ಕುಕ್ಕೆ: ಕಿದು ತೆಂಗು ಅಭಿವೃದ್ಧಿ ಸಂಸ್ಥೆ ಆಂಧ್ರಕ್ಕೆ  ಸ್ಥಳಾಂತರ


Team Udayavani, Jul 20, 2018, 10:03 AM IST

20-july-1.jpg

ಸುಬ್ರಹ್ಮಣ್ಯ: ದಕ್ಷಿಣ ಏಷ್ಯಾದಲ್ಲಿ ಅಗ್ರಸ್ಥಾನ ಪಡೆದ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕಿದುವಿನ ಅಂತಾರಾಷ್ಟ್ರೀಯ ತೆಂಗು ಅಭಿವೃದ್ಧಿ ಸಂಸ್ಥೆ ಸ್ಥಳಾಂತರ ಭೀತಿ ಎದುರಿಸುತ್ತಿದೆ. ಈ ಸಂಶೋಧನ ಕೇಂದ್ರ ವನ್ನು ಆಂಧ್ರಕ್ಕೆ ಸ್ಥಳಾಂತರಿಸುವ ಹುನ್ನಾರ ಉನ್ನತ ಮಟ್ಟದಲ್ಲಿ ಗುಪ್ತವಾಗಿ ನಡೆಯುತ್ತಿದೆ. ಹೀಗಾಗಿ, ಸಂಶೋಧನ ಕೇಂದ್ರವೊಂದು ರಾಜ್ಯದ ಕೈತಪ್ಪುವ ಸಾಧ್ಯತೆ ಇದೆ.

ಕೇಂದ್ರ ಸರಕಾರದ ಕೃಷಿ ಮಂತ್ರಾಲಯದ ಅಧೀನದಲ್ಲಿ ಇಂಡಿಯನ್‌ ಕೌನ್ಸಿಲ್‌ ಅಗ್ರಿಕಲ್ಚರ್‌ ರಿಸರ್ಚ್‌ ಎಂಬ ಸಂಸ್ಥೆ ಕಾರ್ಯಾಚರಿಸುತ್ತಿದೆ. ಇದರ ಕೆಳಗೆ ದೇಶದಲ್ಲಿ 140 ಅಂಗಸಂಸ್ಥೆಗಳು ಕೃಷಿ ಸಂಶೋಧನೆಯಲ್ಲಿ ತೊಡಗಿವೆ. ಈ ಪೈಕಿ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನ ಸಂಸ್ಥೆಯೂ ಒಂದು. ಇದರ ಮುಖ್ಯ ಕಚೇರಿ ಕೇರಳ ರಾಜ್ಯದ ಕಾಸರಗೋಡಿನ ಕೂಡ್ಲು ಎಂಬಲ್ಲಿದೆ. ಇಲ್ಲಿ ತೋಟದ ಬೆಳೆಗಳಾದ ಅಡಿಕೆ, ತೆಂಗು ಕೊಕ್ಕೊ ಬಗ್ಗೆ ಸಂಶೋಧನೆ ಮತ್ತು ಉತ್ತಮ ತಳಿಗಳ ಸಂರಕ್ಷಣೆ ಮಾಡಲಾಗುತ್ತಿದೆ. ರೈತರಿಗೆ ಉತ್ತಮ ತಳಿಗಳ ಬೀಜ ಮತ್ತು ಸಸಿಗಳನ್ನು ವಿತರಿಸಲಾಗುತ್ತದೆ.

1972ರಲ್ಲಿ ಪುತ್ತೂರು ತಾಲೂಕಿನ ಬಿಳಿನೆಲೆ ಗ್ರಾಮದ ಕಿದುವಿನ ರಕ್ಷಿತಾರಣ್ಯದಲ್ಲಿ 300 ಎಕರೆ ಭೂಮಿಯನ್ನು ಅರಣ್ಯ ಇಲಾಖೆಯಿಂದ 30 ವರ್ಷಗಳ ಅವಧಿ ಲೀಸಿಗೆ ಪಡೆದು ಅಡಿಕೆ, ತೆಂಗು ಮತ್ತು ಕೊಕ್ಕೊ ಗಿಡಗಳನ್ನು ಬೆಳೆಸಿ ಸಂಶೋಧನ ಉಪಕೇಂದ್ರವನ್ನು ಸ್ಥಾಪಿಸಿದೆ. ಕೃಷಿಗೆ ಸಂಬಂಧಿಸಿ ವಿಜ್ಞಾನಿಗಳ ಸಂಶೋಧನೆಗೆ ಮಾಹಿತಿ ಹಾಗೂ ಕೃಷಿಕರಿಗೆ ಉತ್ತಮ ತಳಿಗಳನ್ನು ಒದಗಿಸಲಾಗುತ್ತಿದೆ.

