಂದಿರಾ ಕ್ಯಾಂಟೀನ್‌ ನಿರ್ಮಾಣ


Team Udayavani, Feb 8, 2024, 2:35 PM IST

ಕಿನ್ನಿಗೋಳಿ: ಸದ್ಯದಲ್ಲೇ ಇಂದಿರಾ ಕ್ಯಾಂಟೀನ್‌ ನಿರ್ಮಾಣ

ಕಿನ್ನಿಗೋಳಿ: ಕಿನ್ನಿಗೋಳಿ ಜನತೆಯ ಬಹುದಿನ ಗಳ ಬೇಡಿಕೆಯಾದ ಇಂದಿರಾ ಕ್ಯಾಂಟೀನ್‌ ಸದ್ಯ ದಲ್ಲೇ ನಿರ್ಮಾಣವಾಗಲಿದೆ. ಪಟ್ಟಣವಾಗಿ ಬೆಳೆ ಯುತ್ತಿರುವ ಕಿನ್ನಿಗೋಳಿಯಲ್ಲಿ ಬಡ ಮತ್ತು ಶ್ರಮಿಕ ವರ್ಗ ಹೆಚ್ಚಾಗಿದ್ದು, ಇಂದಿರಾ ಕಾಂಟೀನ್‌ ನಿರ್ಮಾಣವಾದರೆ ಸಹಕಾರಿ ಯಾಗ ಲಿದೆ. ಮಾರ್ಚ್‌ ಅಂತ್ಯದೊಳಗೆ ಆರಂಭವಾಗಲಿದೆ.

ಸ್ಥಳ ಹುಡುಕಾಟ
ಇಂದಿರಾ ಕ್ಯಾಂಟೀನ್‌ ನಿರ್ಮಾಣಕ್ಕೆ ಸೂಕ್ತ ಸ್ಥಳದ ಹುಟುಕಾಟದಲ್ಲಿದ್ದಾರೆ ಅಧಿಕಾರಿಗಳು. ಈಗಾಗಲೇ ಅಧಿಕಾರಿಗಳು ಕಿನ್ನಿಗೋಳಿ ಪಟ್ಟಣ ಪಂಚಾಯತ್‌ ಆವರಣದೊಳಗೆ ಇದಕ್ಕಾಗಿ ಜಾಗ ಸೂಚಿಸಿದ್ದು, ಆದರೆ ಶಾಸಕ ಉಮಾನಾಥ ಕೋಟ್ಯಾನ್‌ ಮತ್ತು ಸಾರ್ವಜನಿಕರ ಅಪೇಕ್ಷೆಯಂತೆ ಇದನ್ನು ಬೇರೆಡೆ ಆರಂಭಿಸಲು ಸ್ಥಳ ಗುರುತಿಸಲಾಗಿದೆ.

ಪಂಚಾಯತ್‌ ಆವರಣದೊಳಗೆ ಕ್ಯಾಂಟಿನ್‌ ಆರಂಭಿಸಿದರೆ ಸಾರ್ವಜನಿಕರಿಗೆ ಇದರ ಉಪಯೋಗ ಸಿಗದು ಎಂಬ ಕಾರಣಕ್ಕಾಗಿ ಕಿನ್ನಿಗೋಳಿ ಪೇಟೆ ಅಥವಾ ಜನಸಂದಣಿ ಇರುವ ಜಾಗದಲ್ಲಿ ಆರಂಭಿಸಲು ಒಂದೆರಡು ಜಾಗವನ್ನು ಸೂಚಿಸಿದ್ದು, ಕೊನ್ಸೆಟಾ ಆಸ್ಪತ್ರೆಯ ಬಳಿ ಅಂದರೆ ಪ್ರಸ್ತುತ ಸಂತೆ ನಡೆಯುವ ಮುಂಭಾಗದಲ್ಲಿರುವ ಸರಕಾರಿ ಜಾಗದಲ್ಲಿ ಕ್ಯಾಂಟಿನ್‌ ಆರಂಭವಾಗಲಿದೆ. ಸದ್ಯಕ್ಕೆ ಗ್ರಾಮಕರಣಿಕ ಸುಜಿತ್‌ ಮತ್ತು ಸರ್ವೆ ಅಧಿಕಾರಿಗಳು ಸರ್ವೇ ಕಾರ್ಯ ಮುಗಿಸಿದ್ದು, ಒಂದೆರಡು ತಿಂಗಳಲ್ಲಿ ಕಿನ್ನಿಗೋಳಿಯ ಜನತೆಗೆ ಇಂದಿರಾ ಕ್ಯಾಂಟೀನ್‌ನ ಸೇವೆ ದೊರೆಯಲಿದೆ.

