“ಆಧುನಿಕ ಯುಗದಲ್ಲಿ  ಕ್ಷಣಕ್ಕೊಂದು ಹೊಸ ಆವಿಷ್ಕಾರ’


Team Udayavani, Feb 27, 2017, 5:16 PM IST

2602rjh1.jpg

ದರ್ಬೆ : ಅತ್ಯಂತ ವೇಗವಾಗಿ ಬದಲಾಗುತ್ತಿರುವ ಈ ಸಂಪರ್ಕ, ತಂತ್ರಜ್ಞಾನದ ಯುಗದಲ್ಲಿ ಪ್ರತಿಯೊಂದು ಕ್ಷಣದಲ್ಲಿಯೂ ಹೊಸ ಆವಿಷ್ಕಾರಗಳನ್ನು ಕಾಣುವಂತಾಗಿದೆ ಎಂದು ಸಂತ ಫಿಲೋಮಿನಾ ಪ. ಪೂ. ಕಾಲೇಜಿನ ಪ್ರಾಂಶುಪಾಲ ವಂ| ವಿಜಯ್‌ ಲೋಬೊ ಅವರು ಹೇಳಿದರು.

ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಗಣಕಶಾಸ್ತ್ರ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ಅಂತರ್‌ ಕಾಲೇಜು ಐಟಿ ಮತ್ತು ಸಾಂಸ್ಕೃತಿಕ ಉತ್ಸವ ಟೆಕ್ನೋಸ್ಪಾರ್ಕ್‌ – 2017 ಇದರ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸ್ಪರ್ಧಾ ಮನೋಭಾವನೆಯಿಂದ ಭಾಗವಹಿಸಿದ ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದು ಹೇಳಿದರು.

ಗೌರವ ಅತಿಥಿಯಾಗಿದ್ದ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೆರೊ ಮಾತನಾಡಿ, ನಾವು ಆಧುನಿಕ ತಂತ್ರಜ್ಞಾನದ ಪ್ರಭಾವದಿಂದಾಗಿ ಮಾನವೀಯ ಸಂಬಂಧಗಳನ್ನು ಮರೆಯುತ್ತಿದ್ದೇವೆ. ಸಮಾಜದಲ್ಲಿ ಭಾವನೆಗಳನ್ನು ಪರಸ್ಪರ ಹಂಚಿಕೊಳ್ಳುವ ಸನ್ನಿವೇಶ ನಿರ್ಮಾಣವಾಗಬೇಕು ಎಂದರು.

ಸ್ನಾತಕೋತ್ತರ ಗಣಕಶಾಸ್ತ್ರ ವಿಭಾಗದ ಸಂಯೋಜಕ ಗೋವಿಂದ ಪ್ರಕಾಶ್‌ ಮತ್ತು ಟೆಕ್ನೋಸ್ಪಾರ್ಕ್‌ ಸಂಯೋಜಕ ಹರೀಶ್‌ ಭಾರದ್ವಾಜ್‌ ಉಪಸ್ಥಿತರಿದ್ದರು. ಗಣಕಶಾಸ್ತ್ರ ವಿಭಾಗದ ಉಪನ್ಯಾಸಕ ಸೂರ್ಯನಾರಾಯಣ ಭಟ್‌ ಬಿ. ಬಹುಮಾನ ವಿಜೇತರ ವಿವರ ನೀಡಿದರು. ನಾಗಶ್ರೀ ವಿ. ಸ್ವಾಗತಿಸಿ, ಕೌಶಲ್ಯಾ ಎಸ್‌. ವಂದಿಸಿದರು. ಸುರಕ್ಷಾ ಎಸ್‌. ಕಾರ್ಯಕ್ರಮ ನಿರ್ವಹಿಸಿದರು.

