17ರ ಪೋರ ಹಳೆಯ ವಸ್ತುಗಳ ಸಂಗ್ರಹಕಾರ!


Team Udayavani, Apr 19, 2018, 6:20 AM IST

1104kbk1.jpg

ಕಬಕ: ಈ ಪೋರನಿಗೆ ಇನ್ನೂ ಹದಿನೇಳರ ಹರೆಯ. ಆದರೆ, ಆತನ ಸಂಗ್ರಹ ಬೆರಗು ಮೂಡಿಸುವಂಥದ್ದು, ಕಬಕದ ಕೆ.ಎಸ್‌.ಅನೀಸ್‌ಗೆ ಹಳೆಯ ವಸ್ತುಗಳು,ನಾಣ್ಯ ಹಾಗೂ ನೋಟುಗಳನ್ನು ಸಂಗ್ರಹಿಸುವ ಹವ್ಯಾಸ. ಪ್ರಾಚೀನ ಕಾಲದ ಕೈ ಕೆತ್ತನೆಯ ಟಕ್ಕ ನಾಣ್ಯ ಸಹಿತ 192 ದೇಶಗಳ ನಾಣ್ಯ,ಕರೆ ನ್ಸಿ, ಲ್ಯಾಂಪ್‌, ಹಾಲು ಅಳೆಯುವ ಕುಡುತೆ,ಹುಕ್ಕಾ ಸೇದುವ ಸಾಧನ, ಗೋಲಿ ಸೋಡಾದ ಬಾಟಲ್‌, ಪುರಾತನ ಲ್ಯಾಂಡ್‌ ಫೋನ್‌ ಸೇರಿದಂತೆ ಸಾವಿರಾರು ವಸ್ತುಗಳು ಈತನ ಸಂಗ್ರ ಹದಲ್ಲಿವೆ.

ನಾಲ್ಕನೇ ತರಗತಿಯಲ್ಲಿದ್ದಾಗ ತನಗೆ ಸಿಕ್ಕ ಅಪೂರ್ವ ಹಾಗೂ ವಿಶಿಷ್ಟ ವಸ್ತುಗಳನ್ನು ಸಂಗ್ರಹಿಸುವ ಅಭಿರುಚಿ ಬೆಳೆಸಿಕೊಂಡ ಅನೀಸ್‌, ಸದ್ಯ 3ಲಕ್ಷ ರೂ. ಮೌಲ್ಯದ ವಸ್ತುಗಳ ಸಂಗ್ರಹ ಹೊಂದಿದ್ದಾನೆ. ಸಂಘ-ಸಂಸ್ಥೆಗಳು ಆಯೋಜಿಸುವ ಪ್ರದರ್ಶನಗಳಲ್ಲಿ ಹಲವು ಬಹುಮಾನಗಳನ್ನೂ ಗೆದ್ದಿದ್ದಾನೆ.

ಕಬಕದ ಅಬ್ಟಾಸ್‌ ಮತ್ತು ರಹ್ಮತ್‌ ದಂಪತಿಯ ಕಿರಿಯ ಪುತ್ರ ಅನೀಸ್‌ಗೆ ಮಾವ, ಕಲ್ಲಡ್ಕ ನಿವಾಸಿ ಕೆ.ಎಸ್‌. ಯಾಸೀರ್‌ ಅವರೇ ಪ್ರೇರಣೆ. ಅವರು ರಾಷ್ಟ್ರ ಮಟ್ಟದ ಪ್ರಾಚೀನ ವಸ್ತು ಸಂಗ್ರಹಕಾರರು. ಅವರ ಮನೆಗೆ ಹೋಗುತ್ತಿದ್ದಾಗೆಲ್ಲ ಈ ವಸ್ತುಗ ಳನ್ನು ಕುತೂಹಲದಿಂದ ನೋಡುತ್ತಿದ್ದ ಅನೀಸ್‌,ಮಾವನ ಹವ್ಯಾ ಸವನ್ನು ತಾನೂ ರೂಢಿಸಿಕೊಂಡ. ಯಾರಾದರೂ ಖರ್ಚಿಗೆ ಹಣ ನೀಡಿದರೆ, ಅದರಿಂದ ಅಪೂರ್ವ ವಸ್ತುಗಳನ್ನು ಕೊಂಡು ತನ್ನ ಸಂಗ್ರಹಕ್ಕೆ ಸೇರಿಸಿಕೊಳ್ಳುತ್ತಾನೆ. ಅವನ ಹವ್ಯಾಸಕ್ಕೆ ನಮ್ಮ ಕೈಲಾದ ಸಹಕಾರ ನೀಡುತ್ತೇವೆ ಎಂದು ತಾಯಿ ರಹ್ಮತ್‌ ಹೇಳುತ್ತಾರೆ.

ಕಾಡುತ್ತಿದೆ ಮಧುಮೇಹ
ಯೋಗ ಹಾಗೂ ನೈತಿಕ ಶಿಕ್ಷಣ, ಚಿತ್ರಕಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ, ಬಹುಮಾನಗಳಿಸಿದ್ದಾನೆ. ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ ಆಯೋಜಿಸಿದ್ದ ಗಿನ್ನಿಸ್‌ ದಾಖಲೆಗಾಗಿ ಯೋಗಾಸನ ಪ್ರದರ್ಶನದಲ್ಲೂ ಅನೀಸ್‌ ಪಾಲ್ಗೊಂಡಿದ್ದ. ಆಟೋಟಗಳಲ್ಲಿ ಚುರುಕಾಗಿದ್ದರೂ ಬಾಲ್ಯದಲ್ಲೇ ಕಾಡತೊಡಗಿದ ಮಧುಮೇಹ ಈತನ ಕ್ರೀಡಾ ಚಟುವಟಿಕೆಗೆ ಅಡ್ಡಿಯಾಗಿದೆ. ಕೈ ಕೊಡುವ ಆರೋಗ್ಯದಿಂದಾಗಿ ವಿದ್ಯಾಭ್ಯಾಸವನ್ನು ಪ್ರಥಮ ಪಿಯುಸಿಗೇ ಮೊಟಕುಗೊಳಿಸಿ,ಮೊಬೈಲ್‌ ಟೆಕ್ನಿಕಲ್‌ ಕೋರ್ಸ್‌ ಮಾಡುತ್ತಿದ್ದಾನೆ.

ತನ್ನ ಸಂಗ್ರಹದ ವಸ್ತುಗಳನ್ನು ಜೋಡಿಸಿಡಲು ವಿಶೇಷ ಕೊಠಡಿ ನಿರ್ಮಿಸುವ ಅಭಿಲಾಷೆ ಹೊಂದಿದ್ದು, ಈ ನಿಟ್ಟಿನಲ್ಲಿ ಕಾರ್ಯುಪ್ರ ವೃತ್ತನಾಗಿದ್ದಾನೆ.

 - ಉಮ್ಮರ್‌ ಜಿ.ಕಬಕ

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.