ಅನುದಾನ ಕೊರತೆ: ಮಂಗಳೂರು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ರದ್ದು


Team Udayavani, Jan 3, 2023, 6:45 AM IST

ಅನುದಾನ ಕೊರತೆ: ಮಂಗಳೂರು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ರದ್ದು

ಮಂಗಳೂರು: ದೇಶ ವಿದೇಶಿಗರ ಕೂಡುವಿಕೆಯಲ್ಲಿ ಮಂಗಳೂರಿನಲ್ಲಿ ನಡೆಯುತ್ತಿದ್ದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಅನುದಾನದ ಕೊರತೆಯಿಂದ ಈ ಬಾರಿ ರದ್ದುಗೊಳ್ಳುವ ಸಾಧ್ಯತೆ ಹೆಚ್ಚಿದೆ.

ದ.ಕ. ಜಿಲ್ಲಾಡಳಿತದ ಸಹಕಾರದೊಂದಿಗೆ ಟೀಂ ಮಂಗಳೂರು ನೇತೃತ್ವದಲ್ಲಿ ಕರಾವಳಿ ಉತ್ಸವದ ಭಾಗವಾಗಿ ಗಾಳಿಪಟ ಉತ್ಸವ ನಡೆಯುತ್ತಿತ್ತು. ಆದರೆ, ರಾಜ್ಯ ಸರಕಾರದಿಂದ ಸಮರ್ಪಕವಾಗಿ ಅನುದಾನ ಬಾರದ ಕಾರಣ ಈ ಬಾರಿ ಆಯೋಜನೆಗೊಳ್ಳುವುದು ಅನುಮಾನ ಎನ್ನಲಾಗಿದೆ. ಗಾಳಿಪಟ ಉತ್ಸವಕ್ಕೆ ಸಾಮಾನ್ಯವಾಗಿ ಏಳರಿಂದ ಎಂಟು ದೇಶಗಳ ಪ್ರತಿನಿಧಿಗಳು ಆಗಮಿಸುತ್ತಾರೆ. ಸುಮಾರು 20ರಿಂದ 25 ಲಕ್ಷ ರೂ. ಖರ್ಚು ತಗಲುತ್ತದೆ. ಅಷ್ಟೊಂದು ಹಣ ಹೊಂದಿಸಲು ರಾಜ್ಯ ಸರಕಾರ ಆಸಕ್ತಿ ತೋರುತ್ತಿಲ್ಲ. ಅನುದಾನ ಹೊಂದಿಸುವ ನಿಟ್ಟಿನಲ್ಲಿ ಯಾವುದೇ ಸಂಘ-ಸಂಸ್ಥೆಗಳೂ ಮುಂದೆ ಬರುತ್ತಿಲ್ಲ. ಪರಿಣಾಮ, ಉತ್ಸವ ರದ್ದುಗೊಳಿಸಲು ಆಯೋಜಕರು ಚಿಂತನೆ ನಡೆಸಿದ್ದಾರೆ.

2.5 ಲಕ್ಷ ರೂ. ಬಾಕಿ
ಗಾಳಿಪಟ ಉತ್ಸವ ಕೊನೆಯ ಬಾರಿ 2019ರಲ್ಲಿ ಪಣಂಬೂರು ಕಡಲ ತೀರದಲ್ಲಿ ನಡೆದಿತ್ತು. ಉತ್ಸವಕ್ಕೆ ಬೆಲ್ಜಿಯಂ, ನೆದರ್ಲೆಂಡ್‌, ಫ್ರಾನ್ಸ್‌, ಕಾಂಬೋಡಿಯ, ಮಲೇಷ್ಯಾ ಸೇರಿ 8 ದೇಶಗಳ ಸುಮಾರು 16 ಮಂದಿ ಪ್ರತಿನಿಧಿಗಳು ಭಾಗವಹಿಸಿದ್ದರು. ಉತ್ಸವಕ್ಕೆ ಪ್ರತ್ಯೇಕ ಅನುದಾನ ನೀಡುವುದಾಗಿ ಈ ಹಿಂದೆ ಪ್ರವಾಸೋದ್ಯಮ ಸಚಿವರಾಗಿದ್ದಾಗ ಸಿ.ಪಿ. ಯೋಗೀಶ್ವರ್‌ ಅವರು ಹೇಳಿದ್ದರು. ಆದರೆ ಈವರೆಗೆ ಯಾವುದೇ ಅನುದಾನ ಸಿಕ್ಕಿಲ್ಲ. ಬದಲಾಗಿ 2.5 ಲಕ್ಷ ರೂ. ನೀಡಲು ರಾಜ್ಯ ಸರಕಾರ ಬಾಕಿ ಇದೆ.

