ಕೆಎಸ್ಸಾರ್ಟಿಸಿ: 6 ವರ್ಷಗಳಿಂದ ಅಪಘಾತ ಇಳಿಕೆ


Team Udayavani, Jun 27, 2019, 5:00 AM IST

1406MLR2-KSRTC

ಸಾಂದರ್ಭಿಕ ಚಿತ್ರ.

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಒಂದೆಡೆ ಸ್ಮಾರ್ಟ್‌ ವ್ಯವಸ್ಥೆಗಳಿಗೆ ಒಗ್ಗಿಕೊಳ್ಳುತ್ತಿದ್ದರೆ ಇನ್ನೊಂದೆಡೆ ಅಪಘಾತ ಪ್ರಮಾಣವನ್ನೂ ಇಳಿಸಿಕೊಂಡು ಸುರಕ್ಷಿತವೆನಿಸಿಕೊಳ್ಳುತ್ತಿದೆ. ಅವಘಡ ಪ್ರಮಾಣ ಇಳಿಕೆ ಆರು ವರ್ಷಗಳಿಂದ ಸತತವಾಗಿ ದಾಖಲಾಗಿದೆ.

ಕೆಎಸ್‌ಆರ್‌ಟಿಸಿಯ ಅಂಕಿ – ಅಂಶದ ಪ್ರಕಾರ 2013- 14ನೇ ಸಾಲಿನಲ್ಲಿ 1,266 ಅಪಘಾತವಾಗಿತ್ತು, 2014-15ನೇ ಸಾಲಿನಲ್ಲಿ 1,207, 2015-16ರಲ್ಲಿ 1,100, 2016-17ರಲ್ಲಿ 1,050 ಮತ್ತು 2017-18ನೇ ಸಾಲಿನಲ್ಲಿ 1,043ಕ್ಕೆ ಇಳಿಕೆಯಾಗಿದೆ. ಇದೇ ಇಳಿಕೆ ಮುಂದುವರಿದು 2018-19ನೇ ಸಾಲಿನಲ್ಲಿ 1010 ಅವಘಡಗಳಷ್ಟೇ ಆಗಿವೆ.
ಸ್ಥಳೀಯ ಮಟ್ಟದಲ್ಲಿಯೇ ಅಪಘಾತ ವಲಯ “ಬ್ಲಾಕ್‌ ಸ್ಪಾಟ್‌’ ಗುರುತಿಸುವಿಕೆ ಇದಕ್ಕೆ ಪ್ರಮುಖ ಕಾರಣ. ಯಾವ ರಸ್ತೆಗಳಲ್ಲಿ ಹೆಚ್ಚು ಅವಘಡಗಳು ಸಂಭವಿಸುತ್ತವೆ ಎಂದು ಪ್ರತೀ ನಿಗಮದ ವತಿಯಿಂದ ಈಗಾಗಲೇ ಸರ್ವೇ ಮಾಡಲಾಗಿದೆ. ಅದರನ್ವಯ ಅಪಘಾತ ವಲಯಗಳು, ಶಾಲಾ ವಠಾರಗಳ ಸಮೀಪ ಸೂಚನ ಫಲಕ, ರಸ್ತೆ ಉಬ್ಬು ಅಳವಡಿಕೆ ಮಾಡಲಾಗಿದೆ.

