ಸೇವೆ ಸ್ಥಗಿತಗೊಳಿಸಿದ ಕೆಎಸ್ಆರ್ ಸಿಟಿ ಮಹಿಳಾ ಬಸ್‌

ವಿಧಾನಸಭಾ ಚುನಾವಣೆ ವೇಳೆ ಸಂಚಾರ ನಿಲ್ಲಿಸಿದ್ದ ಬಸ್‌

Team Udayavani, Oct 4, 2019, 4:35 AM IST

c-36

ಮಂಗಳೂರು-ಕಾಸರಗೋಡು ನಡುವೆ ಈ ಹಿಂದೆ ಸಂಚರಿಸುತ್ತಿದ್ದ ಬಸ್‌.

ಮಹಾನಗರ: ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ಕೆಲವು ವರ್ಷಗಳ ಹಿಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗ ದಿಂದ ಆರಂಭಿಸಿದ್ದ “ಮಹಿಳಾ ವಿಶೇಷ ಬಸ್‌’ ಸೇವೆ ಈಗ ರದ್ದುಗೊಂಡಿದೆ.

ಆರು ವರ್ಷಗಳ ಹಿಂದೆ ಎಂ. ಮಹೇಶ್‌ ಅವರು ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗಾಧಿಕಾರಿಯಾಗಿದ್ದ ವೇಳೆ ಮಂಗಳೂರು- ಕಾಸರಗೋಡು ಮಾರ್ಗದಲ್ಲಿ ಮಹಿಳಾ ವಿಶೇಷ ಬಸ್‌ ಕಾರ್ಯಾಚರಣೆಗೆ ಚಾಲನೆ ನೀಡಿದ್ದರು. ಇದಾದ ಕೆಲವು ವರ್ಷಗಳ ಕಾಲ ಬಸ್‌ ಸಂಚಾರ ಸಾಗಿತ್ತು. ಆದರೆ ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣಾ ಕೆಲಸಕ್ಕೆ ಬಸ್‌ ಹೊಂದಿಸುವ ನಿಟ್ಟಿನಲ್ಲಿ ಮಂಗ ಳೂರು- ಕಾಸರಗೋಡು ಮಾರ್ಗದಲ್ಲಿ ಸಂಚರಿಸುವ ಮಹಿಳಾ ಬಸ್‌ಸೇವೆಯನ್ನು ನಿಲ್ಲಿಸಲಾಗಿತ್ತು. ಬಳಿಕ, ಈವರೆಗೆ ಪುನರಾರಂಭಗೊಂಡಿಲ್ಲ.

54 ಆಸನದ ಬಸ್‌
ಕೆಎಸ್ಸಾರ್ಟಿಸಿಯ ಈ ಹಿಂದಿನ ವೇಳಾಪಟ್ಟಿಯಂತೆ ಈ ಬಸ್‌ ಎರಡು ಟ್ರಿಪ್‌ ಹೊಂದಿದ್ದು, ಬೆಳಗ್ಗೆ 8 ಗಂಟೆಗೆ ಕಾಸರಗೋಡಿನಿಂದ ಹೊರಟು 9.40ಕ್ಕೆ ಮಂಗಳೂರು ತಲುಪುತ್ತಿತ್ತು. ಇನ್ನು ಸಂಜೆ 6.05ಕ್ಕೆ ಮಂಗಳೂರಿನಿಂದ ಹೊರಟು ರಾತ್ರಿ 7.30ಕ್ಕೆ ಕಾಸರಗೋಡು ತಲು ಪುತ್ತಿತ್ತು. ಮಹಿಳಾ ವಿಶೇಷ ಬಸ್‌ ಎಂಬ ಫಲಕವನ್ನು ಜೋಡಿಸಿದ್ದು, ಒಟ್ಟು 54 ಆಸನ ಸಾಮರ್ಥ್ಯವನ್ನು ಈ ಬಸ್‌ ಹೊಂದಿತ್ತು.

ಬೆಂಗಳೂರಿನಲ್ಲಿ ಬಿಎಂಟಿಸಿ ಕೂಡ ಈ ಹಿಂದೆ ಮಹಿಳಾ ಬಸ್‌ ಆದಂತಹ ಪಿಂಕ್‌ ಬಸ್‌ ಸೇವೆಯನ್ನು ಆರಂಭಗೊಳಿಸಿತ್ತು. ಆದರೆ ಕೆಲವು ಸಮಯದ ಬಳಿಕ ಈ ಸೇವೆಯೂ ರದ್ದುಗೊಂಡಿತು.

