ಕೆಎಸ್ಸಾರ್ಟಿಸಿ ಹಳೆ ಬಸ್‌ ಇನ್ನು ಸಂಚಾರಿ ಗ್ರಂಥಾಲಯ

ಗ್ರಾಮೀಣ ಓದುಗರಿಗೆ ರಸ್ತೆ ಸಾರಿಗೆ ನಿಗಮದ ವಿನೂತನ ಪ್ರಯೋಗ

Team Udayavani, Nov 26, 2020, 4:35 AM IST

ಕೆಎಸ್ಸಾರ್ಟಿಸಿ ಹಳೆ ಬಸ್‌ ಇನ್ನು ಸಂಚಾರಿ ಗ್ರಂಥಾಲಯ

ಸಾಂದರ್ಭಿಕ ಚಿತ್ರ

ಮಹಾನಗರ: ಕೆಎಸ್ಸಾರ್ಟಿಸಿಯಲ್ಲಿ ಸುಮಾರು ಹತ್ತು ಲಕ್ಷ ಕಿಲೋ ಮೀ. ಸಂಚರಿಸಿದ ಹಳೆಯ ಬಸ್‌ಗಳನ್ನು ಉಪಯೋಗಿಸಿಕೊಂಡು ಸಂಚಾರಿ ಗ್ರಂಥಾಲಯ ನಿರ್ಮಾಣ ಮಾಡಲು ನಿಗಮ ಚಿಂತಿಸುತ್ತಿದೆ.

ಹಳೆಯ ಬಸ್‌ಗಳನ್ನು ಸದುಪಯೋಗಿ ಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗುತ್ತಿದ್ದು, ಬಸ್‌ ಲೈಬ್ರೆರಿ, ಮೊಬೈಲ್‌ ಕ್ಲಿನಿಕ್‌ ತೆರೆಯಲು ಸಹಾಯ ನೀಡುವಂತೆ ನಿಗಮದಿಂದ ಈಗಾಗಲೇ ಕೆಲವೊಂದು ಸ್ವಯಂಸೇವಾ ಸಂಘ ಸಂಸ್ಥೆಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಧನಾತ್ಮಕ ಪ್ರತಿಕ್ರಿಯೆ ಬರುವ ವಿಶ್ವಾಸ ನಿಗಮಕ್ಕಿದ್ದು, ಈ ಯೋಜನೆಯನ್ನು ಪ್ರಾಯೋಗಿಕವಾಗಿ ಮಂಗಳೂರು ಸಹಿತ ಕೆಲವೊಂದು ವಿಭಾಗಗಳಲ್ಲಿ ಪರಿಚಯಿಸಲು ನಿರ್ಧರಿಸಲಾಗಿದೆ.

ಗ್ರಾಮೀಣ ಓದುಗರಿಗೆ ಅನುಕೂಲದ ಉದ್ದೇಶ
ಹೆಚ್ಚಾಗಿ ಗ್ರಾಮೀಣ ಭಾಗದಲ್ಲಿ ಗ್ರಂಥಾಲಯ ವ್ಯವಸ್ಥೆ ಇರುವುದು ಕಡಿಮೆ. ಹೀಗಿರುವಾಗ ಒಂದು ಕಡೆಯಿಂದ ಮತ್ತೂಂದೆಡೆ ಸಂಚರಿಸುವ ಬಸ್‌ಗಳು ಗ್ರಂಥಾಲಯವಾಗಿ ಪರಿವರ್ತನೆಯಾದರೆ ಗ್ರಾಮೀಣ ಭಾಗದ ಓದುಗರಿಗೆ ಇದರಿಂದ ಅನುಕೂಲವಾಗಲಿದೆ. ಈ ಯೋಜನೆ ಯನ್ನು ಯಾವ ರೀತಿಯಲ್ಲಿ ಅನುಷ್ಠಾನಕ್ಕೆ ತರಬಹುದು, ಸಾಧ್ಯಾ-ಸಾಧ್ಯತೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಯೋಜನೆ ರೂಪಿಸಲಾಗುತ್ತದೆ.