ಟೆಕ್ನೋಸ್ಪಾರ್ಕ್‌ ವಿಜೇತರು
ಮಂಗಳೂರು ವಿವಿ ಮಟ್ಟದಲ್ಲಿ ಜರಗಿದ ಸ್ಪರ್ಧೆಯಲ್ಲಿ 12 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದು, ಮಂಗಳೂರಿನ ಕೆನರಾ ಕಾಲೇಜು ತಂಡ ಸಮಗ್ರ ಪ್ರಶಸ್ತಿ, ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪುತ್ತೂರಿನ ವಿವೇಕಾನಂದ ಕಾಲೇಜು ತಂಡ ಪಡೆದುಕೊಂಡಿತು. ಪ್ರಸೆಂಟೇಷನ್‌ ಸ್ಪರ್ಧೆಯಲ್ಲಿ ಕಣಚೂರು ಕಾಲೇಜು ದೇರಳಕಟ್ಟೆ (ಪ್ರ), ಸಂತ ಫಿಲೋಮಿನಾ ಕಾಲೇಜು ಪುತ್ತೂರು (ದ್ವಿ), ವೆಬ್‌ ಡಿಸೈನಿಂಗ್‌ನಲ್ಲಿ ಸಂತ ಅಲೋ ಶಿಯಸ್‌ ಕಾಲೇಜು ಮಂಗಳೂರು (ಪ್ರ), ಸೇಕ್ರೆಡ್‌ ಹಾರ್ಟ್‌ ಕಾಲೇಜು ಮಡಂತ್ಯಾರು (ದ್ವಿ), ನೆಟ್‌ವರ್ಕ್‌ ಗೇಮಿಂಗ್‌ನಲ್ಲಿ ಫಿಲೋಮಿನಾ ಕಾಲೇಜು (ಪ್ರ), ಸಂತ ಅಲೋಶಿಯಸ್‌ ಕಾಲೇಜು ಮಂಗಳೂರು (ದ್ವಿ), ಕೊಲಾಜ್‌ನಲ್ಲಿ ವಿವೇಕಾನಂದ ಕಾಲೇಜು (ಪ್ರ), ಕಣಚೂರು ಕಾಲೇಜು ದೇರಳಕಟ್ಟೆ (ದ್ವಿ),  ಕೋಡಿಂಗ್‌ನಲ್ಲಿ  ವಿವೇಕಾನಂದ ಕಾಲೇಜು (ಪ್ರ), ಸೇಕ್ರೆಡ್‌ ಹಾರ್ಟ್‌ ಕಾಲೇಜು ಮಡಂತ್ಯಾರು (ದ್ವಿ), ಐಸ್‌ ಬ್ರೇಕರ್‌ನಲ್ಲಿ ಕೆನರಾ ಕಾಲೇಜು ಮಂಗಳೂರು (ಪ್ರ), ಸಂತ ಅಲೋಶಿಯಸ್‌ ಕಾಲೇಜು ಮಂಗಳೂರು (ದ್ವಿ), ಆ್ಯಪ್‌ ಚಾಲೆಂಜ್‌ನಲ್ಲಿ ಎಸ್‌ಎಂಎಸ್‌ ಕಾಲೇಜು ಬ್ರಹ್ಮಾವರ (ಪ್ರ), ವಿವೇಕಾನಂದ ಕಾಲೇಜು (ದ್ವಿ), ಜನಪದ ನೃತ್ಯದಲ್ಲಿ ಕೆನರಾ ಕಾಲೇಜು ಮಂಗಳೂರು (ಪ್ರ) ಮತ್ತು ಸೇಕ್ರೆಡ್‌ ಹಾರ್ಟ್‌ ಕಾಲೇಜು ಮಡಂತ್ಯಾರು (ದ್ವಿ) ಬಹುಮಾನ ಗಳಿಸಿತು.

ಮಾನವ ಸಂಪತ್ತಿನ ಕೊರತೆ
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಿಯೊ ನೊರೊನ್ಹ ಮಾತನಾಡಿ,  ದೇಶದಲ್ಲಿ ಅತ್ಯಾ ಧುನಿಕ ರೀತಿಯ ಯಂತ್ರೋಪಕರಣಗಳು ಲಭ್ಯವಿವೆ. ಆದರೆ ಅವುಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಮರ್ಥ್ಯವಿರುವ ಮಾನವ ಸಂಪತ್ತಿನ ಕೊರತೆ ಯಿದೆ. ಇಂದಿನ ದಿನಗಳಲ್ಲಿ ಗುಣಮಟ್ಟದ ಸಂಪ ನ್ಮೂಲಕ್ಕೆ  ಬಹಳಷ್ಟು  ಬೇಡಿಕೆಯಿದೆ ಎಂದರು.
 

ಟಾಪ್ ನ್ಯೂಸ್

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.