ಗಿರಿಜನ ಉಪಯೋಜನೆ ಅನುಷ್ಠಾನದ ಪ್ರಗತಿ ಪರಿಶೀಲನೆ : ಕೋಟ ಶ್ರೀನಿವಾಸ ಪೂಜಾರಿ
ನಿವೇಶನ ವಂಚಿತ ಪರಿಶಿಷ್ಟರ ಸರ್ವೇ
Team Udayavani, May 31, 2022, 6:20 AM IST
ಮಂಗಳೂರು : ಪರಿಶಿಷ್ಟ ಜಾತಿಯ 28 ಲಕ್ಷ ಕುಟುಂಬಗಳ ಪೈಕಿ ಬಹುತೇಕ ಮಂದಿ ನಿವೇಶನ ವಂಚಿತರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಲವು ಮಂದಿ ಇದ್ದು, ಈ ನಿಟ್ಟಿನಲ್ಲಿ ಸರ್ವೇ ನಡೆಸಿ ವರದಿ ನೀಡಬೇಕು ಎಂದು ಸ. ಕಲ್ಯಾಣ ಮತ್ತು ಹಿಂ. ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.
ಅವರು ಸೋಮವಾರ ದ.ಕ. ಜಿ.ಪಂ. ಸಭಾಂಗಣದಲ್ಲಿ ಇಲಾಖೆಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡುವುದರೊಂದಿಗೆ ಅರ್ಹರು ಸವಲತ್ತು ವಂಚಿತರಾಗದಂತೆ ಎಚ್ಚರ ವಹಿಸಬೇಕು. ಜಿಲ್ಲೆಯಲ್ಲಿ ಪ. ಜಾತಿ ಮತ್ತು ಸಮುದಾಯದಲ್ಲಿ ಒಳನಾಡು ಮತ್ತು ಸಾಂಪ್ರದಾಯಿಕ ಮೀನುಗಾರಿಕೆ ನಡೆಸುವವರು ಎಷ್ಟು ಮಂದಿ ಇದ್ದಾರೆ ಎಂಬ ಸರ್ವೇಯಾಗಬೇಕು. ಪ್ರತೀ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 100 ಮಂದಿ ಮೀನುಗಾರರಿಗೆ ಇಲಾಖೆಯಿಂದ ದ್ವಿಚಕ್ರ ವಾಹನ ಒದಗಿಸುವ ಸೌಲಭ್ಯವಿದ್ದು, ಅರ್ಹರ ಸರ್ವೇಯಾಗಬೇಕಿದೆ ಎಂದರು.
ಸ.ಕಲ್ಯಾಣ ಮತ್ತು ಹಿಂ. ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಡಿ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆ ಯಾಗಬೇಕು. ಅಧಿ ಕಾರಿಗಳು ನಿರ್ಲಕ್ಷ್ಯ ತೋರದೆ ಕರ್ತವ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಯೋಜನೆಗಳ ಅನುಷ್ಠಾನ ಕುಂಠಿತವಾಗಿದೆ, ಮುಂದೆ ಇದಕ್ಕೆ ಅವಕಾಶ ನೀಡಬಾರದು ಎಂದರು.
ಇದನ್ನೂ ಓದಿ : ಎಲ್ಲೋ ಅಲರ್ಟ್; ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಮಳೆ ಸಾಧ್ಯತೆ
ಸಿಎಂ ಈಗಾಗಲೇ ಘೋಷಿಸಿದಂತೆ ಬಿಪಿಎಲ್ ಕಾರ್ಡ್ ಹೊಂದಿರುವ 24.5 ಲಕ್ಷ ಮಂದಿಗೆ 75 ಯುನಿಟ್ ವಿದ್ಯುತ್ ಉಚಿತವಾಗಿ ದೊರೆಯಲಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲೆಯ ಅಧಿಕಾರಿಗಳು ವಿಶೇಷ ಒತ್ತು ನೀಡಬೇಕು. ಅಲ್ಲದೆ ಪ. ಜಾತಿ ಮತ್ತು ಪ. ಪಂಗಡದವರನ್ನು ಸಂಪೂರ್ಣವಾಗಿ ಯಶಸ್ವಿನಿ ಯೋಜನೆಯಡಿ ಯಾವ ರೀತಿಯಾಗಿ ತರಲು ಸಾಧ್ಯ ಎಂಬ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ಅಂಗನವಾಡಿಯಿಂದ ಹೊರ ಗುಳಿಯದಂತೆ ಎಚ್ಚರ ವಹಿಸಬೇಕು. ಜಿಲ್ಲೆಯಲ್ಲಿ ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, ಸ್ವಂತ ಕಟ್ಟಡಕ್ಕಾಗಿ ಜಾಗ ಗುರುತಿಸಬೇಕು. ಇಲಾಖೆ ಸೂಕ್ತ ನೆರವು ನೀಡಲು ಸಿದ್ಧವಿದೆ ಎಂದು ಸ.ಕ. ಇಲಾಖಾ ಆಯುಕ್ತ ಆಕಾಶ್ ಕುಮಾರ್ ತಿಳಿಸಿದರು.
ಹಿಂ.ವ. ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಆಕಾಶ್ ಕುಮಾರ್, ಡಿಸಿ ಡಾ| ರಾಜೇಂದ್ರ ಕೆ.ವಿ., ಜಿ.ಪಂ. ಸಿಇಒ ಡಾ| ಕುಮಾರ್, ಅಪರ ಡಿಸಿ ಡಾ| ಕೃಷ್ಣಮೂರ್ತಿ, ಉಪಮೇಯರ್ ಸುಮಂಗಳಾ ರಾವ್ ಉಪಸ್ಥಿತರಿದ್ದರು.
ಕೇರಳಕ್ಕೆ ತಂಡ
ಕೇರಳದಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ಕುಚ್ಚಲಕ್ಕಿ ವಿತರಿಸಲಾಗುತ್ತಿದೆ. ಅಲ್ಲಿ ಯಾವ ರೀತಿ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂಬುದನ್ನು ತಿಳಿಯಲು ಆಹಾರ ಇಲಾಖಾ ಉಪನಿರ್ದೇಶಕರ ತಂಡದೊಂದಿಗೆ ಕೇರಳಕ್ಕೆ ಭೇಟಿ ನೀಡಲಾಗುವುದು. ಬಳಿಕ ರಾಜ್ಯದಲ್ಲಿಯೂ ಸಮರ್ಪಕ ಅನುಷ್ಠಾನವಾಗಲಿದೆ ಎಂದು ಸಚಿವ ಕೋಟ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