ಹೊಸ ಕಟ್ಟಡ ಕಾಮಗಾರಿಗೆ ವೇಗ: ಎಂಟು ತಿಂಗಳೊಳಗೆ ಪೂರ್ಣ

ಕುದ್ಮಲ್ ರಂಗರಾವ್‌ ವಸತಿ ನಿಲಯ

Team Udayavani, Oct 7, 2021, 5:10 AM IST

ಹೊಸ ಕಟ್ಟಡ ಕಾಮಗಾರಿಗೆ ವೇಗ: ಎಂಟು ತಿಂಗಳೊಳಗೆ ಪೂರ್ಣ

ಮಹಾನಗರ: ಕೊಡಿಯಾಲಬೈಲ್‌ನ ಕುದ್ಮಲ್ ರಂಗರಾವ್‌ ಹೆಣ್ಮಕ್ಕಳ ವಸತಿ ನಿಲಯ ಹೊಸ ಕಟ್ಟಡ ಕಾಮಗಾರಿಗೆ ವೇಗ ನೀಡಲಾಗಿದ್ದು, ಇನ್ನೇನೂ ಎಂಟು ತಿಂಗಳೊಳಗೆ ಪೂರ್ಣಗೊಳಿಸುವ ಇರಾದೆ ಯನ್ನು ಸಮಾಜ ಕಲ್ಯಾಣ ಇಲಾಖೆ ಹೊಂದಿದೆ.

ನೂತನ ಕಟ್ಟಡ ನಿರ್ಮಾಣಕ್ಕೆ ಎಪ್ರಿಲ್‌ ತಿಂಗಳಿನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, 8 ಕೋ.ರೂ. ವೆಚ್ಚದಲ್ಲಿ ನೂತನವಾಗಿ ವಸತಿ ನಿಲಯ ನಿರ್ಮಾಣವಾಗಲಿದೆ. ಶಂಕುಸ್ಥಾಪನೆ ನೆರವೇರಿಸಿದಾಗಿನಿಂದಲೇ ಕಾಮಗಾರಿಗೆ ವೇಗ ನೀಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ದೂರದ ಊರಿನ ವಿದ್ಯಾರ್ಥಿನಿಯರಿಗೆ ವಸತಿ, ಊಟದ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸುವ ನಿಟ್ಟಿನಲ್ಲಿ ಮೂವತ್ತು ವರ್ಷಗಳ ಹಿಂದೆ ಸ್ಥಾಪನೆಗೊಂಡಿದ್ದ ವಸತಿ ನಿಲಯ ಶಿಥಿಲಾವಸ್ಥೆಯಿಂದ ಕೂಡಿತ್ತು. ಇದೀಗ ಹೊಸ ವಸತಿ ನಿಲಯ ನಿರ್ಮಾಣಕ್ಕೆ ಹಣ ಮಂಜೂರಾಗಿ ಹಳೆ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಕಟ್ಟಡ ನಿರ್ಮಾಣವಾಗುತ್ತಿದೆ.

ಅಧಿಕಾರಿಗಳು ಹೇಳುವ ಪ್ರಕಾರ ಮುಂದಿನ ವರ್ಷ ಜೂನ್‌ ತಿಂಗಳಿನಲ್ಲಿ ವಸತಿ ನಿಲಯದ ಕಾಮಗಾರಿ ಪೂರ್ಣಗೊಳ್ಳಲಿದೆ. ಇದರಿಂದಾಗಿ ಜಿಲ್ಲೆಯ ಸುಮಾರು 300 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಈ ಹಿಂದೆ ಇದೇ ಸ್ಥಳದಲ್ಲಿದ್ದ ವಸತಿ ನಿಲಯ ಕಟ್ಟಡ ವಾಸಯೋಗ್ಯವಲ್ಲ ಎಂಬ ವರದಿಯನ್ನು ತಜ್ಞರು ನೀಡಿದ ಬಳಿಕ ಇಲಾಖೆ ಇಲ್ಲಿಂದ ವಿದ್ಯಾರ್ಥಿನಿಯರನ್ನು ಖಾಸಗಿ ಕಟ್ಟಡಕ್ಕೆ ಸ್ಥಳಾಂತರಗೊಳಿಸಿತ್ತು. ಕೂಡಲೇ ವಸತಿ ನಿಲಯದ ದುರಸ್ತಿಗೆ ಸರಕಾರಕ್ಕೆ ಮನವಿ ಮಾಡಿತ್ತು. ಆದರೆ ವರ್ಷಗಳೇ ಸಂದರೂ ಸರಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಖಾಸಗಿ ಕಟ್ಟಡಕ್ಕೆ ದುಬಾರಿ ಬಾಡಿಗೆ ನೀಡುವಂತಾಗಿತ್ತು. ಬಳಿಕ ಹಣ ಮಂಜೂರಾಗಿ ನೂತನ ಕಟ್ಟಡ ಕೆಲಸ ಆರಂಭವಾಗಿದೆ.

