‘ಪ್ರಕೃತಿ ಹಿಂಸೆ ತಡೆಯುವ ಅರಿವು ಅಗತ್ಯ’


Team Udayavani, Oct 26, 2017, 2:13 PM IST

26-Mng–11.jpg

ಪುತ್ತೂರು: ಕಾಡು ನಾಶದಿಂದ ತೊಡಗಿ ಹಲವು ರೀತಿಯಲ್ಲಿ ಪ್ರಕೃತಿ ಮೇಲಿನ ಹಿಂಸೆ ನಡೆಯುತ್ತಲೇ ಇದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ಜೀವ ವೈವಿಧ್ಯ ಮಂಡಳಿ ತಾಲೂಕು ನಿರ್ವಹಣೆ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಹೇಳಿದರು.

ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ವತಿಯಿಂದ ಪುತ್ತೂರು ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಬುಧವಾರ ತಾಲೂಕು ಪಂಚಾಯತ್‌, ಗ್ರಾಮ ಪಂಚಾಯತ್‌ನ ಜೀವ ವೈವಿಧ್ಯ ನಿರ್ವಹಣೆ ಸಮಿತಿ ಸದಸ್ಯರಿಗೆ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಆಧುನಿಕ ಜಗತ್ತುನ ಬದಲಾವಣೆ ವೇಗವಾಗಿ ನಡೆಯುತ್ತಿದೆ. ಇದರ ನಡುವೆ ಪರಿಸರ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಹಿಂದಿನ ವರ್ಷವೇ ಕೆಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜೀವ ವೈವಿಧ್ಯದ ದಾಖಲಾತಿ ಸಂಗ್ರಹಿಸಲಾಗಿದೆ. ನಮ್ಮ ಪರಿಸರದಲ್ಲಿರುವ ಪ್ರಾಣಿ, ಸಸ್ಯ ಸೇರಿದಂತೆ ಜೀವ ಪ್ರಭೇದದ ದಾಖಲಾತಿ ಸಂಗ್ರಹಿಸಲಾಗಿದೆ. ಇದರ ಮಾಹಿತಿಯನ್ನು ನಾಟಿ ವೈದ್ಯರಿಂದ ತಿಳಿದುಕೊಳ್ಳಲಾಗಿದೆ. ಮುಂದೆ ಇದನ್ನು ಏನು ಮಾಡಬೇಕು. ಮಾತ್ರವಲ್ಲ, ಹೆಚ್ಚಿನ ಹಿತಿಯನ್ನು ಹೇಗೆ ಸಂಗ್ರಹಿಸಬೇಕು ಎಂಬ ಬಗ್ಗೆ ಕಾರ್ಯಾಗಾರದಲ್ಲಿ ತಿಳಿಸಲಾಗುವುದು ಎಂದರು.

ಉಳಿಸುವ ಕೆಲಸ ಆಗಬೇಕು
ಇದೀಗ ಮಾಹಿತಿ ಕಾರ್ಯಾಗಾರವಷ್ಟೇ ನಡೆಯಲಿದೆ. ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟಕ್ಕೆ ಹೋಗಿ, ಪ್ರಾಯೋಗಿಕ ಕೆಲಸ ನಡೆಸಲಾಗುವುದು. ಇದಕ್ಕೆ ಪತ್ರಕರ್ತರ ಸಂಘವೂ ಸೇರಿಕೊಳ್ಳಲಿದೆ. ಗ್ರಾಮದಲ್ಲಿ ಹೆಚ್ಚಿನ ಮಾಹಿತಿ ಸಂಗ್ರಹವಾಗಲಿದೆ. ಇದನ್ನು ಉಳಿಸುವ ಕೆಲಸ ಆಗಬೇಕು ಎಂದರು.

ಪ್ರಕೃತಿ ನಾಶಕ್ಕೆ ನಾವೇ ಕಾರಣ
ರಾಜ್ಯ ಜೀವ ವೈವಿಧ್ಯ ಮಂಡಳಿಯ ತಾಂತ್ರಿಕ ನಿರ್ವಾಹಕಿ ಐಶ್ವರ್ಯ ಮಾತನಾಡಿ, ಪ್ರಕೃತಿ ಹಾಳಾಗಲು ನಾವೇ ಕಾರಣ. ಮಿತಿಮೀರಿದ ಪ್ಲಾಸ್ಟಿಕ್‌ ಬಳಕೆ, ಗುಬ್ಬಚ್ಚಿಗಳ ಅಳಿವಿಗೆ ಕಾರಣವಾದ ಅತಿಯಾದ ಮೊಬೈಲ್‌ ಬಳಕೆಗೆ ಆದ್ಯತೆ ನೀಡುತ್ತಿದ್ದೇವೆ.

ನಮ್ಮ ಅಗತ್ಯಕ್ಕೆ ಎಷ್ಟು ಅಗತ್ಯವೋ ಅಷ್ಟನ್ನು ಬಳಸುವುದನ್ನು ಬಿಟ್ಟು, ಅತಿಯಾದ ಬಳಕೆ ಮಾಡುತ್ತಿದ್ದೇವೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸಾಕಷ್ಟು ಜೀವ ವೈವಿಧ್ಯ ಇದೆ. ಮಕ್ಕಳು ಪುಸ್ತಕದಲ್ಲಿದ್ದ ಮಾಹಿತಿಯನ್ನು ಮಾತ್ರ ಕಲಿಯುತ್ತಿದ್ದಾರೆ. ಪ್ರಾಯೋಗಿಕ ಮಾಹಿತಿ ಗೊತ್ತೇ ಇಲ್ಲ. ಮಕ್ಕಳಿಗೆ ಮಾಹಿತಿ ನೀಡಿ, ಅವರಿಂದಲೇ ಜಾಗೃತಿ ಮೂಡಿಸುವ ಕೆಲಸ ನಡೆಯಬೇಕಿದೆ ಎಂದರು.

ತಾಲೂಕು ಪಂಚಾಯತ್‌ ಸದಸ್ಯರಾದ ಲಲಿತಾ ಈಶ್ವರ್‌, ಕುಸುಮಾ, ಯೋಜನಾಧಿಕಾರಿ ಗಣಪತಿ ಉಪಸ್ಥಿತರಿದ್ದರು. ತಾಲೂಕು ಪಂಚಾಯತ್‌ನ ಶಿವಪ್ರಕಾಶ್‌ ಕಾರ್ಯಕ್ರಮ ನಿರೂಪಿಸಿದರು.

ಪ್ರೋತ್ಸಾಹ ಅಗತ್ಯ
ಅಧ್ಯಕ್ಷತೆ ವಹಿಸಿದ್ದ ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಮುಕುಂದ ಮಾತನಾಡಿ, ಜೀವ ವೈವಿಧ್ಯವನ್ನು ಉಳಿಸಲು ಪ್ರೋತ್ಸಾಹ ನೀಡಬೇಕಿದೆ. ಈ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕೆಲಸವೂ ನಡೆಯಬೇಕಿದೆ. ಇದರಿಂದ ಮಾನವ ಸಂಕುಲಕ್ಕೆ ಪ್ರಯೋಜನವೇನು, ಪೂರಕ ಹೇಗೆ ಎಂಬ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಎಲ್ಲ ಸಂಘ ಸಂಸ್ಥೆಗಳು ಜಾಗೃತರಾಗಿ, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.