ಖನಿಜ ಅನ್ವೇಷಣೆ ಮಂಗಳೂರಿನ KIOCL‌ ಹೆಗಲಿಗೆ


Team Udayavani, Jul 20, 2020, 7:06 AM IST

ಖನಿಜ ಅನ್ವೇಷಣೆ ಮಂಗಳೂರಿನ KIOCL‌ ಹೆಗಲಿಗೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು: ಸರಕಾರಿ ಸ್ವಾಮ್ಯದ ಕೇಂದ್ರ ಸರಕಾರದ ಮಂಗಳೂರಿನ ಬೃಹತ್‌ ಕೈಗಾರಿಕೆ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಗೆ (ಕೆಐಒಸಿಎಲ್‌) ಖನಿಜ ನಿಕ್ಷೇಪಗಳನ್ನು ಅನ್ವೇಷಿಸಲು ಅನುಮತಿ ಲಭಿಸಿದೆ.

ಅದರಂತೆ ದೇಶದ ವಿವಿಧ ರಾಜ್ಯ ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಇರಬಹುದಾದ ಖನಿಜ ನಿಕ್ಷೇಪಗಳ ಬಗ್ಗೆ ಅನ್ವೇಷಣೆ ಹಾಗೂ ಅದರ ಕುರಿತಾದ ಅಧ್ಯಯನ ನಡೆಸಿ ಕೇಂದ್ರ ಉಕ್ಕು ಸಚಿವಾಲಯಕ್ಕೆ ವರದಿಯನ್ನು ಕೆಐಒಸಿಎಲ್‌ ನೀಡಲಿದೆ. ಕಾರ್ಯಚಟುವಟಿಕೆ ಆರಂಭಗೊಂಡಿದ್ದು, ಅನ್ವೇಷಣೆ ನಡೆಯುತ್ತಿದೆ. 105 ಕೋ.ರೂ.ಗಳನ್ನು ಕೇಂದ್ರ/ರಾಜ್ಯ ಸರಕಾರವು ಇದಕ್ಕಾಗಿ ಮೀಸಲಿಟ್ಟಿದ್ದು, ಮೈಸೂರಿನಲ್ಲಿ ಸದ್ಯ ಖನಿಜ ಅನ್ವೇಷಣೆ ನಡೆಯುತ್ತಿದೆ.

ಖನಿಜ ಅನ್ವೇಷಣೆ ಮಾಡಿದ ಅನಂತರ ಅದನ್ನು ಮಂಗಳೂರಿನ ಕೆಐಒಸಿಎಲ್‌ನ ಕೇಂದ್ರ ಕಚೇರಿಯಲ್ಲಿರುವ ಟೆಸ್ಟಿಂಗ್‌ ಲ್ಯಾಬ್‌ನಲ್ಲಿ ಪರಿಶೀಲಿಸಲಾಗುತ್ತದೆ. ಜತೆಗೆ ಕಂಪೆನಿಯ ತಜ್ಞರ ತಂಡ ಪರಿಶೀಲಿಸಿ ವರದಿ ಸಿದ್ಧಪಡಿಸಲಿದೆ.
ಅಂತಾರಾಷ್ಟ್ರೀಯ ಖನಿಜ ಶಾಸ್ತ್ರೀಯ ಒಕ್ಕೂಟ ದೃಢಪಡಿಸಿರುವಂತೆ ಈವರೆಗೆ ಒಟ್ಟು 5,413 ವಿಧದ ಖನಿಜಗಳನ್ನು ಗುರುತಿಸಲಾಗಿದೆ. ಇವುಗಳ ನಿರಂತರ ಅನ್ವೇಷಣೆ ದೇಶದ ಬೇರೆ ಬೇರೆ ಕಡೆಗಳಲ್ಲಿ ನಡೆಯುತ್ತಿದೆ.

ಬಳ್ಳಾರಿಯಲ್ಲಿ ಗಣಿ
ಸುಪ್ರೀಂ ಕೋರ್ಟ್‌ನ ಆದೇಶದಂತೆ 2006ರ ಜ. 1ರಿಂದ ಕುದುರೆಮುಖದಲ್ಲಿ ಗಣಿಗಾರಿಕೆ ನಿಲ್ಲಿಸಿದ ಬಳಿಕ ರಾಜ್ಯದಲ್ಲಿ ಸಾಕಷ್ಟು ನಿಕ್ಷೇಪಗಳಿದ್ದರೂ ಕುದುರೆಮುಖ ಕಬ್ಬಿಣ ಅದಿರು ಸ್ಥಾವರಕ್ಕೆ ಪರ್ಯಾಯ ನಿಕ್ಷೇಪದ ವ್ಯವಸ್ಥೆ ಆಗಿರಲಿಲ್ಲ. 1999ರಲ್ಲಿ ಕುದುರೆಮುಖದಲ್ಲಿ ಗುತ್ತಿಗೆ ಪ್ರಥಮ ಅವಧಿ ಮುಗಿದ ಕೂಡಲೇ ಪರ್ಯಾಯ ಅದಿರು ನಿಕ್ಷೇಪಕ್ಕೆ ಕಂಪೆನಿ ರಾಜ್ಯ ಸರಕಾರಕ್ಕೆ ಬೇಡಿಕೆ ಸಲ್ಲಿಸಿತ್ತು.

