ಕೊಡಿನೀರು: ಬೈಕ್‌ಗಳ ಮುಖಾಮುಖೀ ಢಿಕ್ಕಿ; ವಿದ್ಯಾರ್ಥಿ ಸಾವು


Team Udayavani, Dec 3, 2017, 3:17 PM IST

0212pcr1ph-Anaz-.jpg

ಸವಣೂರು: ಪುತ್ತೂರು- ಕಾಣಿಯೂರು ಮುಖ್ಯರಸ್ತೆಯ ಕೊಡಿನೀರು ಸಮೀಪ ಪಾಪೆತ್ತಡ್ಕ ಎಂಬಲ್ಲಿ ಬೈಕ್‌ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿ ಯೋರ್ವ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.

ಕುದ್ಮಾರು ಗ್ರಾಮದ ಅನ್ಯಾಡಿ ಸುಲೈಮಾನ್‌ಅವರ ಪುತ್ರ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಅನಝ್ (17) ಮೃತಪಟ್ಟ ವಿದ್ಯಾರ್ಥಿ. ಹಿಂಬದಿ ಸವಾರ, ಅನಝ್ ಸಹಪಾಠಿ ಸವಣೂರಿನ ಅಬ್ದುಲ್‌ ರಹಮಾನ್‌ ಆಸೀಫ್‌ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪುತ್ತೂರಿನಿಂದ ಬರೆಪ್ಪಾಡಿಗೆ ಹೋಗುತ್ತಿದ್ದ ಪ್ಲಾಟಿನಂ ಬೈಕ್‌ ಮತ್ತು ಎದುರುಗಡೆಯಿಂದ ಬರುತ್ತಿದ್ದ ಅಪಾಚಿ ಬೈಕ್‌ ನಡುವೆ ಮುಖಾ ಮುಖೀ ಢಿಕ್ಕಿಯಾಗಿದ್ದು, ಬಸ್‌ ಅನ್ನು ಓವರ್‌ ಟೇಕ್‌ ಮಾಡುವ ಸಂದರ್ಭ ಈ ದುರ್ಘ‌ಟನೆ ಸಂಭವಿಸಿದೆ ಎನ್ನಲಾಗಿದೆ. ಮೃತಪಟ್ಟ ವಿದ್ಯಾರ್ಥಿ ತಂದೆ, ತಾಯಿ, ಇಬ್ಬರು ಸಹೋ ದರಿಯರನ್ನು ಅಗಲಿದ್ದಾನೆ.

ಇನ್ನೊಂದು ಬೈಕ್‌ನಲ್ಲಿದ್ದ   ಸವಾರ ಚಾರ್ವಾಕ ಗ್ರಾಮದ ಕೊಪ್ಪ ನಿವಾಸಿ ವಿಶ್ವನಾಥ, ಸಹಸವಾರ ಅಶೋಕ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾ ಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಸಂಸ್ಥೆಯ ವಿದ್ಯಾರ್ಥಿ ಮೃತಪಟ್ಟ ಹಿನ್ನೆಲೆಯಲ್ಲಿ  ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ  ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಅದೇ ರೀತಿ ಕುದ್ಮಾರು ಗ್ರಾಮದ ಕೂರ ಮಸೀದಿಯಲ್ಲಿ ನಡೆಯಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನೂ ರದ್ದುಪಡಿಸಲಾಗಿದೆ. ಆಸ್ಪತ್ರೆಗೆ ಖಾಝಿ ಭೇಟಿ ದ.ಕ. ಖಾಝಿ ಅಸ್ಸಯ್ಯದ್‌ ಫಝಲ್‌ ಕೋಯಮ್ಮ ತಂಙಳ್‌ ಆಸ್ಪತ್ರೆಗೆ ಭೇಟಿ ನೀಡಿ ಕೂರ ಮಸೀದಿ ಕಾರ್ಯದರ್ಶಿ, ಮೃತನ ತಂದೆ ಸುಲೈಮಾನ್‌ ಅವರಿಗೆ ಸಾಂತ್ವನ ಹೇಳಿದರು. 

ಸಂಭ್ರಮದಲ್ಲಿದ್ದ  ಅನಝ್ ಮದ್ರಸದ ಪರೀಕ್ಷೆಯೊಂದರಲ್ಲಿ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಕೂರ ಮಸೀದಿಯಲ್ಲಿ ಈದ್‌ ಮಿಲಾದ್‌ ಅಂಗವಾಗಿ ಶನಿವಾರ ನಡೆಯುವ ಸಮಾರಂಭದಲ್ಲಿ ಅನಝ್ನನ್ನು ಗೌರವಿಸುವ
ಕಾರ್ಯಕ್ರಮವಿತ್ತು. ಹೀಗಾಗಿ ಕಾರ್ಯಕ್ರಮದ ಫೋಟೋ ಕ್ಲಿಕ್ಕಿಸಲೆಂದು ಗೆಳೆಯನ ಕೆಮರ ಪಡೆಯಲು ಮುಕ್ವೆಗೆ ಬಂದಿದ್ದ ಅನಝ್ ಹಿಂದಿರುಗುವಾಗ ಈ ಘಟನೆ ಸಂಭವಿಸಿದೆ.

ಕುಡಿಯಲು ನೀರು ಕೇಳಿದ್ದ ಅಪಘಾತವಾದ ತತ್‌ಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ ಹಿಂದೂ ಸಂಘಟನೆಗಳ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅಲ್ಲಿದ್ದವರ ಸಹಕಾರದೊಂದಿಗೆ ತನ್ನ ಕಾರಿನಲ್ಲಿ ಅನಝ್ನನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಿದರು. ಈ ವೇಳೆ ಕಾರಿನಲ್ಲಿ ನೀರು ಬೇಕೆಂದು ಕೇಳಿ ನೀರು ಕುಡಿದಿದ್ದ. ಆದರೂ ಆಸ್ಪತ್ರೆಗೆ ತಲುಪುವ ವೇಳೆ ಅನಝ್ ಕೊನೆಯುಸಿರೆಳೆದ. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.