ಜನವರಿ ತಿಂಗಳಲ್ಲಿ ಉತ್ಸವ
2019 ಸೇರಿದಂತೆ ಈ ಹಿಂದೆ ಮಂಗಳೂರಿನಲ್ಲಿ ಜನವರಿ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯುತ್ತಿತ್ತು. ಗುಜರಾತ್‌ನಲ್ಲಿ ಆಯೋಜನೆಗೊಳ್ಳುವ ಉತ್ಸವಕ್ಕೆ ಆಗಮಿಸುವ ವಿದೇಶಿ ಪ್ರತಿನಿಧಿಗಳಲ್ಲಿ ಹೆಚ್ಚಿನ ಮಂದಿ ಮಂಗಳೂರಿಗೂ ಆಗಮಿಸುತ್ತಿದ್ದರು. ಆದರೆ, ಈ ವರ್ಷದ ಉತ್ಸವಕ್ಕೆ ಮಂಗಳೂರಿನಲ್ಲಿ ಇನ್ನೂ ಯಾವುದೇ ತಯಾರಿ ಆರಂಭಗೊಂಡಿಲ್ಲ. ವಿದೇಶಿಗರನ್ನು ಆಹ್ವಾನಿಸಿ, ಆ ಪ್ರಕ್ರಿಯೆಗೆ ಕನಿಷ್ಠ ಮೂರು ತಿಂಗಳಾದರೂ ಬೇಕು. ಇನ್ನೂ ಆರಂಭಿಕ ಹಂತವೇ ನಡೆಯದ ಕಾರಣ ಈ ಬಾರಿಯ ಉತ್ಸವ ನಡೆಯುವುದಿಲ್ಲ ಎನ್ನುತ್ತಾರೆ ಟೀಂ ಮಂಗಳೂರಿನ ಆರ್ಟಿಸ್ಟ್‌ ದಿನೇಶ್‌ ಹೊಳ್ಳ.

ಅನುದಾನದ ಕೊರತೆ
ಸಾಮಾನ್ಯವಾಗಿ ಜನವರಿ ತಿಂಗಳಿನಲ್ಲಿ ಮಂಗಳೂರು ಕೇಂದ್ರೀಕೃತವಾಗಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯುತ್ತದೆ. 2019ರಲ್ಲಿ ಕೊನೆಯದಾಗಿ ಉತ್ಸವ ನಡೆದಿತ್ತು. ಬಳಿಕ ನಿಂತಿದ್ದು, ಇನ್ನೂ ಆರಂಭಗೊಂಡಿಲ್ಲ. ಉತ್ಸವ ಆಯೋಜನೆಗೆ ಸಂಬಂಧಪಟ್ಟ ಇಲಾಖೆಯೂ ಉತ್ಸಾಹ ತೋರುತ್ತಿಲ್ಲ. ಆಯೋಜನೆ ಮತ್ತು ಅನುದಾನ ಹೊಂದಿಸುವುದೂ ಸವಾಲಾಗಿದೆ.
– ಸರ್ವೇಶ್‌ ರಾವ್‌, ಟೀಂ ಮಂಗಳೂರು ಸ್ಥಾಪಕ

– ನವೀನ್‌ ಭಟ್‌, ಇಳಂತಿಲ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.