ಕೃಷ್ಣ ಜನ್ಮಾಷ್ಟಮಿ ಸಂಭ್ರಮ
Team Udayavani, Aug 15, 2017, 7:10 AM IST
ಮಂಗಳೂರು/ಉಡುಪಿ: ಕರಾವಳಿಯ ವಿವಿಧ ಭಾಗಗಳಲ್ಲಿ ಚಾಂದ್ರಮಾನ ಮಾಸ ಕ್ರಮದಂತೆ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ ಸಡಗರದಿಂದ ಆಚರಿಸಲಾಯಿತು. ವಿವಿಧ ದೇವಸ್ಥಾನಗಳಲ್ಲಿ ಸೋಮವಾರ ಬೆಳಗ್ಗಿನಿಂದಲೇ ಶ್ರೀ ಕೃಷ್ಣನಿಗೆ ಪೂಜೆ ಪುನಸ್ಕಾರಗಳು ನಡೆದವು. ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ಮಿನಿ ಪುರಭವನ, ಉಡುಪಿ ಸ.ಬಾ.ಪ.ಪೂ.ಕಾಲೇಜಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಮ್ಮಿಕೊಳ್ಳಲಾಯಿತು.
ಮಂಗಳೂರಿನ ಸಂಘನಿಕೇತನ, ಕೊಟ್ಟಾರ ದ್ವಾರಕನಗರದ ಶ್ರೀ ಕೃಷ್ಣ ಜ್ಞಾನೋದಯ ಭಜನ ಮಂದಿರ, ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಸಹಿತ ವಿವಿಧೆಡೆ ಜನ್ಮಾಷ್ಟಮಿ ಆಚರಿಸಲಾಯಿತು. ಉಜಿರೆ, ಲಾೖಲ, ಸುಳ್ಯ ಚೆನ್ನಕೇಶವ ದೇವಸ್ಥಾನ, ಸುಬ್ರಹ್ಮಣ್ಯ ದೇಗುಲ ಸಹಿತ ವಿವಿಧೆಡೆ ಅಷ್ಟಮಿ ಆಚರಣೆ ಜರಗಿತು. ಜಿಲ್ಲೆಯ ಬಹುತೇಕ ಕಡೆ ಮೊಸರು ಕುಡಿಕೆ ಉತ್ಸವ, ಶ್ರೀ ಕೃಷ್ಣ ವೇಷ ಸ್ಪರ್ಧೆ ಹಾಗೂ ಇಸ್ಕಾನ್ ವತಿಯಿಂದ ಶ್ರೀ ಕೃಷ್ಣಾಷ್ಟಮಿ ಆ. 15ರಂದು ನಡೆಯಲಿದೆ.
ಉಡುಪಿ ಶ್ರೀಕೃಷ್ಣ ಮಠದಲ್ಲಿ ಬೆಳಗ್ಗೆ ಲಕ್ಷತುಳಸೀ ಅರ್ಚನೆಯನ್ನು ಪರ್ಯಾಯ ಶ್ರೀಪಾದರು ನೆರವೇರಿಸಿದರು. ಮಧ್ಯರಾತ್ರಿ ಪೂಜೆ ನಡೆಸಿದ ಬಳಿಕ ಭಕ್ತರು ಅಘÂì ಪ್ರದಾನ ನಡೆಸಿದರು. ಗೌಡ ಸಾರಸ್ವತ ಸಮಾಜದ ಎಲ್ಲ ದೇವಸ್ಥಾನಗಳು, ಭಜನ ಮಂದಿರಗಳಲ್ಲಿ ವಿಶೇಷ ಪೂಜೆ, ಭಜನೆ, ಅಘÂìಪ್ರದಾನಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