ನಗರಾಡಳಿತ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ: ತಡೆಯಾಜ್ಞೆ ತೆರವಿಗೆ ಕೋಟ ಆಗ್ರಹ


Team Udayavani, Jun 3, 2019, 10:42 AM IST

Udayavani Kannada Newspaper

ಮಂಗಳೂರು: ರಾಜ್ಯದ ಆನೇಕಲ್‌, ಹೆಬ್ಬಗೋಳು, ಅತ್ತಿಬೆಲೆ, ಗುಬ್ಬಿ, ಧಾರವಾಡ, ರಾಯಬಾಗ್‌ನ ನಗರಾಡಳಿತ ಸಂಸ್ಥೆಗಳಲ್ಲಿ ಮೀಸಲಾತಿ ಪಟ್ಟಿಗೆ ಇರುವ ನ್ಯಾಯಾಲಯದ ತಡೆಯನ್ನು ತೆರವುಗೊಳಿಸಲು ರಾಜ್ಯ ಸರಕಾರ ಕೂಡಲೇ ಕಾರ್ಯಪ್ರವೃತ್ತವಾಗಿ ರಾಜ್ಯದಲ್ಲಿ 8 ತಿಂಗಳ ಹಿಂದೆ ಚುನಾವಣೆ ನಡೆದ 109 ಹಾಗೂ ಇತ್ತೀಚೆಗೆ ಚುನಾವಣೆ ನಡೆದ 63 ನಗರಾಡಳಿತ ಸಂಸ್ಥೆಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಅನುವು ಮಾಡಿಕೊಡಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ರವಿವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಪೌರಾಡಳಿತ ಸಂಸ್ಥೆಗಳು ಅತಂತ್ರವಾಗಿವೆ. ಸ್ಥಳೀಯ ಆಡ‌ಳಿತಗಳಿಗೆ ಸ್ವತಂತ್ರ ಆಡಳಿತ ಅವಕಾಶ ಕಲ್ಪಿಸುವುದಾಗಿ ಹೇಳುತ್ತಿರುವ ಸರಕಾರಗಳೇ ರಾಜಕೀಯ ಪ್ರವೇಶಕ್ಕೆ ಆಸ್ಪದ ನೀಡುತ್ತಿವೆ.

ಇದರ ಪರಿಣಾಮ ಚುನಾವಣೆ ನಡೆದ ಬಳಿಕ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆಯದೆ ಅಧಿ ಕಾರಿಗಳೇ ಆಡಳಿತ ನಡೆಸುವಂತಾಗಿದೆ ಎಂದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕುರ್ಚಿ ಉಳಿಸಿಕೊಳ್ಳುವುದರಲ್ಲೇ ಬ್ಯುಸಿಯಾಗಿದ್ದು, ಅವರಿಗೆ 109 ನಗರಾಡಳಿತಗಳ ಆಡಳಿತ ಬೇಕಾಗಿಲ್ಲ ಎಂಬಂತೆ ತೋರುತ್ತಿದೆ ಎಂದು ಟೀಕಿಸಿದ ಅವರು, ಚುನಾವಣೆ ನಡೆದ ಎಲ್ಲ ನಗರಾಡಳಿತ ಸಂಸ್ಥೆಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಕೂಡಲೇ ನಡೆಯ ಬೇಕು. ಇದನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸದಿದ್ದರೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದರು.

ಕರಾವಳಿಗೆ 1,000 ಕೋ.ರೂ. ಬೇಕು
ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭೀಕರ ಬರಗಾಲ ಆವರಿಸಿದ್ದು, ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಯೋಜನೆಗಳಿಗೆ 1000 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಲಾಗಿದೆ. ಆದರೆ ಬಜೆಟ್‌ನಲ್ಲಿ 200 ಕೋಟಿ ರೂ. ಮಾತ್ರ ಮೀಸಲಿಟ್ಟಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿಗಳು ಕರಾವಳಿಯ ಹಿತಾಸಕ್ತಿಯನ್ನು ಅವಗಣಿಸಿದ್ದಾರೆ ಎಂದು ಶ್ರೀನಿವಾಸ ಪೂಜಾರಿ ಟೀಕಿಸಿದರು.

