ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್ ; ಅ. 31ರಿಂದ ಸಂಚಾರ
Team Udayavani, Oct 29, 2022, 7:10 AM IST
ಮಂಗಳೂರು: ಮಂಗಳೂರು ಮತ್ತು ಮಣಿಪಾಲದಿಂದ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ಅ. 31ರಂದು ಆರಂಭಗೊಳ್ಳಲಿದ್ದು, ತಾತ್ಕಾಲಿಕ ವೇಳಾಪಟ್ಟಿ ತಯಾರಿಸಲಾಗಿದೆ.
ನಿಗದಿಯಂತೆ ಅ. 27ರಂದು ಸಂಚಾರ ಆರಂಭಗೊಳ್ಳಬೇಕಿತ್ತು. ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ.
ಮಂಗಳೂರು ರೈಲು ನಿಲ್ದಾಣ ದಿಂದ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 6.30, 8.45, 11.10, ಮಧ್ಯಾಹ್ನ 3, ಸಂಜೆ 5.15, 7.30ಕ್ಕೆ ಹೊರಡಲಿದೆ. ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಬೆಳಗ್ಗೆ 7.40, 10, ಮಧ್ಯಾಹ್ನ 12.20, ಸಂಜೆ 4.05, 6.25, ರಾತ್ರಿ 08.45ಕ್ಕೆ ಹೊರಡಲಿದೆ. ಜ್ಯೋತಿ, ಲಾಲ್ಬಾಗ್, ಕುಂಟಿಕಾನ, ಕಾವೂರು ಮೂಲಕ ವಿಮಾನ ನಿಲ್ದಾಣಕ್ಕೆ ಸಂಚರಿಸಲಿದೆ. ಒಬ್ಬರಿಗೆ 100 ರೂ. ದರ ನಿಗದಿ ಪಡಿಸಲಾಗಿದೆ.
ಮಣಿಪಾಲದಿಂದ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 7.15, 8.45, ಸಂಜೆ 5.15ಕ್ಕೆ ಹೊರಡಲಿದೆ. ವಿಮಾನ ನಿಲ್ದಾಣದಿಂದ ಮಣಿಪಾಲಕ್ಕೆ ಬೆಳಗ್ಗೆ 10.45, ಮಧ್ಯಾಹ್ನ 12.30 ಮತ್ತು ರಾತ್ರಿ 9.15ಕ್ಕೆ ಹೊರಡಲಿದೆ. 300 ರೂ. ನಿಗದಿ ಮಾಡಲಾಗಿದೆ.
ಮಂಗಳೂರಿನಿಂದ
ಮಣಿಪಾಲಕ್ಕೆ ಬಸ್
ಮಂಗಳೂರಿನಿಂದ ಮಣಿಪಾಲಕ್ಕೆ ಈ ಹಿಂದೆ ವೋಲ್ವೊ ಬಸ್ ಸೇವೆ ಇತ್ತು. ಆದರೆ ಕಡಿಮೆ ಆದಾಯದ ಹಿನ್ನೆಲೆಯಲ್ಲಿ ಸಂಚಾರ ಮೊಟಕುಗೊಂಡಿತ್ತು. ಈಗ ಮತ್ತೆ ಈ ದಾರಿಯಲ್ಲಿ 2 ಟ್ರಿಪ್ ಕಾರ್ಯಾಚರಿಸಲು ನಿರ್ಧರಿಸ ಲಾಗಿದೆ. ಕೆಎಸ್ಸಾರ್ಟಿಸಿ ನಿಲ್ದಾಣದಿಂದ ಮಣಿಪಾಲಕ್ಕೆ ಬೆಳಗ್ಗೆ 7ಕ್ಕೆ ಒಂದು ಟ್ರಿಪ್ ಮತ್ತು ಮಧ್ಯಾಹ್ನ 1.15ಕ್ಕೆ ಮಣಿಪಾಲ ದಿಂದ ಮಂಗಳೂರಿಗೆ ಒಂದು ಟ್ರಿಪ್ ನಡೆಸಲಿದೆ ಟಿಕೆಟ್ ದರ 150 ರೂ. ನಿಗದಿಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