ಕುಕ್ಕೆ: ಆಮೆಗತಿಯಲ್ಲಿ ಅಭಿವೃದ್ಧಿ ಕಾಮಗಾರಿ

ಭಕ್ತರು, ನಾಗರಿಕರು, ವ್ಯಾಪಾರಸ್ಥರು, ದೇಗುಲಕ್ಕೆ ಸಮಸ್ಯೆ

Team Udayavani, Oct 23, 2019, 5:21 AM IST

t-11

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ನಗರದಲ್ಲಿ ಸಮಗ್ರ ಅಭಿವೃದ್ಧಿ ಯೋಜನೆಯಡಿ 180 ಕೋಟಿ ರೂ. ವೆಚ್ಚದ ಮಾಸ್ಟರ್‌ ಪ್ಲಾನ್‌ ಯೋಜನೆಯ 2ನೇ ಹಂತದ 68 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಹಾಗೂ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ನಿಧಾನಗತಿ ಹಾಗೂ ವಿಳಂಬ ಕಾಮಗಾರಿಯ ಪರಿಣಾಮ ಭಕ್ತರು, ವ್ಯಾಪಾರಸ್ಥರು, ನಾಗರಿಕರು, ಸಾರ್ವಜನಿಕರಿಗೆ ಭಾರೀ ಸಮಸ್ಯೆಯಾಗುತ್ತಿದೆ.

ಕುಮಾರಧಾರಾ-ಕಾಶಿಕಟ್ಟೆ ನಡುವೆ ಚತುಷ್ಪಥ ರಸ್ತೆ ವಿಸ್ತರಣೆ ಮತ್ತು ಕಾಶಿಕಟ್ಟೆ-ನೂಚಿಲ, ಕಾರ್ತಿಕೇಯ ವಸತಿಗೃಹ – ಆದಿಸುಬ್ರಹ್ಮಣ್ಯ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಕಳೆದ ಒಂದು ವರ್ಷದಿಂದ ನಿಧಾನಗತಿಯಲ್ಲಿ ನಡೆಯುತ್ತಿವೆ. ಕಾಮಗಾರಿಗೆ ನಗರದ ಕುಡಿಯುವ ನೀರು, ಒಳಚರಂಡಿ, ಬಿಎಸ್ಸೆನ್ನೆಲ್‌ ಭೂಗತ ಸಂಪರ್ಕ ಕೇಬಲ್‌ಗ‌ಳಿಗೆ ಹಾನಿಯಾಗಿ ಸಮಸ್ಯೆಯಾಗಿದೆ. ದಾರಿದೀಪವೂ ಸರಿಯಾಗಿಲ್ಲದೆ ಕತ್ತಲಲ್ಲಿ ಕಳೆಯುವಂತಾಗಿದೆ.

ಕುಮಾರಧಾರಾ-ಕಾಶಿಕಟ್ಟೆ ರಸ್ತೆಯ ಕಾಶಿಕಟ್ಟೆ, ಮೆಸ್ಕಾಂ ಬಳಿ ಬಿಎಸ್ಸೆನ್ನೆಲ್‌ನ ಕೋಟ್ಯಂತರ ರೂ. ವೆಚ್ಚದ ಭೂಗತ ಕೇಬಲ್‌ಗ‌ಳು ಆಹುತಿಯಾಗಿವೆ. ಕೇಬಲ್‌ಗ‌ಳು ತುಂಡಾಗಿ ನಷ್ಟ ಉಂಟಾಗಿದೆ. ಸಂಪರ್ಕ ಕಡಿತದ ಪರಿಣಾಮ ನಗರದ 7 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನೆಟ್‌ವರ್ಕ್‌ ಸೇವೆಗಳು ಸ್ಥಗಿತಗೊಂಡಿವೆ. ಫೈಬರ್‌ ಟು ಹೋಮ್‌ ಸೇವೆಗಳು ಕಾರ್ಯಾಚರಿಸುತ್ತಿಲ್ಲ. ಆರ್ಥಿಕ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳಲ್ಲಿ, ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳು ನಡೆಯುತ್ತಿಲ್ಲ. ಸಾರ್ವಜನಿಕರು, ಉದ್ದಿಮೆದಾರರು, ಕ್ಷೇತ್ರದ ಅಸಂಖ್ಯಾತ ವ್ಯಾಪಾರಸ್ಥರಿಗೆ ವ್ಯಾಪಾರ ವಹಿವಾಟಿನಲ್ಲಿ ಏರುಪೇರಾಗಿದೆ.

