ಕೊಯಿಲ: ಸುಂದರ ತಾಣದಲ್ಲೀಗ ಬಯಲು ಶೌಚ


Team Udayavani, Aug 6, 2018, 11:53 AM IST

6-agust-6.jpg

ಆಲಂಕಾರು: ಕೊಯಿಲ ಗ್ರಾಮದ ಪಶುಸಂಗೋಪನ ಇಲಾಖೆಗೆ ಸೇರಿದ ಗುಡ್ಡಗಳು ಹಸಿರು ಹೊದ್ದು ಪ್ರವಾಸಿಗರನ್ನು ಕೈಬೀಸಿ ಕರೆಯುವಂತಿವೆ. ಆದರೆ, ಇಲ್ಲಿ ಪಶು ವೈದ್ಯಕೀಯ ಕಾಲೇಜು ನಿರ್ಮಿಸಲಾಗಿದ್ದು, ಕಟ್ಟಡ ಕಾರ್ಮಿಕರು ನಿತ್ಯ ಬಯಲು ಶೌಚ ಮಾಡುತ್ತಿರುವ ಕಾರಣ ಪರಿಸರದಲ್ಲಿ ದುರ್ವಾಸನೆ ಹಬ್ಬಿದೆ.

ಪಶುಸಂಗೋಪನ ಇಲಾಖೆಯ ಅಧೀನದಲ್ಲಿರುವ 800 ಎಕರೆ ಪ್ರದೇಶದಲ್ಲಿ 247 ಎಕರೆಯಲ್ಲಿ ಪಶುಪಾಲನ ಮತ್ತು ಪಶುವೈದ್ಯ ಸೇವಾ ಇಲಾಖೆ ಮತ್ತು ಬೀದರ್‌ನ ಪಶು ವೈದ್ಯಕೀಯ ಮತ್ತು ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಪುತ್ತೂರು ತಾಲೂಕಿನ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ನಿರ್ಮಾಣವಾಗುತ್ತಿದೆ.

300 ಕೋ. ರೂ. ಕಾಮಗಾರಿ
ಕಳೆದ ಸರಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಕಾಲೇಜು ಕಟ್ಟ ಡ ಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು, 300 ಕೋಟಿ ರೂ. ವೆಚ್ಚದಲ್ಲಿ ಪಶು ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ. 150ಕ್ಕೂ ಮಿಕ್ಕಿದ ಕಾರ್ಮಿಕರು ಬಯಲು ಶೌಚ ಆಶ್ರಯಿಸಿದ್ದು, ಪಕ್ಕದ ಗುಡ್ಡಗಳಿಗೆ ತೆರಳುತ್ತಿದ್ದಾರೆ. ಇದರಿಂದ ಪಕ್ಕದಲ್ಲಿರುವ ಜನವಸತಿ ಪ್ರದೇಶಕ್ಕೆ ದುರ್ನಾತ ಹಬ್ಬುತ್ತಿದೆ. ಕರ್ನಾಟಕ ಗೃಹ ಮಂಡಳಿಯಿಂದ ಗುತ್ತಿಗೆ ಪಡೆದ ಬೆಂಗಳೂರಿನ ಸ್ಟಾರ್‌ ಬಿಲ್ಡರ್ ಕಾಮಗಾರಿ ನಿರ್ವಹಿಸುತ್ತಿದೆ.

ವಸತಿ ನಿಲಯ, ಅತಿಥಿ ಗೃಹ, ಕಾಲೇಜು ಮತ್ತು ಆಸ್ಪತ್ರೆ ಕಟ್ಟಡಗಳು ನಿರ್ಮಾಣ ಹಂತದಲ್ಲಿವೆ. ಕಚೇರಿ ಮತ್ತು ಸಿಬಂದಿ ವಸತಿಗೃಹದ ನಿರ್ಮಾಣ ಇನ್ನಷ್ಟೆ ಆರಂಭವಾಗಬೇಕಾಗಿದೆ.