ಕರಾವಳಿ ಜನತೆಗೆ ಬುದ್ಧಿಇಲ್ಲ ಎಂದು ಈ ಹಿಂದೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿಗಳು ಈಗ ಬರದ ವಿಚಾರದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳನ್ನು ಕರೆಸಿ ಚರ್ಚೆ ನಡೆಸುವ ಗೋಜಿಗೆ ಹೋಗಿಲ್ಲ. ಸಮುದ್ರ ನೀರು ಶುದ್ಧೀಕರಿಸುವ ಯೋಜನೆ ಜಾರಿಗೆ ಬಿಜೆಪಿ ಒತ್ತಾಯಿಸಿದರೂ ಸರಕಾರ ಸ್ಪಂದಿಸುತ್ತಿಲ್ಲ. ಅವೈಜ್ಞಾನಿಕವಾದ ಎತ್ತಿನಹೊಳೆ ಯೋಜನೆಯನ್ನು ಜಾರಿಗೊಳಿಸಲು ಆಸಕ್ತಿ ತೋರಿಸುತ್ತಿರುವ ಸರಕಾರ ಕರಾವಳಿಯಲ್ಲಿ ನೀರಿನ ಬವಣೆ ಹೋಗಲಾಡಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

ಜಿಂದಾಲ್‌ಗೆ ಪುಡಿಗಾಸಿಗೆ 3,666 ಎಕರೆ ಭೂಮಿ ನೀಡುವುದು ಸರಿಯಲ್ಲ
ಜಿಂದಾಲ್‌ ಕಂಪೆನಿಗೆ ಪುಡಿಗಾಸಿಗೆ 3,666 ಎಕರೆಯಷ್ಟು ಕೋಟ್ಯಂತರ ರೂ. ಬೆಲೆಬಾಳುವ ಭೂಮಿಯನ್ನು ಪರಭಾರೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದ್ದು, ಇದು ಸರಿಯಲ್ಲ. ತೀರ್ಮಾನವನ್ನು ಕೂಡಲೇ ಕೈಬಿಡಬೇಕು ಎಂದರು.

ಜೂ. 5ರಂದು ಬಿಜೆಪಿ ಶಾಸಕಾಂಗ ಸಭೆ
13,000 ಕೋಟಿ ರೂ.ಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕೈಗೆತ್ತಿ ಕೊಂಡಿರುವ ಸರಕಾರ, ಅದರ ಗುತ್ತಿಗೆದಾರರಿಗೆ ಮೊತ್ತ ಪಾವತಿಸುವ ಲೆಕ್ಕಾಚಾರದಲ್ಲಿ ಇದೆ. ಹಾಸನದಲ್ಲಿ ಸಚಿವ ರೇವಣ್ಣ ಅವರು ಕೈಗೊಂಡ ನೀರಾವರಿ ಸಹಿತ ಎಲ್ಲ ಯೋಜನೆಗಳಲ್ಲಿ ಕಾಮಗಾರಿ ನಡೆಸದೆ ಬಿಲ್‌ ಪಾವತಿಸಲಾಗಿದೆ ಎಂದು ಕಾಂಗ್ರೆಸ್‌ ಮುಖಂಡರೇ ಆರೋಪಿಸಿದ್ದಾರೆ. ಈ ಎಲ್ಲ ವಿಷಯಗಳ ಕುರಿತು ಜೂ.5ರಂದು ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಯಡಿಯೂರಪ್ಪ ಅವರು ಚರ್ಚೆ ನಡೆಸಲಿದ್ದಾರೆ. ಸರಕಾರದ ವೈಫಲ್ಯಗಳ ವಿರುದ್ಧ ಅಧಿವೇಶದಲ್ಲಿ ಹೋರಾಟ ನಡೆಸಲು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.