ಕುಡುಪು: ಪಂಚಮಿ ಉತ್ಸವ ಸಂಪನ್ನ
Team Udayavani, Nov 24, 2017, 10:12 AM IST
ಕುಡುಪು: ಪ್ರಸಿದ್ಧ ನಾಗಾರಾಧನ ಕ್ಷೇತ್ರ ಶ್ರೀ ಕುಡುಪು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಪಂಚಮಿ ಉತ್ಸವ ಸಂಪನ್ನಗೊಂಡಿತು. ಮುಂಜಾನೆ 4 ಗಂಟೆಗೆ ಶ್ರೀ ಅನಂತ ಪದ್ಮನಾಭ ದೇವರಿಗೆ ಉಷಃ ಕಾಲದ ಅಭಿಷೇಕದೊಂದಿಗೆ ಪೂಜೆ, ಬಳಿಕ ಸುಮಾರು 200ಕ್ಕಿಂತ ಮಿಕ್ಕಿ ಭಕ್ತರು ಒಳಾಂಗಣದಲ್ಲಿ ಮಡೆಸ್ನಾನ ಸೇವೆಗೈದರು. ನಾಗಬನದ ನಾಗಬಿಂಬಗಳಿಗೆ ವಿಶೇಷ ತಂಬಿಲ ಸೇವೆ ಜರಗಿತು.
ಶ್ರೀ ಅನಂತ ಪದ್ಮನಾಭ ದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ, ಸೀಯಾಳ ಅಭಿಷೇಕ, ಸಹಸ್ರಾನಾಮ ಅರ್ಚನೆ, ಅಮೃತಪಡಿ ನಂದಾದೀಪ, ಹಾಲು ಪಾಯಸ ವಿಶೇಷ ಸೇವೆಗಳು ನಡೆದು, ಮಧ್ಯಾಹ್ನ ಪಂಚಮಿ ವಿಶೇಷ ಮಹಾಪೂಜೆ ಜರಗಿತು. ಸುಮಾರು 15 ಸಹಸ್ರದಷ್ಟು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ಪಂಚಮಿಯ ತೈಲಾಭ್ಯಂಜನ ನಡೆದು ರಾತ್ರಿ ಶ್ರೀ ದೇವರ ಬಲಿ ಹೊರಟು ಕಟ್ಟೆ ಪೂಜೆ, ದೇಗುಲದ ಭದ್ರಾಸರಸ್ವತಿ ತೀರ್ಥ ಸರೋವರದಲ್ಲಿ ಶ್ರೀ ದೇವರ ತೆಪ್ಪೋತ್ಸವ, ಎರಡನೇ ಬಲಿ, ಚಂದ್ರಮಂಡಲೋತ್ಸವ, ಅಶ್ವವಾಹನೋತ್ಸವ, ಪಾಲಕಿ ಉತ್ಸವ ಜರಗಿತು.
ಇಂದು ಷಷ್ಠಿ ಬ್ರಹ್ಮ ರಥೋತ್ಸವ
ಇಂದು ಶ್ರೀ ಅನಂತ ಪದ್ಮನಾಭ ದೇವರಿಗೆ ವಿಶೇಷವಾದ ಅಭಿಷೇಕಾದಿ ಸೇವೆಗಳು ಜರಗಿ, ಅಮೃತ ಪಡಿ ನಂದಾದೀಪ ವಿಶೇಷ ಸೇವೆ, ಷಷ್ಠಿಯ ಮಹಾಪೂಜೆಯ ಬಳಿಕ ಮಧ್ಯಾಹ್ನ 1ಕ್ಕೆ ಶ್ರೀ ದೇವರ ಬಲಿ ಹೊರಟು ಬ್ರಹ್ಮರಥಾರೋಹಣ ಹಾಗೂ ರಾಜ ಬೀದಿಯಲ್ಲಿ ವೈಭವದ ಬ್ರಹ್ಮರಥೋತ್ಸವ, ಮಹಾ ಅನ್ನ ಸಂತರ್ಪಣೆ ಜರಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್