ಸಾಂಕ್ರಾಮಿಕ ರೋಗ ಭೀತಿ
ಬಿಹಾರ ಮತ್ತು ಬಯಲು ಸೀಮೆ ಮೂಲದ ಕಾರ್ಮಿಕರು ಇಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ಮೂರು ಶೌಚಾಲಯಗಳ ವ್ಯವಸ್ಥೆಯಿದೆ. ಅದರ ನಿರ್ವಹಣೆ ಸರಿಯಾಗಿಲ್ಲದ ಕಾರಣ ಉಪಯೋಗಿಸುವಂತಿಲ್ಲ. ಶೌಚಾಲಯದ ಕೊರತೆಯಿಂದ ಮಹಿಳಾ ಕಾರ್ಮಿಕರಿಗೆ ಹೆಚ್ಚು ಕಷ್ಟವಾಗಿದೆ. ಬಟ್ಟೆ, ಸ್ನಾನದ ಕೊಳಚೆ ನೀರು ಗುಡ್ಡದ ಕೆಳಗಿನ ಭಾಗವಾದ ಎಲ್ಯಂಗ, ಆತೂರುಬೈಲಿನಲ್ಲಿ 29ಕ್ಕೂ ಹೆಚ್ಚು ಕುಟುಂಬಗಳಿರುವ ವಸತಿ ಪ್ರದೇಶದತ್ತ ಹರಿಯುತ್ತಿದೆ. ಮಳೆ ನೀರು ಹಾಗೂ ಕುಡಿಯುವ ನೀರಿನ ಮೂಲಗಳಲ್ಲಿ ಬೆರೆತು ಈ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.

ಶೆಡ್‌ನ‌ಲ್ಲಿ ವಾಸ
ಕಾರ್ಮಿಕರೆಲ್ಲರೂ 7 ಶೆಡ್‌ಗಳಲ್ಲಿ ವಾಸಿಸುತ್ತಿದ್ದಾರೆ. ಶೆಡ್‌ಗೆ ವಿದ್ಯುತ್‌ ವ್ಯವಸ್ಥೆಯಿದೆ. ವಿದ್ಯುತ್‌ ಕಡಿತಗೊಂಡರೆ ಜನರೇಟರ್‌ ಇದೆ. ಆದರೆ ಶೀಟ್‌ಗಳಿಂದ ನಿರ್ಮಿಸುವ ಶೆಡ್‌ಗಳಲ್ಲಿ ಸುರಕ್ಷತೆಯಿಲ್ಲ. ಶೌಚಾಲಯ ನಿರ್ಮಾಣ ಮಾಡಿಕೊಡಿ ಎಂದು ಗುತ್ತಿಗೆದಾರರಲ್ಲಿ ಹೇಳಿಕೊಂಡಿದ್ದೇವೆ. ಅವರು ಕ್ರಮ ಕೈಗೊಂಡಿಲ್ಲ ಎನ್ನುತ್ತಾರೆ ಕಾರ್ಮಿಕರು. ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೊಯಿಲ, ವಳಕಡಮ ಶಾಲೆ, ಮಸೀದಿ, ಪ್ರಮುಖ ಪೇಟೆಗಳನ್ನು ಸಂಪರ್ಕಿಸಲು ನೂರಾರು ಮಂದಿ ಉಪಯೋಗಿಸುವ ರಸ್ತೆಗಳು ಇದೇ ಕಟ್ಟಡಗಳ ಪಕ್ಕದ ಜಾಗದಲ್ಲಿ ಹಾದು ಹೋಗಿದೆ. ಕಟ್ಟಡಗಳು ಗುಡ್ಡಗಳ ಮೇಲ್ಭಾಗದಲ್ಲಿ ನಿರ್ಮಾಣವಾಗುತ್ತಿವೆ. ಇಲ್ಲಿನ ಮರಳು, ಕಸ- ಕಡ್ಡಿಗಳು ಕೂಡ ರಸ್ತೆ ಚರಂಡಿಗಳಿಗೆ ಸೇರುತ್ತಿದೆ.