140 ತಳಿ ಸಂರಕ್ಷಣೆ
ವಿಶ್ವದ ಐದು ತೆಂಗು ವಂಶಾಭಿವೃದ್ಧಿ ಬ್ಯಾಂಕ್‌ಗಳಲ್ಲಿ ಇದು ಸ್ಥಾನ ಪಡೆದಿದೆ. ಇಲ್ಲಿ ಸಂಕರ ತಳಿಗಳನ್ನು ಅಭಿವೃದ್ಧಿಪಡಿಸಿ ಸಸಿಗಳನ್ನು ಮಿತದರದಲ್ಲಿ ಒದಗಿಸುವುದರಿಂದ ದೇಶಾದ್ಯಂತ ಬೇಡಿಕೆಯಿದೆ. ಬೀಜ ಮತ್ತು ಗಿಡಗಳಿಂದಲೇ ವಾರ್ಷಿಕ 1.50 ಕೋಟಿ ರೂ. ಆದಾಯ ಬರುತ್ತಿದೆ. 15 ವರ್ಷಗಳ ಹಿಂದೆ ತೆಂಗಿನ 140 ಉತ್ತಮ ತಳಿಗಳನ್ನು ತಂದು, ಬೆಳೆಸಿ, ತೆಂಗಿನ ತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಮಾಡಲಾಗಿದೆ.ಇಲ್ಲಿ ಬೆಳೆಯುವ ಮಂಗಳ, ಮೋಹಿತ್‌ನಗರ, ಸುಮಂಗಲ, ಸ್ವರ್ಣಮಂಗಲ ಇತ್ಯಾದಿ ಅಡಿಕೆ ಬೀಜ ಮತ್ತು ಸಸಿಗಳಿಗೆ ಅಪಾರ ಬೇಡಿಕೆಯಿದೆ. ಕೇಂದ್ರದ 300 ಎಕ್ರೆ ಭೂಮಿಯ ಲೀಸ್‌ ಅವಧಿ 2000ನೇ ಇಸವಿಗೆ ಮುಗಿದಿದೆ. ಸುಪ್ರೀಂ ಕೋರ್ಟ್‌ನ ಆದೇಶದಂತೆ ಅರಣ್ಯ ಇಲಾಖೆ ಭೂಮಿ ಮರಳಿ ಪಡೆಯಲು ಮುಂದಾಗಿತ್ತು. ಜಾಗ ಮರಳಿ ನೀಡುವುದು ಅಥವಾ ಬದಲಾಗಿ 300 ಎಕರೆ ಖಾಲಿ ಜಾಗದಲ್ಲಿ ಅರಣ್ಯ ಬೆಳೆಸಲು ತಗಲುವ 12 ಕೋಟಿ ರೂ.ಗಳನ್ನು ಭರಿಸಿ ಮತ್ತೆ 30 ವರ್ಷಕ್ಕೆ ಲೀಸಿಗೆ ಪಡೆಯಲು ಅವಕಾಶ ಕಲ್ಪಿಸಿತ್ತು.

ಪಾವನ ಭೂಮಿ
ಕುಕ್ಕೆ ಸುಬ್ರಹ್ಮಣ್ಯ ಪವಿತ್ರ ಕ್ಷೇತ್ರ. ಪಕ್ಕದ ಕಿದು ಕೃಷಿಕರ ಪಾಲಿಗೆ ಪಾವನ ಭೂಮಿ. ಸುಮಾರು 18,000 ತೆಂಗು, 15,000 ಅಡಿಕೆ, 5,000 ಕೊಕ್ಕೊ ಸಸಿಗಳು 300 ಎಕರೆ ಭೂಮಿಯಲ್ಲಿ ಫಲಭರಿತವಾಗಿ ಬೆಳೆದು ನಿಂತಿವೆ. ಕಡಬ-ಸುಬ್ರಹ್ಮಣ್ಯ ರಾ.ಹೆ. ಬದಿಯಲ್ಲೆ ಈ ತಾಣವಿದೆ. ಪ್ರವಾಸಿಗರ, ಕೃಷಿಕರ ಸೆಳೆಯುವ ಈ ಕೇಂದ್ರದಲ್ಲಿ ಖಾಯಂ ಹಾಗೂ ಹೊರಗುತ್ತಿಗೆಯಲ್ಲಿ 40 ಮಂದಿ ಕೆಲಸಕ್ಕಿದ್ದಾರೆ. ಈ ಕೇಂದ್ರವನ್ನು ಕೃಷಿಕರಿಗಾಗಿ ಉಳಿಸಲು ಗ್ರಾಮಸ್ಥರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪ್ರಬಲ ಹೋರಾಟ ನಡೆಸಬೇಕಿದೆ.

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.