ಕೆಎಸ್ಸಾರ್ಟಿಸಿ ವತಿಯಿಂದ ಪ್ರತೀ ವರ್ಷ ರಸ್ತೆ
ಸುರಕ್ಷತಾ ಸಪ್ತಾಹ ಆಯೋಜಿಸಲಾಗುತ್ತಿದೆ. ಇದರೊಡನೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಬೀದಿ ನಾಟಕ, ಕರಪತ್ರಗಳ ಹಂಚಿಕೆ, ಮಾಹಿತಿ ಕೈಪಿಡಿ, ವಾಹನಗಳಲ್ಲಿ ಧ್ವನಿವರ್ಧಕದ ಮೂಲಕ ತಿಳಿವಳಿಕೆ, ಕಾಲ್ನಡಿಗೆ ಜಾಥಾ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕದ ಗೌರವವನ್ನು ನಿಗಮವು ನೀಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಐದು ವರ್ಷ, ನಗರದಲ್ಲಿ ಮೂರು ವರ್ಷ ಅಪಘಾತ ರಹಿತ ಬಸ್‌ ಚಾಲನೆ ಮಾಡಿದ ಚಾಲಕರಿಗೆ 32 ಗ್ರಾಂ ಬೆಳ್ಳಿ ಪದಕ ಮತ್ತು 150 ರೂ. ಮಾಸಿಕ ಭತ್ಯೆ ನೀಡಲಾಗುತ್ತಿದೆ. ಚಾಲಕ ಬೆಳ್ಳಿ ಪದಕ ಪಡೆದ ಅನಂತರ ಸತತವಾಗಿ 5 ವರ್ಷ ಅರ್ಹತಾ ಪುರಸ್ಕಾರಕ್ಕೆ ಅರ್ಹರಾದ್ದಲ್ಲಿ ಚಿನ್ನದ ಪದಕ ನೀಡಲಾಗುತ್ತಿದೆ. 2016-17ನೇ ಸಾಲಿನಲ್ಲಿ ನಾಲ್ವರು ಚಾಲಕರಿಗೆ ಬೆಳ್ಳಿ ಪದಕ ನೀಡಲಾಗಿತ್ತು. ಈ ಬಾರಿ ಮೂವರಿಗೆ ನೀಡಲಾಗಿದೆ.

ಯಶಸ್ವಿಯಾದ
ಸಿಮ್ಯುಲೇಟರ್‌ ತರಬೇತಿ
ಅಪಘಾತ ರಹಿತ ಬಸ್‌ ಚಾಲನೆಯ ಉದ್ದೇಶದಿಂದ ಕೆಎಸ್ಸಾರ್ಟಿಸಿಯು ತನ್ನ ಚಾಲಕರಿಗೆ ಕೆಲವು ವರ್ಷಗಳಿಂದ ಸಿಮ್ಯುಲೇಟರ್‌ ತರಬೇತಿಯನ್ನು ನೀಡುತ್ತಿದೆ. ಇದು ರಕ್ಷಣಾತ್ಮಕ ಚಾಲನ ಕೌಶಲದ ತರಬೇತಿ. ಈ ತರಬೇತಿಯಿಂದ ಅಪಘಾತ ಪ್ರಮಾಣ ಕಡಿಮೆಯಾಗಿದ್ದು, ಯಶಸ್ವೀ ಉಪಕ್ರಮವನ್ನು ನಿಗಮವು ಮುಂದುವರಿಸಿದೆ.

ಅಪಘಾತ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಕೆಎಸ್ಸಾರ್ಟಿಸಿಯಿಂದ ಬಸ್‌ ಚಾಲಕರಿಗೆ ಅರಿವು ಕಾರ್ಯಾಗಾರವನ್ನು ಕೆಲವು ವರ್ಷಗಳಿಂದ ಹಮ್ಮಿಕೊಳ್ಳಲಾಗುತ್ತಿದೆ. ಅಪಘಾತ ರಹಿತ ಚಾಲನೆ ಮಾಡಿದ ಚಾಲಕರಿಗೆ ಗೌರವಿಸಲಾಗುತ್ತಿದೆ. ಈಗಾಗಲೇ ಅಪಘಾತ ಪ್ರಮಾಣ ಇಳಿಮುಖಗೊಂಡಿದ್ದು, ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಕಡಿಮೆ ಮಾಡುವತ್ತ ಗಮನಹರಿಸಲಾಗುವುದು.
– ಶಿವಯೋಗಿ ಸಿ. ಕಳಸದ್‌
ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ

ಅಪಘಾತ ಪ್ರಮಾಣ
ವರ್ಷ ಅಪಘಾತ
2013 -14 1,266
2014 -15 1,207
2015 -16 1,100
2016 -17 1,050
2017 -18 1,043
2018 -19 1,010

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.