2006ರಲ್ಲಿ ಗಣಿಗಾರಿಕೆ ಸಂಪೂರ್ಣ ಸ್ಥಗಿತಗೊಂಡ ಅನಂತರ ಪರ್ಯಾಯ ನಿಕ್ಷೇಪ ಪ್ರದೇಶವನ್ನು ಒದಗಿಸಿ ಕೊಡುವಂತೆ ನಿರಂತರವಾಗಿ ಸರಕಾರಕ್ಕೆ ಕೋರಿಕೆ ಸಲ್ಲಿಸುತ್ತಲೇ ಬಂದಿತ್ತು. ಇದೀಗ ಅಂತಿಮವಾಗಿ ಬಳ್ಳಾರಿಯ ಗಣಿಯನ್ನು ಕೆಐಒಸಿಎಲ್‌ಗೆ ನೀಡಲಾಗಿದೆ.

ಚೀನ ರಫ್ತು ನಿರಾತಂಕ
ಕೆಐಒಸಿಎಲ್‌ನಲ್ಲಿ 2019-20ನೇ ಸಾಲಿನ 4ನೇ ತ್ತೈಮಾಸಿಕದಲ್ಲಿ 2.375 ಮಿಲಿಯ ಟನ್‌ ಪೆಲ್ಲೆಟ್‌ ಉತ್ಪಾದನೆ ಹಾಗೂ 2.356 ಮಿಲಿಯ ಟನ್‌ ರವಾನೆ ಆಗಿದೆ. ಇದೇ ಅವಧಿಯಲ್ಲಿ ಹಿಂದಿನ ವರ್ಷ 2.238 ಮಿಲಿಯ ಟನ್‌ ಉತ್ಪಾದನೆ ಹಾಗೂ 2.206 ಮಿಲಿಯ ಟನ್‌ ರವಾನೆ ಆಗಿತ್ತು. ಇಲ್ಲಿಂದ ರಫ್ತು ಮಾರುಕಟ್ಟೆ ಶೇ. 31ರಷ್ಟು ಏರಿಕೆ ಕಂಡಿದೆ. ಕಬ್ಬಿಣದ ಉಂಡೆಗಳನ್ನು ಬ್ರೆಜಿಲ್‌, ಮಧ್ಯಪ್ರಾಚ್ಯ, ಚೀನ, ಯುರೋಪ್‌ ಮುಂತಾದ ದೇಶಗಳಿಗೆ ಇಲ್ಲಿಂದ ರಫ್ತು ಮಾಡಲಾಗುತ್ತದೆ.

ಕರ್ನಾಟಕದಲ್ಲಿ ಖನಿಜ ಸಂಪನ್ಮೂಲ
ಕರ್ನಾಟಕ ರಾಜ್ಯವು ಹೇರಳವಾದ ಖನಿಜ ಸಂಪನ್ಮೂಲ ಹೊಂದಿದೆ. ಬಳ್ಳಾರಿ, ಚಿತ್ರದುರ್ಗ, ತುಮಕೂರು, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಬ್ಬಿಣ, ಮ್ಯಾಂಗನೀಸ್‌ ಅದಿರುಗಳ ನಿಕ್ಷೇಪಗಳಿವೆ. ಇವುಗಳಲ್ಲದೆ ಹಾಸನ ಹಾಗೂ ಮೈಸೂರಿನಲ್ಲಿ ಕ್ರೋಮಿಯಂ, ಬೆಳಗಾವಿಯಲ್ಲಿ ಬಾಕ್ಸೈಟ್‌, ಚಿತ್ರದುರ್ಗ, ರಾಯಚೂರಿನಲ್ಲಿ ತಾಮ್ರದ ಅದಿರು ದೊರೆಯುತ್ತದೆ.

ಕೆಐಒಸಿಎಲ್‌ ಕಂಪೆನಿಯು ಖನಿಜ ಪರಿಶೋಧನೆ ನಡೆಸಲು ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಅನುಮೋದನೆ ದೊರಕಿದೆ. 105 ಕೋ.ರೂ.ಗಳ ಯೋಜನೆಗೆ ಅನುಮತಿ ದೊರೆತಿದ್ದು, ಮೈಸೂರಿನಲ್ಲಿ ಈಗಾಗಲೇ ಕಾರ್ಯಾರಂಭವಾಗಿದೆ.
– ಎಂ.ವಿ. ಸುಬ್ಬರಾವ್‌, ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ಕೆಐಒಸಿಎಲ್‌

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.