ಕುಕ್ಕೆ : ಜನಸಂದಣಿ ಇರುವಾಗಲೇ 108 ನಾಪತ್ತೆ!


Team Udayavani, Dec 28, 2018, 11:00 AM IST

28-december-4.jpg

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾರ್ವಜನಿಕ ತುರ್ತು ಸೇವೆಗೆ ಒದಗಿಸಿರುವ ಸರಕಾರದ ತುರ್ತು ವಾಹನ 108 ಆರೋಗ್ಯ ಕವಚ ಆ್ಯಂಬುಲೆನ್ಸ್‌ ಒಂದು ಕಡೆ ಸೇವೆಗೆ ನಿಲ್ಲದೆ ವರ್ಷದಲ್ಲಿ ಹತ್ತಾರು ಭಾರಿ ಅಲೆದಾಟ ನಡೆಸುತ್ತಿದೆ.

ಸುಬ್ರಹ್ಮಣ್ಯ ಕೇಂದ್ರದಲ್ಲಿ ತುರ್ತು ಸೇವೆಗೆ ಲಭ್ಯವಿದ್ದ 108 ಆ್ಯಂಬುಲೆನ್ಸ್‌ ಕಳೆದ ಮೂರು ದಿನಗಳಿಂದ ಕುಕ್ಕೆಯಿಂದ ನಾಪತ್ತೆಯಾಗಿದೆ. ಸುಬ್ರಹ್ಮಣ್ಯ ಕೇಂದ್ರದ ಅಂಬುಲೆನ್ಸ್‌ ಅನ್ನು ಬೆಳ್ಳಾರೆ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಡಿ. 24ರಿಂದ ಕುಕ್ಕೆಯಲ್ಲಿ ತುರ್ತು ಸೇವೆಯ 108 ಆ್ಯಂಬುಲೆನ್ಸ್‌ ಸೇವೆಗೆ‌ ಲಭ್ಯವಿಲ್ಲ. ಸರಣಿ ರಜೆ ಹಿನ್ನೆಲೆಯಲ್ಲಿ ಕುಕ್ಕೆಯಲ್ಲಿ ಜನಸಂದಣಿ ಅಧಿಕವಿದ್ದ ವೇಳೆಯಲ್ಲಿಯೇ ಇಲ್ಲಿನ ತುರ್ತು ಸೇವೆಯ ವಾಹನವನ್ನು ಬೇರೆಡೆಗೆ ವರ್ಗಾಯಿಸಿರುವುದು ಸ್ಥಳಿಯರ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ. ಖಾಯಂ ಆಗಿ ಇಲ್ಲಿ ಇರಬೇಕಿದ್ದ 108 ಆರೋಗ್ಯ ಕವಚವನ್ನು ವರ್ಷದಲ್ಲಿ ಎಂಟು ಬಾರಿ ಬೇರೆಡೆಗೆ ಸ್ಥಳಾಂತರಿಸುವ ಮೂಲಕ ಇಲಾಖೆ ಇತಿಹಾಸ ನಿರ್ಮಿಸಲು ಹೊರಟಿದೆ.

ಸುಸಜ್ಜಿತ ಆಸ್ಪತ್ರೆ ಇಲ್ಲಿಲ್ಲ
ರಾಜ್ಯದಲ್ಲೆ ಅಗ್ರಸ್ಥಾನ ಹೊಂದಿದ ದೇವಸ್ಥಾನವಿರುವ ಧಾರ್ಮಿಕ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ. ತುರ್ತು ಸಂದರ್ಭ ಆರೋಗ್ಯ ಸೇವೆಗೆ ಯಾವುದೇ ವ್ಯವಸ್ಥೆಗಳಿಲ್ಲ. ಹೀಗಾಗಿ ಇಲ್ಲಿರುವ 108 ಆ್ಯಂಬುಲೆನ್ಸ್‌ ಸಾರ್ವಜನಿಕರಿಗೆ ತುರ್ತು ಸೇವೆಗೆ ಅತ್ಯಂತ ಉಪಕಾರಿಯಾಗಿದೆ. ತುರ್ತು ಸೇವೆಯ ಸಂದರ್ಭ ಈ ವಾಹನ ಕೈ ಹಿಡಿಯುತ್ತದೆ. ಆದರೆ ತಿಂಗಳಲ್ಲೆ ಎರಡು ಮೂರು ಬಾರಿ ಆ್ಯಂಬುಲೆನ್ಸ್‌ ಬೇರೆಡೆಗೆ ಕಳುಹಿಸಿಕೊಡುವುದರಿಂದ ತುರ್ತು ಸಂದರ್ಭ ಸಾರ್ವಜನಿಕರ ಸೇವೆಗೆ ತೊಂದರೆಯಾಗುತ್ತಿದೆ.

ಪದೇ ಪದೇ ಸ್ಥಳಾಂತರ ಯಾಕೆ?
ಮೂರು ತಿಂಗಳ ಹಿಂದೆ ಇಲ್ಲಿನ ಆ್ಯಂಬುಲೆನ್ಸ್‌ ಅನ್ನು ಬೆಳ್ಳಾರೆ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಈ ವೇಳೆ 15 ದಿನಗಳ ಕಾಲ ಆ್ಯಂಬುಲೆನ್ಸ್‌ ಲಭ್ಯವಿರಲಿಲ್ಲ. ಅದಾದ ಬಳಿಕ ಎರಡು ತಿಂಗಳ ಹಿಂದೆ ಆ್ಯಂಬುಲೆನ್ಸ್‌ ವಾಹನ ಕೆಟ್ಟಿತ್ತು. ಟಯರ್‌ ಸವೆದು ಗ್ಯಾರೆಜ್‌ ಸೇರಿತ್ತು. ಈ ಅವಧಿಯಲ್ಲೂ 15 ದಿನಗಳ ಕಾಲ ಆ್ಯಂಬುಲೆನ್ಸ್‌ ಸಾರ್ವಜನಿಕ ಸೇವೆಗೆ ದೊರಕಿರಲಿಲ್ಲ. ಬಳಿಕ ಹೊಸ ಟಯರ್‌ ಅಳವಡಿಸಿ ಸೇವೆಗೆ ದೊರಕಿತ್ತು. ಇದೀಗ ಮತ್ತೆ ಆ್ಯಂಬುಲೆನ್ಸ್‌ ಬೇರೆಡೆಗೆ ಕಳುಹಿಸಿಕೊಡಲಾಗಿದೆ.

