ಕಸ್ತೂರಿರಂಗನ್‌ ವರದಿ: ದ.ಕ.ಜಿಲ್ಲೆಯಲ್ಲಿ ಬೃಹತ್‌ ಹೋರಾಟಕ್ಕೆ ನಿರ್ಧಾರ


Team Udayavani, Apr 14, 2017, 2:35 PM IST

1304ble2ph.jpg

ಬೆಳ್ತಂಗಡಿ: ಕಸ್ತೂರಿರಂಗನ್‌ ವರದಿಯ ಅನುಷ್ಠಾನಕ್ಕೆ ಕೇಂದ್ರ ಸರಕಾರ ಮುಂದಾಗುತ್ತಿದ್ದು ಮಲೆನಾಡಿನ ರೈತರ ಬದುಕನ್ನು ಕಸಿದುಕೊಳ್ಳಲಿರುವ ಈ ಯೋಜನೆಯ ವಿರುದ್ದ ಅವಿಭಜಿತ ದ.ಕ. ಜಿಲ್ಲಾ ಮಟ್ಟದಲ್ಲಿ ಬೃಹತ್‌ ಹೋರಾಟ ರೂಪಿಸಲು ಬೆಳ್ತಂಗಡಿಯ ಅಂಬೇಡ್ಕರ್‌ ಭವನದಲ್ಲಿ ಬುಧವಾರ ನಡೆದ ಸಮಾನ ಮನಸ್ಕ ಸಂಘಟನೆಗಳ ದುಂಡು ಮೇಜಿನ ಸಭೆಯಲ್ಲಿ ನಿರ್ಧರಿಸಲಾಯಿತು.

ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸೀರೋ ಮಲಬಾರ್‌ ಕೆಥೋಲಿಕ್‌ ಅಸೋಸಿಯೇಶನ್‌, ರಬ್ಬರ್‌ ಬೆಳೆಗಾರರ ಹಿತ ರಕ್ಷಣಾ ಸಮಿತಿ, ತುಳುನಾಡು ಒಕ್ಕೂಟ ಹಾಗೂ ಇತರ ಸಂಘಟನೆಗಳ ನೇತƒತ್ವದಲ್ಲಿ  ಸಮಾಲೋಚನ ಸಭೆ ನಡೆಯಿತು.

ಸಭೆಯಲ್ಲಿ ಯೋಜನೆಯ ಬಗ್ಗೆ ಮಾಹಿತಿ ನೀಡಿದ ಕೊಡಗಿನ ಹೋರಾಟಗಾರ ಡಾ| ದುರ್ಗಾಪ್ರಸಾದ್‌ ಅವರು, ಕೇಂದ್ರ ಸರಕಾರ ಈಗಾಗಲೇ ಸುಪ್ರೀಂ ಕೋರ್ಟ್‌ನ ಮುಂದೆ ಕಸ್ತೂರಿರಂಗನ್‌ ವರದಿಯನ್ನು ಅನುಷ್ಠಾನಕ್ಕೆ ತರುವುದಾಗಿ ಒಪ್ಪಿಗೆ ನೀಡಿ ಪ್ರಮಾಣ ಪತ್ರ ನೀಡಿದೆ. ಅದರಂತೆಯೇ ನಿರಂತರವಾಗಿ ಅಧಿಸೂಚನೆಯನ್ನೂ ಹೊರಡಿಸುತ್ತಿದೆ.  ಕರ್ನಾಟಕ ಸರಕಾರ ಕೇಂದ್ರ ಸರಕಾರಕ್ಕೆ ಈ ಬಗ್ಗೆ ವರದಿಯನ್ನು ಈಗಾಲೇ ನೀಡಿದೆ. ಅಲ್ಲದೆ ಕೇಂದ್ರ ಸರಕಾರ ಕರೆದಿದ್ದ ಸಭೆಯಲ್ಲಿ ರಾಜ್ಯದ ಅರಣ್ಯ ಸಚಿವರು ಭಾಗವಹಿಸಿ ತಮ್ಮ ವಾದವನ್ನು ಮಂಡಿಸಿದ್ದಾರೆ. ಜನವಸತಿ ಪ್ರದೇಶಗಳನ್ನು ಹೊರತುಪಡಿಸಿ ಪರಿಸರ ಸೂಕ್ಷ್ಮಪ್ರದೇಶ ಎಂದು ಘೋಷಿಸುವಂತೆ ಕೇಳಿಕೊಂಡಿದೆ. ಆದರೆ ಇದಕ್ಕೆ ಯಾವ ಬೆಲೆಯೂ ಸಿಕ್ಕಿಲ್ಲ.