ಇದನ್ನೂ ಓದಿ:ಹಸಿರುಕ್ರಾಂತಿ  ಸಂಪಾದಕ ಕಲ್ಯಾಣರಾವ್  ನಿಧನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಸಂತಾಪ

800ರಷ್ಟು ವಿದ್ಯಾರ್ಥಿಗಳಿಗೆ ವಾಸ್ತವ್ಯ ಹೂಡಲು ನೂತನ ಕಟ್ಟಡದಲ್ಲಿ ಸುಮಾರು 800ರಷ್ಟು ವಿದ್ಯಾರ್ಥಿಗಳಿಗೆ ವಾಸ್ತವ್ಯ ಹೂಡಲು ಅವಕಾಶವಿದೆ. ಆದರೆ ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬರುತ್ತವೆ. ಬಳಿಕ ವಿದ್ಯಾರ್ಥಿಗಳ ಆಯ್ಕೆ ಮಾಡಿ ವಸತಿ ವ್ಯವಸ್ಥೆ ಮಾಡಲಾಗುತ್ತದೆ.

ಈಗಾಗಲೇ ನಗರದಲ್ಲಿ ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯ ಹುಡು ಗರಿಗೆ, ಮೆಟ್ರಿಕ್‌ ಪೂರ್ವ ವಸತಿ ನಿಲಯ ಹುಡುಗಿಯರಿಗೆ, ಮೆಟ್ರಿಕ್‌ ಅನಂತರದ ವಿದ್ಯಾರ್ಥಿ ನಿಲಯ ಹುಡುಗರಿಗೆ, ಮೆಟ್ರಿಕ್‌ ಪೂರ್ವ ವಸತಿ ವ್ಯವಸ್ಥೆ ಹುಡುಗರಿಗೆ ಇದೆ. ನಗರ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿಲ್ಲ ಎಂಬ ಮಾತು ಕೇಳಿಬರುತ್ತಿದೆ.

ಕಾಮಗಾರಿಗೆ ವೇಗ
ಕೊಡಿಯಾಲಬೈಲ್‌ನಲ್ಲಿ ಈ ಹಿಂದೆ ಇದ್ದಂತಹ ವಸತಿ ನಿಲಯ ಶಿಥಿಲಾವಸ್ಥೆಯಿಂದ ಕೂಡಿತ್ತು. ಇದೀಗ ಕೆಡವಲಾಗುತ್ತಿದ್ದು, ಹಳೆ ಕಟ್ಟಡ ಕೆಡಹಿ ಅದೇ ಜಾಗದಲ್ಲಿ ನೂತನ ಹಾಸ್ಟೆಲ್‌ ನಿರ್ಮಾಣ ಕಾರ್ಯ ಸಾಗುತ್ತಿದೆ. ಕಟ್ಟಡ ಕಾಮಗಾರಿಗೆ ವೇಗ ನೀಡಲಾಗಿದ್ದು, ಕೆಲವೇ ತಿಂಗಳಿನಲ್ಲಿ ವಿದ್ಯಾರ್ಥಿಗಳು ಈ ಕಟ್ಟಡದ ಉಪಯೋಗವನ್ನು ಪಡೆಯಬಹುದು.
-ಡಾ| ಯೋಗೀಶ್‌, ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ದ.ಕ.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.