ನೆರಿಯಾ ಕೊಲ್ನ ನದಿಯಲ್ಲಿ ಮೀನುಗಳ ಮಾರಣ ಹೋಮ
ಮೀನು ಹಿಡಿಯಲು ನದಿಗೆ ವಿಷ ಪದಾರ್ಥ ಬೆರೆಸಿದ್ದ ದುಷ್ಕರ್ಮಿಗಳು
Team Udayavani, Mar 31, 2020, 2:41 PM IST
ಬೆಳ್ತಂಗಡಿ: ನೆರಿಯಾ ಗ್ರಾಮದ ಕೊಲ್ನ ನದಿ ಕಿನಾರೆಯಲ್ಲಿ ದುಷ್ಕರ್ಮಿಗಳು ಮೀನು ಹಿಡಿಯಲು ನದಿಗೆ ವಿಷ ಪದಾರ್ಥ ಬೆರೆಸಿದ್ದರಿಂದ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದೆ.
ಸ್ಥಳೀಯರು ಹೇಳುವಂತೆ ಸೋಮವಾರ ರಾತ್ರಿ 5 ಕೆ.ಜಿ.ಗೂ ಅಧಿಕ ಅಡಕೆ ತೋಟಕ್ಕೆ ಬಳಸುವ ಮೈಲುಸುತ್ತು ದ್ರಾವಣ ಬಳಸಿರುವ ಶಂಕೆ ವ್ಯಕ್ತಪಡಿಸಿದ್ದು 2 ಕಿ.ಮೀ. ದೂರ. ಮೀನುಗಳು ಸಾವನ್ನಪ್ಪಿವೆ.
ಇದೇ ನೀರನ್ನು ಕುಡಿದು ನವಿಲು ಸಾವನ್ನಪ್ಪಿದ್ದು ಸ್ಥಳಕ್ಕೆ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೊರೊನಾ ಭೀತಿಯಿಂದ ನಲುಗಿರುವ ನಡುವೆಯೇ ಮನೆಯಿಂದ ಹೊರಗೆ ಬರಲಾಗದ ಮಂದಿ ವಿಷ ಪದಾರ್ಥ ಬಳಸಿ ನದಿ ಮೀನು ಹಿಡಿಯಲು ಮುಂದಾಗುವ ಮೂಲಕ ಅಮಾನುಷ ವರ್ತನೆ ತೋರುತಗತಿದ್ದಾರೆ.
ಕೊಲ್ನ ನದಿಯಲ್ಲಿ ಹೊರ ಪ್ರದೇಶದಿಂದ ಬಂದ ಮಂದಿ ವಿದ್ಯುತ್ ಬಳಸಿ ಮೀನು ಹಿಡಿಯುತ್ತಿರುವ ಆರೋಪವೂ ಕೇಳಿ ಬಂದಿದೆ.
ಇದೇ ನೀರನ್ನು ಸುತ್ತ ಮುತ್ತ ಅಣಿಯೂರು, ಪಿಲಿಕಳ, ನೆರಿಯಾ ಉಂಬಾಜೆ ಸುತ್ತ ಮುತ್ತ ಮಂದಿ ಇದೇ ನೀರನ್ನು ಅವಲಂಬಿಸಿದ್ದಾರೆ.
ಈ ಕುರಿತು ಸೂಕ್ತ ತನಿಖೆಯನ್ನು ನಡೆಸಿ ಆರೋಪಿಗಳ ಪತ್ತೆ ಹಚ್ಚುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್