ಕೇಂದ್ರ ಪರಿಸರ ಸಚಿವಾಲಯ ಮತ್ತೆ ಸುಪ್ರೀಂ ಕೋರ್ಟ್‌ ಮುಂದೆ ಹೊಸ ಅಫಿದವಿತ್‌ ಸಲ್ಲಿಸಿ ಕಸ್ತೂರಿರಂಗನ್‌ ವರದಿಯನ್ನು ಅನುಷ್ಠಾನಕ್ಕೆ ತರುವುದಿಲ್ಲ ಎಂದು ಬದಲಿ ವರದಿ ತಯಾರಿಸುವುದಾಗಿ ಹೇಳಿಕೆ ನೀಡದ ಹೊರತು

ಈ ಸಮಸ್ಯೆಯಿಂದ ಪರಿಹಾರ ಸಿಗಲು ಸಾಧ್ಯವಿಲ್ಲ. ಕೇಂದ್ರ ಸರಕಾರದ ಮೇಲೆ ಸಂಸದರು, ಜನರು ಒತ್ತಡ ಹೇರುವ ಕಾರ್ಯವನ್ನು ಮಾಡಬೇಕಾದ ಅನಿವಾರ್ಯವಿದೆ. ಈ ಬಗ್ಗೆ ಸರಕಾರಗಳನ್ನು, ಸಂಸದರನ್ನು ಎಚ್ಚರಿಸುವ ಹೋರಾಟ ಅನಿವಾರ್ಯವಾಗಿ ನಡೆಯಬೇಕಾಗಿದೆ.  ಈಗಾಗಲೆ ಇದರಲ್ಲಿ ಅಗತ್ಯ ಬದಲಾವಣೆಗಳನ್ನು ತರದಿದ್ದಲ್ಲಿ ಅಂತಿಮ ಅಧಿಸೂಚನೆ ಹೊರ ಬಂದರೆ ಮತ್ತೆ ಯಾವ ಹೋರಾಟ ಮಾಡಿಯೂ ಪ್ರಯೋಜನವಾಗಲಾರದು ಎಂದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಕರ್ನಾಟಕ ರಾಜ್ಯ ರೈತ ಸಂಘದ ಜಲ್ಲಾ ಕಾರ್ಯದರ್ಶಿ ಸುರೇಶ್‌ ಭಟ್‌ ಕೊಜಂಬೆ, ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಬಿ.ಎಂ. ಭಟ್‌, ವಿವಿಧ ಸಂಘಟನೆಗಳ ಮುಖಂಡರಾದ ಮುನೀರ್‌ ಕಾಟಿಪಳ್ಳ, ಸೇವಿಯರ್‌ ಪಾಲೇಲಿ, ಪ್ರೊ| ಆಂಟೋನಿ, ಶ್ಯಾಮರಾಜ ಪಟ್ರಮೆ, ಲಕ್ಷ್ಮಣ ಗೌಡ ಪಾಂಗಳ, ವಿಠಲ ಮಲೆಕುಡಿಯ  ಹಾಗೂ ಇತರರು ಉಪಸ್ಥಿತರಿದ್ದರು.

ಹೋರಾಟಕ್ಕಾಗಿ ಗ್ರಾಮ ಸಮಿತಿಗಳನ್ನು ರಚಿಸಲು ಹಾಗೂ ಜನ ಜಾಗƒತಿಗಾಗಿ ವಾಹನ ಜಾಥವನ್ನು ಆಯೋಜಿಸಲು ನಿರ್ಧರಿಸಲಾಯಿತು. ಸುರೇಶ್‌ ಭಟ್‌ ಅವರ ಅಧ್ಯಕ್ಷತೆಯಲ್ಲಿ ಬಿ.ಎಂ. ಭಟ್‌ ಅವರು ಕಾರ್ಯದರ್ಶಿಯಾಗಿರುವ ಹೋರಾಟ ಸಮಿತಿಯೊಂದನ್ನು ರಚಿಸಲು ನಿರ್ಧರಿಸಲಾಯಿತು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.