ಕೋಡಿಂಬಾಳ: ಡೆಂಗ್ಯೂ ಬಾಧಿತ ವ್ಯಕ್ತಿ ಸಾವು
Team Udayavani, Jul 31, 2019, 5:38 AM IST
ಕಡಬ: ಡೆಂಗ್ಯೂ ಪೀಡಿತರಾಗಿದ್ದ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ಶ್ರೀಧರ ಗೌಡ (52) ಮಂಗಳವಾರ ಮೃತಪಟ್ಟಿದ್ದಾರೆ.
ಶ್ರೀಧರ ಗೌಡ ಅವರಿಗೆ ಕಳೆದ ಎರಡು ತಿಂಗಳ ಹಿಂದೆ ಡೆಂಗ್ಯೂ ಜ್ವರ ಬಾಧಿಸಿದ್ದು, ಅವರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೊಂಚ ಚೇತರಿಸಿಕೊಂಡಿದ್ದ ಅವರನ್ನು 20 ದಿನಗಳ ಹಿಂದೆ ಮನೆಗೆ ಕರೆತರಲಾಗಿತ್ತು. ಆದರೆ ಪೂರ್ತಿಯಾಗಿ ಗುಣಮುಖರಾಗದಿದ್ದ ಶ್ರೀಧರ ಮಂಗಳವಾರ ಬೆಳಗ್ಗೆ ತೀವ್ರವಾಗಿ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಕಡಬ ಸಮುದಾಯ ಆಸ್ಪತ್ರೆಗೆ ಕರೆತರಲಾಯಿತು. ಆ ವೇಳೆ ಅವರು ಮೃತಪಟ್ಟಿದ್ದರು. ಮೃತರು ಪತ್ನಿ, ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
2ನೇ ಬಲಿ
ಕೋಡಿಂಬಾಳದಲ್ಲಿ ಈ ವರ್ಷ ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿಯಾಗಿದ್ದಾರೆ. ತಿಂಗಳ ಹಿಂದೆ ಕುಕ್ಕೆರೆಬೆಟ್ಟು ನಿವಾಸಿ ಆನಂದ ನಾೖಕ್ ಅವರ ಪತ್ನಿ ವೀಣಾ ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದರೆ, ಇದೀಗ ಡೆಂಗ್ಯೂ ಪೀಡಿತ ಶ್ರೀಧರ ಗೌಡ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?