ಕಚೇರಿ ಕೆಲಸಗಳು ಬಾಕಿ
ದೇವಸ್ಥಾನದ 12 ಸ್ಥಿರ ದೂರವಾಣಿಗಳು, ಬ್ರಾಡ್‌ಬ್ಯಾಂಡ್‌ ಸೇವೆಗಳು ಕಡಿತಗೊಂಡಿವೆ. ಭಕ್ತರಿಗೆ ದೇಗುಲ ಸಂಪರ್ಕವೂ ಸಾಧ್ಯವಾಗುತ್ತಿಲ್ಲ. ಕಚೇರಿ ಮಾಹಿತಿಗಳನ್ನು ಕಳುಹಿಸಲು, ಪಡೆಯಲು ಆಗುತ್ತಿಲ್ಲ. ಭಕ್ತರಿಗೆ ಸರ್ಪಸಂಸ್ಕಾರ ಸಹಿತ ಪ್ರಮುಖ ಸೇವೆ, ಕೊಠಡಿ ಕಾಯ್ದಿರಿಸುವಿಕೆ ಸಾಧ್ಯವಾಗದೆ ದೇಗುಲದ ಆದಾಯದ ಮೇಲೂ ಪರಿಣಾಮ ಬೀರುತ್ತಿದೆ.

ಸೇವೆಗಳೆಲ್ಲವೂ ಸ್ಥಗಿತ
ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಮತ್ತು ಮಠ ಇವೆರಡು ಪ್ರಮುಖ ಕ್ಷೇತ್ರಗಳು ಇಲ್ಲಿವೆ. ಬ್ಯಾಂಕಿಂಗ್‌, ಬ್ರಾಂಡ್‌ಬ್ಯಾಂಡ್‌ ಎಟಿಎಂ ಮೊದಲಾದ ಸೇವೆಗಳು ಸಿಗುತ್ತಿಲ್ಲ. ದೂರದ ಊರುಗಳಿಂದ ಬರುವವರು, ಸ್ಥಳೀಯರು, ಸಂಘ ಸಂಸ್ಥೆಯವರು, ಸರಕಾರಿ ನೌಕರರು ಸರಕಾರಿ ಸ್ವಾಮ್ಯದ ಮೊಬೈಲ್‌ ಸೇವೆಯನ್ನು ಅವಲಂಬಿಸಿರುತ್ತಾರೆ. ಅವರೆಲ್ಲ ಇಲ್ಲಿ ತೊಂದರೆಗೆ ಒಳಗಾಗುತ್ತಿದ್ದಾರೆ. ಒಎಫ್ಸಿ ಸಂಪರ್ಕ ಹೊಂದಿರುವ ಇತರೆ 23 ಮೊಬೈಲ್‌ ಟವರ್‌ಗಳು ಇಲ್ಲಿ ಏಕಕಾಲದಲ್ಲಿ ಸ್ಥಗಿತವಾಗುತ್ತಿವೆ. ವಿದ್ಯುತ್ತಿದ್ದರೂ ಸಿಗ್ನಲ್‌ ಇರುವುದಿಲ್ಲ. 23 ಕಡೆಗಳ ಗ್ರಾಮಗಳಲ್ಲಿ ಪಂಚಾಯತ್‌ ಕಚೇರಿ ಕೆಲಸ – ಕಾರ್ಯಗಳು ಸೂಕ್ತ ಸಮಯದಲ್ಲಿ ನಡೆಯುತ್ತಿಲ್ಲ. ಸೇವೆಗಳು ವ್ಯತ್ಯಯವಾಗುತ್ತಿವೆ.

ನೀರು ಪೋಲು
ನಗರಕ್ಕೆ ಕುಡಿಯುವ ನೀರು ಒದಗಿಸುವ ಮುಖ್ಯ ಪೈಪ್‌ ಅಲ್ಲಲ್ಲಿ ಒಡೆದಿರುವುದರಿಂದ ನಗರದ ಮುಖ್ಯ ಪೇಟೆ ಸಹಿತ ಎಲ್ಲ ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಎರಡು ತಿಂಗಳಿನಿಂದ ಈ ಸಮಸ್ಯೆ ಆಗುತ್ತಿದೆ. ಶಿಕ್ಷಣ ಸಂಸ್ಥೆಗಳಿಗೂ ನೀರಿನ ಕೊರತೆ ತಟ್ಟಿದೆ. ಚರಂಡಿ ನೀರು ಸರಿಯಾಗಿ ಹರಿಯದೇ ಚರಂಡಿಯಲ್ಲಿ ನಿಂತು ರಸ್ತೆ ಮೇಲೆ ಹರಿಯುತ್ತಿವೆ. ಕಾಂಕ್ರೀಟು ರಸ್ತೆಯಲ್ಲಿ ಅಂಚಿಗೆ ಮಣ್ಣು ತುಂಬದೆ ಸಂಚಾರದಲ್ಲೂ ಸಮಸ್ಯೆಯಾಗಿದೆ.