ಸೂಕ್ತ ಸಮಯಕ್ಕೆ ಸಿಗದ ಸೇವೆ
ಸುಬ್ರಹ್ಮಣ್ಯ ಭಾಗದಲ್ಲಿ ತುರ್ತು ಸೇವೆಗೆ ಆ್ಯಂಬುಲೆನ್ಸ್‌ ಕೊರತೆ ಇದೆ. ತುರ್ತು ಘಟನೆಗಳು ಸಂಭವಿಸಿದಾಗ ಸುಳ್ಯ, ಕಡಬ ಅಥವಾ ಬೆಳ್ಳಾರೆ ಕೇಂದ್ರದಿಂದ ಆ್ಯಂಬುಲೆನ್ಸ್‌ ತರಿಸಿಕೊಳ್ಳಲಾಗುತ್ತಿದೆ. ಈ ಅವಧಿಯಲ್ಲಿ ಬೇಕೆನಿಸಿದ ಸಮಯಕ್ಕೆ ಸೇವೆ ದೊರಕುತ್ತಿಲ್ಲ. ಆರೋಗ್ಯಕ್ಕೆ ಒಳಗಾದ ವ್ಯಕ್ತಿಯನ್ನು ಹೆಚ್ಚು ಸಮಯ ಇರಿಸಿಕೊಳ್ಳಲು ಸುಬ್ರಹ್ಮಣ್ಯ ಆಸುಪಾಸು ಸರಿಯಾದ ಆಸ್ಪತ್ರೆಯೂ ಇಲ್ಲ. ರಜೆ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಕ್ಷೇತ್ರದಲ್ಲಿ ಮೂರ್‍ನಾಲ್ಕು ದಿನಗಳಿಂದ ಇದ್ದಾರೆ. ಕ್ಷೇತ್ರಕ್ಕೆ ಬರುವ ಭಕ್ತರ ಪೈಕಿ ವಯಸ್ಸಿನವರು, ವಿವಿಧ ಆರೋಗ್ಯ ಸಮಸ್ಯೆಗೆ ಒಳಗಾದವರು ಇರುತ್ತಾರೆ. ಭಕ್ತರು ಇಲ್ಲಿ ನಾನಾ ಆರೋಗ್ಯ ಸಮಸ್ಯೆಗಳಿಗೆ ಒಳಗಾದ ವೇಳೆ ತುರ್ತು ಸೇವೆಗೆ 108 ಸಿಗದೆ ಸಂಕಷ್ಟಕ್ಕೀಡಾಗುತ್ತಾರೆ. ದೇವಸ್ಥಾನಕ್ಕೆ ದಾನಿಯೊಬ್ಬರು ಆ್ಯಂಬುಲೆನ್ಸ್‌ ನೀಡಿದ್ದರೂ, ಅದು ಕೂಡ ಸೂಕ್ತ ನಿರ್ವಹಣೆ ಇಲ್ಲದೆ ಸೇವೆಗೆ ಸಿಗುತ್ತಿಲ್ಲ. 108 ಆ್ಯಂಬುಲೆನ್ಸ್ ನ ನಿರ್ವಹಣೆಯ ಜವಾಬ್ದಾರಿಯನ್ನು ಜಿವಿಕೆ ಸಂಸ್ಥೆ ವಹಿಸಿಕೊಂಡಿದೆ. ಇತ್ತೀಚಿನ ವರ್ಷಗಳಲ್ಲಿ 108 ಆ್ಯಂಬುಲೆನ್ಸ್‌ ನಿರ್ವಹಣೆ ಕೊರತೆಯಿಂದ ಜನರಿಗೆ ಸೂಕ್ತವಾದ ಸಂದರ್ಭದಲ್ಲಿ ಸೇವೆಗೆ ಲಭಿಸುತ್ತಿಲ್ಲ. 

ಶೀಘ್ರ ಒದಗಿಸುತ್ತೇವೆ
ಆ್ಯಂಬುಲೆನ್ಸ್‌ ಕೊರತೆ ಇದೆ. ಹೀಗಾಗಿ ಕುಕ್ಕೆಯ ಆ್ಯಂಬುಲೆನ್ಸ್‌ ಅನ್ನು ತಾತ್ಕಾಲಿಕವಾಗಿ ಬೇರೆಡೆಗೆ ವರ್ಗಾಯಿಸಿದ್ದೇವೆ. ಮೂರು ದಿನಗಳ ಒಳಗೆ ಕುಕ್ಕೆಗೆ ಆ್ಯಂಬುಲೆನ್ಸ್‌ ಮರಳಿ ಒದಗಿಸುತ್ತೇವೆ.
ಮಹಾಬಲ,
  ಮೇಲ್ವಿಚಾರಕ, ಜಿವಿಕೆ ಸಂಸ್ಥೆ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.