‘ವೆಕ್ಟರ್‌ ಪೈಂಟಿಂಗ್‌’ನಲ್ಲಿ ಸಿದ್ಧವಾದ ಸ್ವಾಮಿ ಕೊರಗಜ್ಜನ ಚಿತ್ರ 


Team Udayavani, Feb 15, 2019, 4:34 AM IST

15-february-1.jpg

ಮಹಾನಗರ: ತುಳುನಾಡಿನ ಪ್ರಮುಖ ದೈವವಾದ ಸ್ವಾಮಿ ಕೊರಗಜ್ಜನ ಮುಖವರ್ಣಿಕೆಯನ್ನು ಬಿಂಬಿಸುವ ವೆಕ್ಟರ್‌ ಪೈಂಟಿಂಗ್‌ ಇದೀಗ ಕರಾವಳಿಯಾದ್ಯಂತ ಸಾಕಷ್ಟು ಪ್ರಸಿದ್ಧಿ ಪಡೆದಿದ್ದು, ಸಾಮಾಜಿಕ ಜಾಲ ತಾಣಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಅಂದಹಾಗೆ, ಈ ಚಿತ್ರವನ್ನು ಬಿಡಿಸಿದವರು ಮಂಗಳೂರು ಮೂಲದ ಎಸ್‌.ಜೆ. ಶಶಾಂಕ್‌ ಆಚಾರ್ಯ.

ಈ ಹಿಂದೆ ಮಂಗಳೂರಿನ ಕರಣ್‌ ಆಚಾರ್ಯ ಅವರ ಆ್ಯಂಗ್ರಿ ಹನುಮಾನ್‌, ರಾಮಾಣನ ರೂಪದ ಚಿತ್ರಗಳು ದೇಶ ವಿದೇಶಗಳಲ್ಲಿ ಖ್ಯಾತಿಗೊಂಡಿದ್ದವು. ಇದೀಗ ಕರಾವಳಿ ಮೂಲದ ಮತ್ತೊಬ್ಬ ಕಲಾವಿದ ಎಸ್‌.ಜೆ. ಶಶಾಂಕ್‌ ಆಚಾರ್ಯ ಅವರು ಅದೇ ರೀತಿ ಕೊರಗಜ್ಜನ ಚಿತ್ರ ನಿರ್ಮಿಸಿ ಶಹಬ್ಟಾಸ್‌ ಎನಿಸಿಕೊಂಡಿದ್ದಾರೆ. ನಗರದ ರಥಬೀದಿಯಲ್ಲಿ ಡಿಸೈನ್‌ ಸ್ಟುಡಿಯೋ ಹೊಂದಿರುವ ಅವರು ಕೊರಗಜ್ಜನ ಪೈಂಟಿಂಗ್‌ ಪೂರ್ಣಗೊಳಿಸಲು
ತೆಗೆದುಕೊಂಡಿರುವುದು ಕೇವಲ ಒಂದು ದಿನ. ಶಶಾಂಕ್‌ ಅವರು ಎಂದಿನಂತೆ ತಮ್ಮ ಕಚೇರಿಗೆ ಬಂದಾಗ ಯೂಟ್ಯೂಬ್‌ನಲ್ಲಿ ಕೊರಗಜ್ಜನ ಮಹಿಮೆ ಸಾರುವ ಹಾಡು ಕೇಳುತ್ತಿದ್ದರು. ಇದೇ ಸಮಯದಲ್ಲಿ ತಮ್ಮ ಕಂಪ್ಯೂಟರ್‌ ಮುಂದೆ ಕೂತು ಮೊದಲಿಗೆ ಫೋಟೊಶಾಪ್‌ನಲ್ಲಿ ಬಿಳಿಯ ಖಾಲಿ ಪುಟಕ್ಕೆ ಕಪ್ಪು ಬಣ್ಣ ಹಾಕಿ ಮೂರು ನಾಮ ಬಿಡಿಸಿದರು. ಆ ಚಿತ್ರವು ಕೊರಗಜ್ಜನನ್ನು ಹೋಲುತ್ತಿತ್ತು. ಈ ಚಿತ್ರಕ್ಕೆ ಮತ್ತಷ್ಟು ಶ್ರಮ ಹಾಕಿ ಕೊರಗಜ್ಜನ ಸುಂದರ ಪೈಂಟಿಂಗ್‌ ಮಾಡುವ ಹಠ ತೊಟ್ಟರು. ಅದರಂತೆಯೇ ಒಂದೇ ದಿನದಲ್ಲಿ ಚಿತ್ರ ಕೂಡ ಸಿದ್ಧವಾಯಿತು.  ಅವರು ಚಿತ್ರ ಬಿಡಿಸಲು ಪ್ರಾರಂಭಿಸಿದ್ದು, ಬೆಳಗ್ಗೆ 8 ಗಂಟೆಗೆ. ಅದೇ ದಿನ ರಾತ್ರಿ 11 ಗಂಟೆಗೆ ಚಿತ್ರ ಪೂರ್ಣಗೊಂಡಿತು.

