ಕೃಷ್ಣಾಪುರ: ಮಕ್ಕಳ ಚೈತನ್ಯ ಶಿಬಿರ ಉದ್ಘಾಟನೆ
Team Udayavani, Apr 11, 2019, 6:00 AM IST
ಮಹಾನಗರ: ಎಸ್ಪಿವೈಎಸ್ಎಸ್ ನಂದನೇಶ್ವರ ವಲಯದ ಯುವಕ ಮಂಡಲ ಕೃಷ್ಣಾಪುರ ಶಾಖೆಯಲ್ಲಿ ಮಕ್ಕಳ ಚೈತನ್ಯ ಶಿಬಿರ ಉದ್ಘಾಟನೆಗೊಂಡಿತು.
ಮುಖ್ಯ ಅತಿಥಿಯಾಗಿದ್ದ ಪಿ. ಸದಾ ಶಿವ ಐತಾಳ್ ಮಾತನಾಡಿ, ಚೈತನ್ಯ ಶಿಬಿರದಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ್ದ ಎಸ್ಪಿವೈಎಸ್ಎಸ್ನ ಪದಾಧಿಕಾರಿ ರಾಮಕೃಷ್ಣ ಮಾತನಾಡಿ, ಮೊಬೈಲ್ ಬಳಕೆ ಮಕ್ಕಳನ್ನು ದಾರಿ ತಪ್ಪಿಸುತ್ತದೆ ಎನ್ನುತ್ತಾರೆ. ಆದರೆ ಉತ್ತಮ ಕೆಲಸ ಗಳಿಗೆ ಮೊಬೈಲ್ ಬಳಸುವುದರಿಂದ ಮಕ್ಕಳ ಜ್ಞಾನಾ ಭಿವೃದ್ಧಿಯೂ ಸಾಧ್ಯ. ಇಂತಹ ಕಾರ್ಯ ಕ್ರಮಗಳ ಮೂಲಕ ಮಕ್ಕಳನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಲು ಅಡಿಪಾಯ ಹಾಕಿಕೊಟ್ಟಂತಾಗುತ್ತದೆ ಎಂದರು.
ಎಸ್ಪಿವೈಎಸ್ಎಸ್ನ ವೀರೇಶ್ ಪ್ರಸ್ತಾವನೆಗೈದರು. ಸುಧಾ ಸ್ವಾಗತಿಸಿದರು. ಶ್ರುತಿ ವಂದಿಸಿದರು. ಸಂಧ್ಯಾ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