ಕಿನ್ನಿಗೋಳಿ: ನಿರ್ವಹಣೆ ಇಲ್ಲದ ಸಾರ್ವಜನಿಕ ಶೌಚಾಲಯ


Team Udayavani, Oct 30, 2018, 10:10 AM IST

30-october-1.gif

ಕಿನ್ನಿಗೋಳಿ: ಇಲ್ಲಿನ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಸ್‌ ನಿಲ್ದಾಣದ ಪಕ್ಕದಲ್ಲಿರುವ ಶೌಚಾಲಯ ಹಳೆಯದಾಗಿದ್ದು, ಮೇಲ್ಛಾವಣಿ ಕುಸಿಯುವ ಹಂತದಲ್ಲಿದೆ. ಇದರಿಂದ ಸಾರ್ವಜನಿಕರು ಇದರೊಳಗೆ ಹೋಗಲು ಭಯ ಪಡುವಂತಾಗಿದೆ.

ಶುಲ್ಕ ಪಾವತಿ ಶೌಚಾಲಯ
ಈ ಶೌಚಾಲಯವನ್ನು ಉಪಯೋಗಿಸಲು ಶುಲ್ಕ ಪಾವತಿ ಮಾಡಬೇಕಿದೆ. ಆದರೆ ಸೂಕ್ತ ನಿರ್ವಹಣೆ ಇಲ್ಲದೆ ಮೂಗು ಮುಚ್ಚಿಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಮಹಿಳೆಯರಿಗೆ ಕೇವಲ ಒಂದು ಕೋಣೆಯಿದ್ದು, ಹೆಚ್ಚು ಹೊತ್ತು ಕಾಯಬೇಕಾದ ಪರಿಸ್ಥಿತಿ ಇದೆ. ಈ ಹಿಂದೆ ನೆಲಕ್ಕೆ ಹಾಕಿದ ಹಾಸುಗಲ್ಲು ಸವೆದು ಹೋಗಿ ಜಾರುತ್ತಿರುವುದರಿಂದ ಅಪಾಯಕಾರಿಯಾಗಿ ಪರಿಣಮಿಸಿದೆ. ಇದರಿಂದ ಹಿರಿಯ ನಾಗರಿಕರು ಪರದಾಡಬೇಕಾಗಿದೆ.

ಪ್ರತಿದಿನ 250ಕ್ಕೂ ಹೆಚ್ಚು ಬಸ್‌ಗಳು, ಸಾವಿರಾರು ಮಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಇಲ್ಲಿನ ಬಸ್‌ ನಿಲ್ದಾಣಕ್ಕೆ ಬಂದು ಹೋಗುತ್ತಾರೆ. ತುರ್ತು ಸಂದರ್ಭಕ್ಕೆ ಬೇಕಾದ ಶೌಚಾಲಯ ವ್ಯವಸ್ಥೆ ಸರಿಯಾಗಿಲ್ಲದ ಕಾರಣ ಪರದಾಡುವಂತಾಗಿದೆ.

ಕುಸಿದ ಫ‌ುಟ್‌ಪಾತ್‌
ಬಸ್‌ ನಿಲ್ದಾಣದಿಂದ ಶೌಚಾಲಯಕ್ಕಾಗಿ ಕೆಳಗೆ ಇಳಿದು ಹೋಗಬೇಕಿರುವುದರಿಂದ ರಸ್ತೆಯ ಚರಂಡಿಗೆ ಹಾಕಲಾಗಿದ್ದ ಫ‌ುಟ್‌ಪಾತ್‌ ಸ್ಲ್ಯಾಬ್‌ ತುಂಡಾಗಿದೆ. ಶೌಚಾಲ ಯಕ್ಕೆ ಹೋಗುವ ದಾರಿಗೆ ಸರಿಯಾದ ಮೆಟ್ಟಲುಗಳೂ ಇಲ್ಲವಾದ್ದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. 

ನವೀಕರಣ ಮಾಡಲಾಗುವುದು
ಹೊಸ ಬಸ್‌ ನಿಲ್ದಾಣ ನಿರ್ಮಾಣ ಆಗುವಾಗ ಹೊಸ ಶೌಚಾಲಯದ ಬಗ್ಗೆ ಅಂದಾಜು ಪಟ್ಟಿ ಮಾಡಲಾಗಿತ್ತು. ಆದರೆ ಸ್ಥಳದ ಅಭಾವದಿಂದ ಸದ್ರಿ ಇರುವ ಶೌಚಾಲಯವನ್ನು 4 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು.
ಅರುಣ್‌ ಪ್ರದೀಪ್‌ ಡಿ’ಸೋಜಾ,
   ಪಿಡಿಒ ಕಿನ್ನಿಗೋಳಿ

ಕುಸಿದು ಬಿದ್ದ ಪಿಟ್‌
ಶೌಚಾಲಯದ ಹಿಂಬದಿ ಇರುವ ಪಿಟ್‌ (ಹೊಂಡ) ಸಂಪೂರ್ಣ ಕುಸಿದಿದೆ. ಅದರ ತ್ಯಾಜ್ಯ ಗುಂಡಿಯಿಂದ ಹೊರಬಂದು ಚರಂಡಿಯಲ್ಲಿ ಹೋಗುತ್ತಿದೆ. ಇದರಿಂದ ಸುತ್ತಲೂ ದುರ್ನಾತ ಬೀರುತ್ತಿದೆ. ತ್ಯಾಜ್ಯ ಹೊಂಡದಿಂದ ಸೊಳ್ಳೆಗಳ ಉತ್ಪತ್ತಿಯ ತಾಣವಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಮುನ್ನ ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಶೌಚಾಲಯ ದುರಸ್ತಿಗೆ ಕ್ರಮಕೈಗೊಳ್ಳಬೇಕಿದೆ.
 – ಮಹಮ್ಮದ್‌ ಸಯ್ಯದ್‌ ಅಸ್ಸಾದಿ
ಕಿನ್ನಿಗೋಳಿ, ಪ್ರಧಾನ ಕಾರ್ಯದರ್ಶಿ, ಮಾನವ
ಹಕ್ಕುಗಳು ಭ್ರಷ್ಟಾಚಾರ ವಿರೋಧಿ ಸಂಸ್ಥೆ, ಮಂಗಳೂರು

ರಘುನಾಥ ಕಾಮತ್‌

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.