ಇಂದಿರಾ ಕ್ಯಾಂಟೀನ್‌ ಸೇವೆಯ ಜತೆಗೆ ಕಿನ್ನಿಗೋಳಿ ಪೇಟೆಗೆ ಸರಕಾರಿ ಆಸ್ಪತ್ರೆ, ರೈತಸಂಪರ್ಕ ಕೇಂದ್ರ, ಕೇಂದ್ರ ವಾಚನಾಲಯ, ಹೋಬಳಿ ಮಟ್ಟದ ಸರಕಾರಿ ಕಚೇರಿಗಳು, ಪೊಲೀಸ್‌ ಉಪಠಾಣೆ, ಖಾಯಂ ಸಂಚಾರಿ ಉಪಠಾಣೆಯ ಈ ಭಾಗಕ್ಕೆ ಅಗತ್ಯವಿದೆ.

ಪಟ್ಟಣ ಪಂಚಾಯತ್‌  ನಿಂದ ಉಸ್ತುವಾರಿ
ಕಿನ್ನಿಗೋಳಿಯಲ್ಲೂ ಇಂದಿರಾ ಕ್ಯಾಂಟಿನ್‌ ಆರಂಭವಾಗಲಿದ್ದು, ಈಗಾಗಲೇ ಸರ್ವೇ ಕಾರ್ಯ ಮುಗಿದಿದೆ. ಕಿನ್ನಿಗೋಳಿ – ಮೂರು ಕಾವೇರಿ ಮುಖ್ಯ ರಸ್ತೆಯ ಬದಿಯಲ್ಲಿ ಆರಂಭವಾಗಲಿದೆ. ಟೆಂಡರ್‌ ಪಡೆದುಕೊಂಡವರು ಕ್ಯಾಂಟೀನ್‌ ನಡೆಸಿದರೂ ಅದರ ಉಸ್ತುವಾರಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನೋಡಿಕೊಳ್ಳಲಿದೆ. ನಾಗರಾಜ್‌ ಎಂ. ಎಲ್‌., ಮುಖ್ಯಾಧಿಕಾರಿ ಪಟ್ಟಣ
ಪಂಚಾಯತ್‌ ಕಿನ್ನಿಗೋಳಿ

ಪ್ರಯೋಜನಕಾರಿ
ಕಿನ್ನಿಗೋಳಿ ಪೇಟೆಯ 100 ಮೀಟರ್‌ ಒಳಗಡೆ ಇಂದಿರಾ ಕ್ಯಾಂಟಿನ್‌ ಮಾಡಬೇಕಾಗಿದೆ. ಮುಖ್ಯ ರಸ್ತೆಯಲ್ಲಿರುವ ಕೇಂದ್ರ ಮಾರುಕಟ್ಟೆಯ ತೆರವುಗೊಳಿಸಿದ ಎಪಿಎಂಸಿ ಕಟ್ಟಡದಲ್ಲಿ ಅಥ ವಾ ಕೆಲವು ಅಂಗಡಿ ಮುಂಗಟ್ಟು ಗಳು ಖಾಲಿ ಇದ್ದು ಇಲ್ಲಿ ಇಂದಿರಾ ಕ್ಯಾಂಟೀನ್‌ ಮಾಡಿದರೆ ಜನರಿಗೆ ಪ್ರಯೋಜನಕಾರಿಯಾಗಲಿದೆ. ದೂರದ ಪಟ್ಟಣ ಪಂಚಾಯತ್‌ ಹತ್ತಿರ ಮಾಡಿದರೇ ಜನರಿಗೆ ಅಷ್ಟು ಅನುಕೂಲವಾಗುವುದಿಲ್ಲ.
ಗಿರೀಶ್‌ ಮಡಿವಾಳ ಉಲ್ಲಂಜೆ, ಸಮಾಜ ಸೇವಕ

*ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.