ಗುತ್ತಿಗೆದಾರರು ಜವಾಬ್ದಾರರು
ಕಾರ್ಮಿಕರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಿ ಕೊಡುವುದು ಗುತ್ತಿಗೆದಾರರ ಜವಾಬ್ದಾರಿ. ಕಾಲೇಜು ನಿರ್ಮಾಣದ ಹೊಣೆ ಹೊತ್ತ ಕರ್ನಾಟಕ ಹೌಸಿಂಗ್‌ ಬೋರ್ಡ್‌ನ ಮಂಗಳೂರಿನ ಅಧಿಕಾರಿಗಳೊಂದಿಗೆ ಮತ್ತು ಗುತ್ತಿಗೆ ಪಡೆದಿರುವ ಬೆಂಗಳೂರಿನ ಸ್ಟಾರ್‌ ಬಿಲ್ಡರ್ಸ್‌ನ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲಾಗುವುದು.
 - ಡಾ| ನಾರಾಯಣ ಭಟ್‌,
 ವಿಶೇಷ ಕರ್ತವ್ಯಾಧಿಕಾರಿ, ಕೊಯಿಲ ಪಶು ವೈದಕೀಯ ಕಾಲೇಜು 

ಪ್ರತಿಭಟನೆಗೆ ಸಿದ್ಧತೆ
ಕಾಮಗಾರಿ ಆರಂಭದಿಂದಲೂ ಇಲ್ಲಿನ ಕಾರ್ಮಿಕರು ಬಯಲು ಶೌಚವನ್ನು ಆಶ್ರಯಿಸಿದ್ದಾರೆ. ಈ ಬಗ್ಗೆ ಗುತ್ತಿಗೆದಾರರಿಗೆ ಸ್ಥಳೀಯರು ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಸ್ವಚ್ಛ  ಭಾರತ ಪರಿಕಲ್ಪನೆಗೆ ಗುತ್ತಿಗೆದಾರರ ದುರ್ನಡತೆಯಿಂದ ಕಳಂಕವಾಗುತ್ತಿದೆ. ಕೊಯಿಲ ಗ್ರಾಮವು ಸ್ವಚ್ಛ  ಗ್ರಾಮವೆನ್ನುವ ಪ್ರಶಸ್ತಿ ಪಡೆದಿದೆ. ಗ್ರಾ.ಪಂ. ನೀಡಿದ ನೊಟೀಸಿಗೆ ಸ್ಪಂದಿಸಿಲ್ಲ. ಪ್ರತಿಭಟನೆಗೆ ಸಿದ್ಧತೆ ನಡೆಸಲಾಗುತ್ತಿದೆ.
– ಸುಲೈಮಾನ್‌,
ಕೊಯಿಲ ಗ್ರಾ.ಪಂ. ಸದಸ್ಯ

ನೋಟಿಸ್‌ಗೂ ಸಂದಿಸಿಲ್ಲ 
ಸ್ಥಳೀಯರ ದೂರಿನ ಮೇರೆಗೆ ಕಟ್ಟಡ ನಿರ್ಮಾಣದಾರರಿಗೆ ಕೊಯಿಲ ಗ್ರಾ.ಪಂ. ನೋಟಿಸ್‌ ನೀಡಿ, ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚಿಸಿತ್ತು. ಸ್ವತಃ ಗ್ರಾ.ಪಂ. ಅಧಿಕಾರಿ, ಆಡಳಿತ ಮಂಡಳಿ, ಸ್ಥಳೀಯ ಆರೋಗ್ಯ ಸಹಾಯಕಿಯರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಕ್ರಮ ಕೈಗೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದರು. ಆದರೂ ಗುತ್ತಿಗೆದಾರರು ಮೌನವಾಗಿದ್ದಾರೆ.

ಗಮನಕ್ಕೆ ಬಂದಿಲ್ಲ
ಪಶು ವೈದ್ಯಕೀಯ ಕಾಲೇಜು ಕಟ್ಟಡ ಕಾರ್ಮಿಕರಿಗೆ ಸಮರ್ಪಕ ಶೌಚಾಲಯವಿಲ್ಲದೆ ಬಯಲು ಶೌಚ ಅವಲಂಬಿಸಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಸ್ಥಳಕ್ಕೆ ತೆರಳಿ ಕ್ರಮ ಕೈಗೊಳ್ಳುವಂತೆ ಪುತ್ತೂರು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗುವುದು.
– ಡಾ| ಎಂ.ಆರ್‌. ರವಿ
ದ.ಕ. ಜಿ.ಪಂ. ಸಿಇಒ

ವಿಶೇಷ ವರದಿ

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.