ಸಭೆ ಕರೆಯಲು ಆಗ್ರಹ
ರಸ್ತೆ ಕಾಮಗಾರಿ ಕಳಪೆಯಾಗಿದೆ. ಮಾಸ್ಟರ್‌ ಪ್ಲಾನ್‌ ಅಂದಾಜು ಪಟ್ಟಿಯಂತೆ ಕಾಮಗಾರಿ ನಡೆಸಿಲ್ಲ. ರಸ್ತೆ ವಿಸ್ತರಣೆಯಲ್ಲಿ ಖಾಸಗಿ ಭೂಮಿಗೆ ಪರಿಹಾರ ಮೊತ್ತದ ಹಣ ನೀಡಿದ್ದರೂ ಕೆಲವೆಡೆ ಒತ್ತುವರಿ ತೆರವು ನಡೆಸಿಲ್ಲ. ಅವೈಜ್ಞಾನಿಕ ಮತ್ತು ಬೇಕಾಬಿಟ್ಟಿ ಮಾಸ್ಟರ್‌ ಪ್ಲಾನ್‌ ಕಾಮಗಾರಿಯಿಂದ ಸಾರ್ವಜನಿಕರು, ಭಕ್ತರು ಪರದಾಡುವಂತಾಗಿದೆ. ಸಮಿತಿ ಸಭೆ ಕರೆಯದೇ ವರ್ಷಗಳೇ ಕಳೆದಿವೆ. ಮೂಲ ಸ್ವರೂಪ ಬದಲಿಸಿ ಕಾಮಗಾರಿ ನಡೆಸುತ್ತಿರುವುದೆ ಇಷ್ಟೆಲ್ಲ ಅವಾಂತರಕ್ಕೆ ಕಾರಣ. ಶೀಘ್ರವೇ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಶಾಸಕರು, ಕಮಿಷನರ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ಸುಬ್ರಹ್ಮಣ್ಯದಲ್ಲೇ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಗ್ರಾ.ಪಂ. ಸದಸ್ಯ ಹರೀಶ್‌ ಇಂಜಾಡಿ ಆಗ್ರಹಿಸಿದ್ದಾರೆ.

ಸಮೀಪಿಸುತ್ತಿದೆ ಚಂಪಾ ಷಷ್ಠಿ
ಕೆಟ್ಟು ಹೋದ ಬಿಎಸ್ಸೆನ್ನೆಲ್‌ ಹಾಗೂ ನೀರು ಸರಬರಾಜು ಕೊಳವೆಗಳ ಮರುಜೋಡಣೆ ಕಾರ್ಯ ಆರಂಭಗೊಂಡಿದೆ. ಸ್ಥಿರ ದೂರವಾಣಿ ವ್ಯವಸ್ಥೆ ಮರಳಿ ಯಥಾಸ್ಥಿತಿಗೆ ಬರಲು ಇನ್ನೂ ಕೆಲವು ದಿನಗಳು ಬೇಕು. ಅಲ್ಲಿಯ ತನಕ ಪರ್ಯಾಯ ವ್ಯವಸ್ಥೆ ಕಡೆ ಗಮನ ಹರಿಸಬೇಕಿದೆ. ಕಾಮಗಾರಿ ಯೋಜನೆಯ ಅವಧಿ 18 ತಿಂಗಳು. 10 ತಿಂಗಳಾದರೂ ಕಾಮಾಗಾರಿ ಶೇ. 25 ಕೂಡ ಪ್ರಗತಿ ಸಾಧಿಸಿಲ್ಲ. ಈಗ ನಡೆಯುತ್ತಿರುವ ಕಾಮಗಾರಿ ವೇಗ ಗಮನಿಸಿದರೆ ಇನ್ನು ಈ ಕಾಮಗಾರಿ ಪೂರ್ಣಗೊಳ್ಳಲು 3 ವರ್ಷ ಹಿಡಿಯಬಹುದು. ಡಿಸೆಂಬರ್‌ನಲ್ಲಿ ಚಂಪಾ ಷಷ್ಠಿಯೂ ನಡೆಯಲಿದ್ದು, ಈ ಸಂದರ್ಭ ಸಮಸ್ಯೆಯಾಗುವ ಸಾಧ್ಯತೆ ಇದೆ.

ಇಲಾಖೆ ಸಹಕರಿಸುತ್ತಿಲ್ಲ
ಕಾಮಗಾರಿ ಮುಂಚಿತ ಭೂಗತ ಕೇಬಲ್‌ ಸ್ಥಳಾಂತರಿಸುವಂತೆ ದೂರಸಂಪರ್ಕ ಇಲಾಖೆಯ ಬಿಎಸ್ಸೆನ್ನೆಲ್‌ಗೆ ಸೂಚಿಸಲಾಗಿದೆ. ಕಾಮಗಾರಿ ನಡೆಯವ ಸ್ಥಳದಲ್ಲಿ ಸಿಬಂದಿ ಇಲ್ಲದೆ ಇರುವುದು ಸಮಸ್ಯೆಗೆ ಕಾರಣ. ನೀರಿನ ವಿಚಾರದಲ್ಲೂ ಇದೇ ಆಗಿದೆ.
– ಸುನೀಲ್‌, ಕಾಮಗಾರಿ ಗುತ್ತಿಗೆ ಮೇಲ್ವಿಚಾರಕ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.