ಕೇರಳ ಮಾದರಿ ವ್ಯವಸ್ಥೆ
ಕೇರಳ ಕೆಎಸ್ಸಾರ್ಟಿಸಿ ಮಾದರಿ ವ್ಯವಸ್ಥೆಯನ್ನೂ ಜಾರಿಗೆ ತರುವ ಬಗ್ಗೆ ಯೋಚಿಸಲಾಗುತ್ತಿದೆ. ಕೇರಳ ಕೆಎಸ್‌ಆರ್‌ಟಿಸಿ ನಷ್ಟವನ್ನು ಸರಿದೂಗಿಸುವ ದೃಷ್ಟಿಯಿಂದ ಹೊಸ ಹೆಜ್ಜೆಗಳನ್ನು ಇಡುತ್ತಿದೆ. ಅದರಲ್ಲೂ ಮುಖ್ಯವಾಗಿ ಕೇರಳದಲ್ಲಿ ಕೆಲವೊಂದು ಬಸ್‌ಗಳನ್ನು ಮೊಬೈಲ್‌ ಕ್ಯಾಂಟೀನ್‌ ಆಗಿ ಪರಿವರ್ತನೆ ಮಾಡಲಾಗಿದೆ. ಇದರಿಂದ ಉದ್ಯೋಗದ ಜತೆ, ರಿಯಾಯಿತಿ ದರದಲ್ಲಿ ತಿಂಡಿಗಳು ಸಿಗಲಿವೆ. ಇತ್ತ ರಾಜ್ಯದಲ್ಲಿಯೂ ಈ ವ್ಯವಸ್ಥೆಯನ್ನು ಬೇಡಿಕೆಗನುಸಾರವಾಗಿ ಅನುಷ್ಠಾನಕ್ಕೆ ತರಲು ನಿರ್ಧರಿಸಲಾಗಿದೆ.

ಡಬಲ್‌ ಡೆಕ್ಕರ್‌ ಬಸ್‌ಗೆ ಮರುಜೀವ
ಅನೇಕ ವರ್ಷಗಳ ಹಿಂದೆ ರಾಜ್ಯದಲ್ಲಿ ಓಡಾಡುತ್ತಿದ್ದ ಡಬಲ್‌ ಡೆಕ್ಕರ್‌ ಬಸ್‌ಗಳಿಗೆ ಮತ್ತಷ್ಟು ಜನಪ್ರಿಯತೆ ನೀಡಲು ನಿಗಮ ಮುಂದಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ಮತ್ತು ಕೆಎಸ್ಸಾರ್ಟಿಸಿ ಜತೆಗೂಡಿ ಡಬಲ್‌ ಡೆಕ್ಕರ್‌ ಬಸ್‌ ಸೇವೆಯನ್ನು ಮತ್ತಷ್ಟು ಪ್ರವಾಸಿ ತಾಣಗಳಿಗೆ ಪರಿಚಯಿಸಲು ಮುಂದಾಗಿದೆ. ಈಗಾಗಲೇ ಮೈಸೂರಿನಲ್ಲಿ ಪ್ರಾಯೋಗಿಕವಾಗಿ ಈ ಬಸ್‌ ಸಂಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹಂಪಿ, ಪಟ್ಟದಕಲ್ಲು, ಬಾದಾಮಿ ಸಹಿತ ಇನ್ನಿತರ ಭಾಗಗಳಲ್ಲಿ ಈ ಬಸ್‌ ಪರಿಚಯಕ್ಕೆ ಚಿಂತನೆ ನಡೆಯುತ್ತಿದೆ ಎನ್ನುತ್ತಾರೆ ಕೆಎಸ್ಸಾರ್ಟಿಸಿಯ ಅಧಿಕಾರಿಗಳು.

ಜನಪರ ಕೆಲಸಗಳಿಗೆ ಬಳಕೆ
ಸುಮಾರು 10 ಲಕ್ಷ ಕಿ.ಮೀ. ಕ್ರಮಿಸಿದ ಗುಣಮಟ್ಟ ಉತ್ತಮವಾಗಿರುವ ಕೆಎಸ್ಸಾರ್ಟಿಸಿ ಬಸ್‌ಗಳನ್ನು ನಿಷ್ಕ್ರಿಯಗೊಳಿಸುವ ಬದಲು ಅನೇಕ ಜನಪರ ಕೆಲಸಗಳಿಗೆ ಉಪಯೋಗ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಂಚಾರಿ ಗ್ರಂಥಾಲಯವಾಗಿ ಪರಿವರ್ತನೆ ಮಾಡುವ ಉದ್ದೇಶ ನಿಗಮಕ್ಕಿದೆ. ಈ ಕುರಿತು ಕೆಲವೊಂದು ಸ್ವಯಂಸೇವಾ ಸಂಘಟನೆಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
-ಬಸವರಾಜು, ಕೆಎಸ್ಸಾರ್ಟಿಸಿ ಚೀಫ್‌ ಮೆಕ್ಯಾನಿಕಲ್‌ ಎಂಜಿನಿಯರ್‌, ಕೇಂದ್ರ ಕಚೇರಿ ಬೆಂಗಳೂರು

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.