ಉಪ್ಪಿನಂಗಡಿ : KSRTC ಬಸ್ಸಿಗೆ ಕಾರು ಡಿಕ್ಕಿ, ಕಾರು ಚಾಲಕ ಸಾವು
Team Udayavani, Mar 8, 2020, 11:17 PM IST
ಉಪ್ಪಿನಂಗಡಿ: ಕಾರೊಂದು ಕೆಎಸ್ಆರ್ ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯಲ್ಲಿ ರವಿವಾರ ರಾತ್ರಿ ನಡೆದಿದೆ.
ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಬಾಳಪ್ಪ ಗೌಡರ ಪುತ್ರ ದಯೇಶ್ (26) ಮೃತ ವ್ಯಕ್ತಿ.
ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಇವರು ಚಲಾಯಿಸಿಕೊಂಡು ಬರುತ್ತಿದ್ದ ಮಾರುತಿ ಶಿಫ್ಟ್ ಕಾರು ಇಲ್ಲಿನ ಸಿಟಿ ಲ್ಯಾಂಡ್ ಎದುರುಗಡೆ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದು ಕಡಬಕ್ಕೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದ್ದು , ಗಂಭೀರ ಗಾಯಗೊಂಡ ಕಾರು ಚಾಲಕ ದಯೇಶ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.
ದಯೇಶ್ ಪುತ್ತೂರಿನ ಗ್ಯಾಸ್ ಏಜೆನ್ಸಿಯೊಂದರಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಉತ್ತಮ ಕೆಲಸಗಾರ ಎನ್ನಲಾಗುತ್ತಿದೆ.
ಘಟನೆಯ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!