ಮಹಿಳೆಯರಿಗೆ ಅನುಕೂಲಿಯಾಗಿದ್ದ ಬಸ್‌
ಕಾಸರಗೋಡು ಕಡೆಯಿಂದ ಮಂಗಳೂರಿನ ಶಾಲಾ-ಕಾಲೇಜುಗಳಿಗೆ ಕಲಿಕೆಗೆಂದು ಹೆಚ್ಚಿನ ಮಂದಿ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಅದರಲ್ಲಿಯೂ ಬೆಳಗ್ಗೆ, ಸಂಜೆಯ ವೇಳೆ ಆ ಭಾಗದ ಬಸ್‌ಗಳಲ್ಲಿ ಜನಜಂಗುಳಿ ಇರುವುದರಿಂದ ವಿದ್ಯಾರ್ಥಿನಿಯರಿಗೆ ಮತ್ತು ಮಹಿಳಾ ಪ್ರಯಾಣಿಕರಿಗೆ ಸಂಚರಿಸಲು ಕಿರಿಕಿರಿ ಉಂಟಾಗುತ್ತದೆ. ಇದೇ ಕಾರಣಕ್ಕೆ ಮಹಿಳೆಯರ ಅನು ಕೂಲಕ್ಕಾಗಿ ಮತ್ತೂಮ್ಮೆ ಮಂಗಳೂರು- ಕಾಸರಗೋಡು ಮಹಿಳಾ ಬಸ್‌ ಸೇವೆಯನ್ನು ಪುನರಾರಂಭಿಸಬೇಕು ಎನ್ನುವುದು ಸಾರ್ವಜನಿಕರ ಬೇಡಿಕೆ.

15 ವರ್ಷಗಳ ಹಿಂದಿತ್ತು ಮಹಿಳಾ ಸಿಟಿ ಬಸ್‌
ಮಂಗಳೂರಿನಲ್ಲಿ ಸುಮಾರು 15 ವರ್ಷಗಳ ಹಿಂದೆ ಮಹಿಳಾ ವಿಶೇಷ ಸಿಟಿ ಬಸ್‌ ಸೇವೆ ಇತ್ತು. ಆಗಿನ ರಾಜ್ಯಪಾಲರಾಗಿದ್ದ ರಮಾದೇವಿ ಅವರು ನೂತನ ಬಸ್ಸಿಗೆ ಚಾಲನೆ ನೀಡಿದ್ದರು. ಅನಂತರ 27 ನಂಬರ್‌ನ ಸ್ಟೇಟ್‌ಬ್ಯಾಂಕ್‌-ಮಂಗಳಾದೇವಿ, 44 ನಂಬರ್‌ನ ಉಳ್ಳಾಲ-ಸ್ಟೇಟ್‌ಬ್ಯಾಂಕ್‌ ಮತ್ತು 21 ನಂಬರ್‌ ನೀರುಮಾರ್ಗಕ್ಕೆ ಮಹಿಳಾ ಬಸ್‌ ಸಂಚಾರ ಇತ್ತು. ದಿನಕಳೆದಂತೆ ಬಸ್‌ಗೆ ಬೇಡಿಕೆ ಕಡಿಮೆಯಾದ ಹಿನ್ನೆಲೆಯಲ್ಲಿ ಒಂದೇ ಬಸ್‌ನಲ್ಲಿ ಎರಡು ಭಾಗ ಮಾಡಿ ಮಹಿಳೆಯರು ಮತ್ತು ಪುರುಷರ ವಿಭಾಗ ಮಾಡಲಾಗಿತ್ತು. ಆದರೂ, ಉತ್ತಮ ಜನಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಚರ್ಚೆ ನಡೆಸಿ ಕ್ರಮ
ಮಂಗಳೂರು-ಕಾಸರಗೋಡು ಸಂಚರಿಸುವ ಮಹಿಳಾ ಕೆಎಸ್ಸಾರ್ಟಿಸಿ ಬಸ್‌ ಈ ಹಿಂದೆ ವಿಧಾನಸಭಾ ಚುನಾವಣಾ ಕಾರ್ಯ ನಿಮಿತ್ತ ರದ್ದುಗೊಂಡಿತ್ತು. ಈಗ ಬಸ್‌ ಪುನರಾರಂಭಿಸುವ ನಿಟ್ಟಿನಲ್ಲಿ ವಿಭಾಗಾಧಿಕಾರಿಗಳ ಬಳಿ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ.
 - ಜಯಶಾಂತ್‌, ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ನಿಯಂತ್ರಣಾಧಿಕಾರಿ

– ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.