ಬ್ಯಾಂಕ್ ನಿಂದ 3.5 ಕೋಟಿ ದರೋಡೆ ವಿಫಲ ಯತ್ನ ;ಇಬ್ಬರ ಬಂಧನ
Team Udayavani, Jul 4, 2017, 12:10 PM IST
ಉಳ್ಳಾಲ: ಕೋಟೆಕಾರು ಸಹಕಾರಿ ಬ್ಯಾಂಕ್ನ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜೂನ್ 23 ರ ಹಾಡಹಗಲೇ ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಪಿಲಾರ್ ಮೂಲದ ಇಬ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಓರ್ವ ಆರೋಪಿ ಬ್ಯಾಂಕ್ ನ ನಿರ್ದೇಶಕಿಯ ಪತಿ,ಇನ್ನೋರ್ವ ನೆರೆಮನೆಯ ಯುವಕ ಎಂದು ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಸಿಬಂದಿಗೆ ಚೂರಿ ತೋರಿಸಿ ಶೌಚಾಲಯದಲ್ಲಿ ಕೂಡಿ ಹಾಕಿ 3.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ವನ್ನು ಜೂನ್ 23 ರ ಶುಕ್ರವಾರ ಮಧ್ಯಾಹ್ನ ದರೋಡೆ ನಡೆಸಿ ಚಿನ್ನಾಭರಣ ಗೋಣಿ ಚೀಲದಲ್ಲಿ ತುಂಬಿಸಿ ಪರಾರಿಯಾಗುವ ಹಂತದಲ್ಲಿ ಬ್ಯಾಂಕ್ನ ಸಿಬಂದಿಯ ಕಲ್ಲಿನೇಟಿಗೆ ತತ್ತರಿಸಿದ ದರೋಡೆ ಕೋರರು ಚಿನ್ನಾಭರಣ ಬಿಟ್ಟು ಪರಾರಿಯಾಗಿದ್ದರು.
ಜಾಕೆಟ್ ಮತ್ತು ಹೆಲ್ಮೆಟ್ ಧರಿಸಿದ್ದ ಇಬ್ಬರು ಆಗಂತುಕರು ಬಂದಿದ್ದು, ದಾರಿಯಲ್ಲಿ ನಿಂತಿದ್ದ ರಾತ್ರಿ ವೇಳೆ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುವ ಉಮೇಶ್ ಅವರ ಕುತ್ತಿಗೆ ಹಿಡಿದು ತಳ್ಳಿಕೊಂಡು ಬ್ಯಾಂಕ್ ಒಳಗೆ ಬಂದರು. ಬಳಿಕ ಷಟರ್ ಬಾಗಿಲು ಎಳೆದು ಬ್ಯಾಂಕ್ನ ಪ್ರಬಂಧಕಿ ಮನೋಹರಿ, ಸಿಬಂದಿ ಸುಧೀರ್ ಮತ್ತು ರಾಮಚಂದ್ರ ಅವರಿಗೆ ಚೂರಿ ತೋರಿಸಿ ಬ್ಯಾಂಕ್ನೊಳಗಿರುವ ಶೌಚಾಲಯದಲ್ಲಿ ಕೂಡಿ ಹಾಕಿದ್ದರು.
ಪರಾರಿಯಾಗುವ ಯತ್ನದಲ್ಲಿದ್ದವರ ಮೇಲೆ ಬಾಗಿಲು ಒಡೆದು ಹೊರಬಂದ ರಾಮಚಂದ್ರ ದೊಡ್ಡ ಜಲ್ಲಿಕಲ್ಲೊಂ ದನ್ನು ಎಸೆದರು. ಕಲ್ಲಿನೇಟಿಗೆ ತತ್ತರಿಸಿದ ದರೋಡೆ ಕೋರರ ಕೈಯಲ್ಲಿದ್ದ ಬಂಗಾರ ತುಂಬಿದ ಗೋಣಿ ಚೀಲ ಕೆಳಗೆ ಬಿದ್ದಿತು. ಇನ್ನು ನಿಂತರೆ ಅಪಾಯ ಎಂದರಿತ ದರೋಡೆಕೋರರು
ಪರಾರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