ಚಿತ್ರವನ್ನು ಬಿಡಿಸಲು ಯಾವುದೇ ಪೈಂಟಿಂಗ್‌, ಫೋಟೋವನ್ನು ಆಧಾರವಾಗಿರಿಸಲಿಲ್ಲ. ಬದಲಾಗಿ, ತಮ್ಮ ಕಲ್ಪನೆಯ ಕೊರಗಜ್ಜನನ್ನು ಚಿತ್ರದ ಮೂಲಕ ಬಟ್ಟಿ ಇಳಿಸಿದ್ದಾರೆ. ಫೋಟೊಶಾಪ್‌ನಲ್ಲಿ ಪೆನ್‌ ಟೂಲ್‌ ಮತ್ತು ಬ್ರಶ್‌ ಟೂಲ್‌ ಉಪಯೋಗಿಸಿ ಚಿತ್ರ ರಚನೆ ಮಾಡಲಾಗಿದೆ.

ಚಿತ್ರಕ್ಕೆ ಕಪ್ಪು, ಹಳದಿ, ಬೂದು, ಬಿಳಿ, ಕೆಂಪು ಬಣ್ಣವನ್ನು ಬಳಸಲಾಗಿದೆ. ತಲೆಯಲ್ಲಿ ಚಿನ್ನದ ಮುಟ್ಟಾಳೆ, ನಾಗನ ಹೆಡೆ, ಕುತ್ತಿಗೆಗೆ ಹೂವಿನ ಮಾಲೆ, ಹಣೆಗೆ ವಿಭೂತಿಯ ನಾಮವನ್ನು ಚಿತ್ರದಲ್ಲಿ ಬಿಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಬ್ರಹ್ಮಶ್ರೀ ನಾರಾಯಣ ಗುರು, ಮಂತ್ರ ದೇವತೆ, ಭಾರತ ಮಾತೆ ಮತ್ತಿತರ ವೆಕ್ಟರ್‌ ಪೈಂಟಿಂಗ್‌ ರಚನೆ ಮಾಡುವ ಚಿಂತನೆಯಲ್ಲಿದ್ದಾರೆ.

ಪೈಂಟಿಂಗ್‌ಗೆ ಬೇಡಿಕೆ ಹೆಚ್ಚಾಗಿದೆ 
ಶಶಾಂಕ್‌ ಆಚಾರ್ಯ ಅವರು ‘ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, ವಿಶೇಷತೆಯಿಂದ ಕೂಡಿದ ಕೊರಗಜ್ಜನ ಮುಖವರ್ಣಿಕೆಯ ವೆಕ್ಟರ್‌ ಪೈಂಟಿಂಗ್‌ ಗೆಬೇಡಿಕೆ ಹೆಚ್ಚಾಗುತ್ತಿದೆ. ಈ ಫೋಟೋಗೆ ಫ್ರೇಮ್‌ ಹಾಕಿಕೊಡುವಂತೆಯೂ ಅನೇಕ ಮಂದಿ ಕೇಳುತ್ತಿದ್ದಾರೆ. ಅಷ್ಟೇ ಅಲ್ಲದೆ, ಕೆಲವರು ಈ ಚಿತ್ರದ ಮೂಲ ಚಿತ್ರವನ್ನು ಕಳುಹಿಸಿಕೊಡುವಂತೆ ಕೇಳುತ್ತಿದ್ದಾರೆ. ನನ್ನ ಈ ಪ್ರಯತ್ನಕ್ಕೆ ತಂದೆ ಜಗದೀಶ್‌ ಆಚಾರ್‌ ಸಿದ್ದಕಟ್ಟೆ, ತಾಯಿ ಶ್ಯಾಮಲಾ ಅವರು ಪ್ರೋತ್ಸಾಹಿಸುತ್ತಿದ್ದಾರೆ ಎಂದಿದ್ದಾರೆ.

ಮೊದಲ ಪ್ರಯತ್ನ
ನಾನು ಈ ಹಿಂದೆ ಅನೇಕ ಲೋಗೊಗಳನ್ನು, ಜಾಹೀರಾತಿಗಾಗಿ ಚಿತ್ರಗಳನ್ನು ಬಿಡಿಸುತ್ತಿದ್ದೆ. ಪೂರ್ಣಪ್ರಮಾಣದ ಡಿಜಿಟಲ್‌ ಆರ್ಟ್‌ ಮಾಡಿದ್ದು ಇದೇ ಮೊದಲು. ಈ ಚಿತ್ರ ಇಷ್ಟು ಖ್ಯಾತಿ ಪಡೆಯುತ್ತದೆ ಎಂದು ಊಹಿಸಿರಲಿಲ್ಲ. ನಾನು ಬಿಡಿಸಿದ ಚಿತ್ರ ಎಂದು ಗುರುತಿಸುವಾಗ ಖುಷಿಯಾಗುತ್ತದೆ.
– ಶಶಾಂಕ್‌ ಆಚಾರ್ಯ, ಚಿತ್ರ ಕಲಾವಿದ 

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.